<p><strong>ಮದ್ದೂರು:</strong> ‘ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ ಸೋಮಹಳ್ಳಿಯಲ್ಲಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಸಹೋದರ ಎಸ್.ಎಂ.ಶಂಕರ್ ಅವರ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಪರೇಷನ್ ಕಮಲದಿಂದ ಸಮ್ಮಿಶ್ರ ಸರ್ಕಾರವನ್ನು ಅಭದ್ರ ಮಾಡಬಹುದು ಎಂದು ಬಿಜೆಪಿಯವರು ಅಂದು ಕೊಂಡರೆ ಅದು ಅವರ ಭ್ರಮೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಸಲಾಗಿದೆ ಅವರು ಶೀಘ್ರದಲ್ಲೆ ರಾಜೀನಾಮೆಯನ್ನು ವಾಪಸ್ ಪಡೆಯಲ್ಲಿದ್ದಾರೆ. ಅವರು ರಾಜೀನಾಮೆ ನೀಡಲು ಯಾರು ಕಾರಣ ಎಂಬುದರ ಬಗ್ಗೆ ಮಾಹಿತಿ ಇದೆ. ಇದರಿಂದ ಬಿಜೆಪಿಯವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದು ತಿಳಿಸಿದರು.</p>.<p>ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿ.ಎಸ್.ಎಂ.ಶಂಕರ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮದಲ್ಲಿ ಹಾಜರಿದ್ದ ತಮ್ಮ ರಾಜಕೀಯ ಗುರು ಎಸ್.ಎಂ. ಕೃಷ್ಣರವರ ಕಾಲಿಗೆ ನಮಸ್ಕರಿಸಿ ಅವರ ಜೊತೆ ಭೋಜನ ಮಾಡಿದರು.</p>.<p>ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ ಸೋಮಹಳ್ಳಿಯಲ್ಲಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ಸಹೋದರ ಎಸ್.ಎಂ.ಶಂಕರ್ ಅವರ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಪರೇಷನ್ ಕಮಲದಿಂದ ಸಮ್ಮಿಶ್ರ ಸರ್ಕಾರವನ್ನು ಅಭದ್ರ ಮಾಡಬಹುದು ಎಂದು ಬಿಜೆಪಿಯವರು ಅಂದು ಕೊಂಡರೆ ಅದು ಅವರ ಭ್ರಮೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಸಲಾಗಿದೆ ಅವರು ಶೀಘ್ರದಲ್ಲೆ ರಾಜೀನಾಮೆಯನ್ನು ವಾಪಸ್ ಪಡೆಯಲ್ಲಿದ್ದಾರೆ. ಅವರು ರಾಜೀನಾಮೆ ನೀಡಲು ಯಾರು ಕಾರಣ ಎಂಬುದರ ಬಗ್ಗೆ ಮಾಹಿತಿ ಇದೆ. ಇದರಿಂದ ಬಿಜೆಪಿಯವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದು ತಿಳಿಸಿದರು.</p>.<p>ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿ.ಎಸ್.ಎಂ.ಶಂಕರ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮದಲ್ಲಿ ಹಾಜರಿದ್ದ ತಮ್ಮ ರಾಜಕೀಯ ಗುರು ಎಸ್.ಎಂ. ಕೃಷ್ಣರವರ ಕಾಲಿಗೆ ನಮಸ್ಕರಿಸಿ ಅವರ ಜೊತೆ ಭೋಜನ ಮಾಡಿದರು.</p>.<p>ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>