ಸಂಸ್ಕೃತಿ, ಶಿಕ್ಷಣ, ಕೈಗಾರಿಗೆ, ನೀರಾವರಿ ಕ್ಷೇತ್ರಕ್ಕೆ ನಾಲ್ವಡಿ ಅವರು ಪಾರ ಕೊಡುಗೆ ನೀಡಿದ್ದಾರೆ. ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಯನ್ನು ನಾಡಿಗೆ ಪರಿಚಯಿಸಿದ್ದಾರೆ. ಮೈಸೂರು ಸಂಸ್ಥಾನಕ್ಕಷ್ಟೇ ಸೀಮಿತವಾಗಿದ್ದ ಪ್ರಜಾಪ್ರತಿನಿಧಿ ಸಭೆಯನ್ನು ಜನಪ್ರತಿನಿಧಿ ಸಭೆಯಾಗಿ ರೂಪ ಕೊಟ್ಟಿದ್ದಾರೆ. ಕೆಆರ್ಎಸ್ ಜಲಾಶಯ, ಶಿವನಸಮುದ್ರ ಜಲವಿದ್ಯುತ್ ಉತ್ಪಾದನೆ ಕೇಂದ್ರ ಸ್ಥಾಪನೆಯ ಮೂಲಕ ಅಪಾರ ಸಾಧನೆ ಮಾಡಿದ್ದಾರೆ.