‘ನಾಟಿ ತಳಿಯಲ್ಲಿ ಅತಿ ಹೆಚ್ಚು ಪೋಷಕಾಂಶಗಳಿವೆ. ಹೈಬ್ರೀಡ್ ತಳಿಗಳ ಫಸಲಿನಲ್ಲಿ ಇಳುವರಿ ಪ್ರಮಾಣ ಹೆಚ್ಚಿರುತ್ತದೆ, ಆದರೆ ಗುಣಮಟ್ಟ ಇರುವುದಿಲ್ಲ. ಈ ಕುರಿತು ರೈತರಲ್ಲಿ ಅರಿವು ಮೂಡಿಸುತ್ತಿದ್ದೇನೆ. ನಮ್ಮ ಸಂಗ್ರಹಾಲಯದ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟರ್ನಲ್ಲಿ ಸಂದೇಶ ಪ್ರಕಟಿಸಿರುವುದು ಸಂತಸ ತಂದಿದೆ’ ಎಂದು ಶಿವಳ್ಳಿಯ ಭತ್ತದ ಬೋರೇಗೌಡ ಹೇಳಿದರು.