<p><strong>ಶ್ರೀರಂಗಪಟ್ಟಣ</strong>: ಎನ್ಎಸ್ಎಸ್ ಶಿಬಿರಗಳು ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಕಲ್ಪಿಸಲಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಮಂಜುಳಾ ಆಲದಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ಬುಧವಾರ ಸಂಜೆ ಅವರು ಮಾತನಾಡಿದರು.</p>.<p>‘ಶಿಬಿರಗಳಿಂದ ವಾಕ್ಚಾತುರ್ಯ, ನಾಯಕತ್ವ ಗುಣ, ವೈಚಾರಿಕ ದೃಷ್ಟಿಕೋನ ಬೆಳೆಯುತ್ತದೆ. ಗ್ರಾಮೀಣ ಜನರ ಜೀವನ ಪದ್ದತಿ ರ್ಥವಾಗುತ್ತದೆ. ಶ್ರಮದ ಮಹತ್ವ ತಿಳಿಸಿಕೊಡುವ ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಳ್ಳಬೇಕು’ ಎಂದರು.</p>.<p>ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹುರುಗಲವಾಡಿ ರಾಮಯ್ಯ, ಆಲದಹಳ್ಳಿ ಮಂಜುಳಾ, ಕೂಡಲಕುಪ್ಪೆ ಸೋಮಶೇಖರ್ ಇತರರು ಜಾಗೃತಿ ಗೀತೆಗಳನ್ನು ಹಾಡಿದರು.</p>.<p>ವಿವೇಕಾನಂದ ಯೋಗ ಕಿಶೋರ ಕೇಂದ್ರದ ಸುಪ್ರಿಯಾ ಮತ್ತು ಮಿಥುನ್ ವರ ಯೋಗ ಪ್ರದರ್ಶನ ಗಮನ ಸೆಳೆಯಿತು. ಶಿಬಿರಾಧಿಕಾರಿ ಮೂರ್ತಿಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಎನ್ಎಸ್ಎಸ್ ಶಿಬಿರಗಳು ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಕಲ್ಪಿಸಲಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಮಂಜುಳಾ ಆಲದಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ಬುಧವಾರ ಸಂಜೆ ಅವರು ಮಾತನಾಡಿದರು.</p>.<p>‘ಶಿಬಿರಗಳಿಂದ ವಾಕ್ಚಾತುರ್ಯ, ನಾಯಕತ್ವ ಗುಣ, ವೈಚಾರಿಕ ದೃಷ್ಟಿಕೋನ ಬೆಳೆಯುತ್ತದೆ. ಗ್ರಾಮೀಣ ಜನರ ಜೀವನ ಪದ್ದತಿ ರ್ಥವಾಗುತ್ತದೆ. ಶ್ರಮದ ಮಹತ್ವ ತಿಳಿಸಿಕೊಡುವ ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಳ್ಳಬೇಕು’ ಎಂದರು.</p>.<p>ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹುರುಗಲವಾಡಿ ರಾಮಯ್ಯ, ಆಲದಹಳ್ಳಿ ಮಂಜುಳಾ, ಕೂಡಲಕುಪ್ಪೆ ಸೋಮಶೇಖರ್ ಇತರರು ಜಾಗೃತಿ ಗೀತೆಗಳನ್ನು ಹಾಡಿದರು.</p>.<p>ವಿವೇಕಾನಂದ ಯೋಗ ಕಿಶೋರ ಕೇಂದ್ರದ ಸುಪ್ರಿಯಾ ಮತ್ತು ಮಿಥುನ್ ವರ ಯೋಗ ಪ್ರದರ್ಶನ ಗಮನ ಸೆಳೆಯಿತು. ಶಿಬಿರಾಧಿಕಾರಿ ಮೂರ್ತಿಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>