‘ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರ ಸೂಚನೆ ಮೇರೆಗೆ ಸ್ತಂಭ ತೆರವುಗೊಳಿಸಲಾಗುತ್ತಿದೆ’ ಎಂಬ ವದಂತಿ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಸಾವಿರಾರು ಜನ ರಂಗಮಂದಿರದ ಬಳಿ ಸೇರಿದರು. ಗ್ರಾಮವನ್ನು ಬಂದ್ ಮಾಡಿ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಬಿಜೆಪಿ, ಜೆಡಿಎಸ್ ಮುಖಂಡರೂ ಇದ್ದರು.