‘ಚಿತ್ರನಟ ದರ್ಶನ್ ಅವರು ನನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಕಳೆದ ಲೋಕಸಭಾ ಚುನಾವಣೆ ಸಮಯದಲ್ಲೇ ಅವರು ಘೋಷಿಸಿದ್ದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹಾಕುವುದಿಲ್ಲವೆಂದು ಸ್ಪಷ್ಟಪಡಿಸಿಲ್ಲ. ನಾನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದು ನಿಜ. ಆದರೆ, ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಮತ್ತು ನಿಮ್ಮನ್ನೇ ಬೆಂಬಲಿಸುವುದಾಗಿ ನಿಖರವಾಗಿ ಏನನ್ನೂ ಹೇಳಿಲ್ಲ’ ಎಂದರು.