‘ಮಳವಳ್ಳಿ ತಾಲ್ಲೂಕಿನ ಹೆಬ್ಬಾಳ ಚನ್ನಯ್ಯ ಮತ್ತು ವಿಶ್ವೇಶ್ವರಯ್ಯ ನಾಲಾ ನೀರಾವರಿ ಅವಲಂಬಿತ ಗ್ರಾಮಗಳ ರೈತರ ಜಮೀನುಗಳಿಗೆ ಪ್ರತಿ ವರ್ಷ ತಡವಾಗಿ ನೀರನ್ನು ಹರಿಸಲಾಗುತ್ತಿದ್ದು, ಸಕಾಲಕ್ಕೆ ಬೆಳೆ ಬೆಳೆಯಲು ತೊಂದರೆಯಾಗುತ್ತಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಈ ಸಂಬಂಧ ಗಮನಹರಿಸಿ, ಕೊನೆಯ ಭಾಗದ ರೈತರ ಜಮೀನುಗಳಿಗೆ ಸಕಾಲಕ್ಕೆ ನೀರು ಹರಿಸಲು ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.