ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾವಿದ ನಾರಾಯಣಗೌಡ ನಿಧನ

Last Updated 1 ಸೆಪ್ಟೆಂಬರ್ 2020, 7:35 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ಗ್ರಾಮದ ಗಮಕ ಕಲಾವಿದ ನಾರಾಯಣಗೌಡ (78) ಭಾನುವಾರ ರಾತ್ರಿ ನಿಧನರಾದರು.

ಅವರಿಗೆ ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.ಸ್ವಗ್ರಾಮದಲ್ಲಿ ಸೋಮವಾರ ಮಧ್ಯಾಹ್ನಅಂತ್ಯಕ್ರಿಯೆ ನಡೆಯಿತು.

ನಾರಾಯಣಗೌಡ ಅವರು ಕುವೆಂಪು ವಿರಚಿತ ‘ರಾಮಾಯಣ ದರ್ಶನಂ’ ಹಾಗೂ ಇತರ ಕೃತಿಗಳನ್ನು ನಿರರ್ಗಳವಾಗಿ ವಾಚಿಸುತ್ತಿದ್ದರು. ಮಹಾ ಛಂದಸ್ಸಿನಲ್ಲಿ ಪ್ರೌಢಿಮೆ ಹೊಂದಿದ್ದರು.

ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ‘ಚುಂಚಶ್ರೀ’, ನಾಡಪ್ರಭು ಕೆಂಪೇಗೌಡ, ಕುವೆಂಪು ಕಲಾನಿಕೇತನ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT