<p><strong>ಮಂಡ್ಯ</strong>: ‘ಕೃಷಿ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಆದಾಯವಿಲ್ಲ ಎಂಬ ಕಾರಣಕ್ಕೆ ನಿರುತ್ಸಾಹ ಹೊಂದುವ ಅಥವಾ ಭೂಮಿಯನ್ನು ಮಾರಿಕೊಳ್ಳಲು ರೈತರು ಮುಂದಾಗಬಾರದು. ಇನ್ನು 10 ವರ್ಷಗಳಲ್ಲಿ ವ್ಯವಸಾಯಕ್ಕೆ ಎಲ್ಲಿಲ್ಲದ ಬೇಡಿಕೆ ಬರಲಿದೆ’ ಎಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಆಶಾಭಾವ ವ್ಯಕ್ತಪಡಿಸಿದರು.</p>.<p>ಬೇವಿನಹಳ್ಳಿ ಹಾಗೂ ಕೊತ್ತತ್ತಿ ಗ್ರಾಮಸ್ಥರು ತಾಲ್ಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ನೇತೃತ್ವದಲ್ಲಿ ಸೋಮವಾರ ನಡೆದ ರಾಶಿಪೂಜೆ, ಭೂಮಿಪೂಜೆ, ಗೋಪೂಜೆ ಹಾಗೂ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಇಂದಿನ ಎಐ ಯುಗದಲ್ಲಿ ಎಲ್ಲ ಬಗೆಯ ತಾಂತ್ರಿಕ ಉದ್ಯೋಗವನ್ನು ಕೃತಕ ಬುದ್ಧಿಮತ್ತೆ ಕಸಿದುಕೊಳ್ಳುತ್ತಿದೆ. ಇದರಿಂದಾಗಿ ಸಾಫ್ಟ್ವೇರ್ ಕ್ಷೇತ್ರದಲ್ಲೂ ನಿರುದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ. ಮುಂದಿನ 10 ವರ್ಷಗಳಲ್ಲಿ ಭೂಮಿ ಉಳ್ಳವರಿಗೆ ಹೆಚ್ಚಿನ ಬೇಡಿಕೆ ಬರಲಿದ್ದು, ಅಲ್ಲಿಯವರೆಗೆ ರೈತರು ತಮಗಾಗುವ ನಷ್ಟ ಮತ್ತು ಕಷ್ಟಗಳನ್ನು ಸಹಿಸಿಕೊಂಡು ಕೃಷಿಯನ್ನು ಮುಂದುವರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ಮಾತನಾಡಿ, ‘ಆದಿಚುಂಚನಗಿರಿ ಮಠಕ್ಕೆ ರೈತರು ಪ್ರತಿ ವರ್ಷ ತಾವು ಬೆಳೆದ ಒಂದು ಭಾಗದ ಧವಸ-ಧಾನ್ಯವನ್ನು ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಬೇಲೂರು ಮತ್ತು ಕೊತ್ತತ್ತಿ ಗ್ರಾಮಸ್ಥರು ರಾಶಿಪೂಜೆ ನಡೆಸಿ ಶ್ರೀಕ್ಷೇತ್ರಕ್ಕೆ ದವಸ ಧಾನ್ಯ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ವಿವರಿಸಿದರು.</p>.<p>ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಮಂಡ್ಯದ ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀಶೈಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭೂನಾಥಸ್ವಾಮೀಜಿ, ಸತ್ಕೀರ್ತಿನಾಥ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರೇಶ್, ಮುಖಂಡರಾದ ಸಿದ್ದರಾಮಯ್ಯ, ಅಶೋಕ್ ಜಯರಾಂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಕೃಷಿ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಆದಾಯವಿಲ್ಲ ಎಂಬ ಕಾರಣಕ್ಕೆ ನಿರುತ್ಸಾಹ ಹೊಂದುವ ಅಥವಾ ಭೂಮಿಯನ್ನು ಮಾರಿಕೊಳ್ಳಲು ರೈತರು ಮುಂದಾಗಬಾರದು. ಇನ್ನು 10 ವರ್ಷಗಳಲ್ಲಿ ವ್ಯವಸಾಯಕ್ಕೆ ಎಲ್ಲಿಲ್ಲದ ಬೇಡಿಕೆ ಬರಲಿದೆ’ ಎಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಆಶಾಭಾವ ವ್ಯಕ್ತಪಡಿಸಿದರು.</p>.<p>ಬೇವಿನಹಳ್ಳಿ ಹಾಗೂ ಕೊತ್ತತ್ತಿ ಗ್ರಾಮಸ್ಥರು ತಾಲ್ಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ನೇತೃತ್ವದಲ್ಲಿ ಸೋಮವಾರ ನಡೆದ ರಾಶಿಪೂಜೆ, ಭೂಮಿಪೂಜೆ, ಗೋಪೂಜೆ ಹಾಗೂ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಇಂದಿನ ಎಐ ಯುಗದಲ್ಲಿ ಎಲ್ಲ ಬಗೆಯ ತಾಂತ್ರಿಕ ಉದ್ಯೋಗವನ್ನು ಕೃತಕ ಬುದ್ಧಿಮತ್ತೆ ಕಸಿದುಕೊಳ್ಳುತ್ತಿದೆ. ಇದರಿಂದಾಗಿ ಸಾಫ್ಟ್ವೇರ್ ಕ್ಷೇತ್ರದಲ್ಲೂ ನಿರುದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ. ಮುಂದಿನ 10 ವರ್ಷಗಳಲ್ಲಿ ಭೂಮಿ ಉಳ್ಳವರಿಗೆ ಹೆಚ್ಚಿನ ಬೇಡಿಕೆ ಬರಲಿದ್ದು, ಅಲ್ಲಿಯವರೆಗೆ ರೈತರು ತಮಗಾಗುವ ನಷ್ಟ ಮತ್ತು ಕಷ್ಟಗಳನ್ನು ಸಹಿಸಿಕೊಂಡು ಕೃಷಿಯನ್ನು ಮುಂದುವರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ಮಾತನಾಡಿ, ‘ಆದಿಚುಂಚನಗಿರಿ ಮಠಕ್ಕೆ ರೈತರು ಪ್ರತಿ ವರ್ಷ ತಾವು ಬೆಳೆದ ಒಂದು ಭಾಗದ ಧವಸ-ಧಾನ್ಯವನ್ನು ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಬೇಲೂರು ಮತ್ತು ಕೊತ್ತತ್ತಿ ಗ್ರಾಮಸ್ಥರು ರಾಶಿಪೂಜೆ ನಡೆಸಿ ಶ್ರೀಕ್ಷೇತ್ರಕ್ಕೆ ದವಸ ಧಾನ್ಯ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ವಿವರಿಸಿದರು.</p>.<p>ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಮಂಡ್ಯದ ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀಶೈಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭೂನಾಥಸ್ವಾಮೀಜಿ, ಸತ್ಕೀರ್ತಿನಾಥ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರೇಶ್, ಮುಖಂಡರಾದ ಸಿದ್ದರಾಮಯ್ಯ, ಅಶೋಕ್ ಜಯರಾಂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>