‘ಜೆಡಿಎಸ್ ಮುಖಂಡರು, ಜಿಲ್ಲೆಗೆ ₹ 8 ಸಾವಿರ ಕೋಟಿ ಕೊಟ್ಟಿದ್ದೇವೆ ಎನ್ನುತ್ತಿದ್ದಾರೆ. ಎಲ್ಲಿ ಟೆಂಡರ್ ಆಗಿದೆ, ಯಾವ ಕೆಲಸದ ಕಾಮಗಾರಿ ಆರಂಭವಾಗಿದೆ ಎಂಬ ಪ್ರಶ್ನೆಗೆ ಉತ್ತರ ಕೊಡಬೇಕು. ತಪ್ಪು ಮಾಹಿತಿ ನೀಡಿ ಜನರ ಕಣ್ಣಿಗೆ ಮಣ್ಣು ಎರಚಲಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಉಪ ಚುನಾವಣೆ ನಡೆಯುವುದಕ್ಕೂ ಮೊದಲು ಜೆಡಿಎಸ್ ಮುಖಂಡರು ಈ ಬಗ್ಗೆ ಉತ್ತರ ನೀಡಬೇಕು’ ಒತ್ತಾಯಿಸಿದರು.