ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ದಿನ ಅನುಕಂಪ ಗಿಟ್ಟಿಸಲು ಅಸಾಧ್ಯ: ನಿಖಿಲ್ ಕುಮಾರಸ್ವಾಮಿ

Last Updated 28 ಮಾರ್ಚ್ 2022, 2:22 IST
ಅಕ್ಷರ ಗಾತ್ರ

ಮದ್ದೂರು: ‘ಮಂಡ್ಯ ಜಿಲ್ಲೆಯಲ್ಲಿರುವ ನಮ್ಮ ಪಕ್ಷದ ಶಾಸಕರ ವಿರುದ್ಧ ವಿನಾಕಾರಣ, ಕಾಲು ಕೆರೆದುಕೊಂಡು ಮಾತನಾಡಿ ಮತ್ತೆ ಅನುಕಂಪ ಗಿಟ್ಟಿಸಬಹುದು ಎಂದು ಭಾವಿಸಿದ್ದರೆ ಅದು ಪ್ರತಿ ದಿನ ಅಸಾಧ್ಯ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂಸದೆ ಸುಮಲತಾ ಅಂಬರೀಶ್‌ ವಿರುದ್ಧ ಕಿಡಿಕಾರಿದರು.

ಪಟ್ಟಣದಲ್ಲಿರುವ ಶಾಸಕ ಡಿ.ಸಿ.ತಮ್ಮಣ್ಣ ಅವರ ಮನೆಗೆ ಭಾನುವಾರ ಭೇಟಿ ನೀಡಿ ಶಾಸಕರಿಂದ ಅಭಿನಂದನೆ ಸ್ವೀಕರಿಸಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.

‘ಅಪರೂಪಕ್ಕೊಮ್ಮೆ ಜಿಲ್ಲೆಗೆ ಬರುವ ಸಂಸದರು ಬಂದಾಗಲೆಲ್ಲ ಶಾಸಕರನ್ನು ಕೆಣಕುವುದು, ಪ್ರಶ್ನಿಸುತ್ತಾರೆ. ಶಾಸಕರನ್ನು ಪ್ರಶ್ನಿಸಲು ಅವರು ಯಾರು? ಶಾಸಕರನ್ನು ಜನರು ಆರಿಸಿ ಕಳುಹಿಸಿರುವ ಜನರೇ ಅವರನ್ನು ಪ್ರಶ್ನೆ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT