‘ಅರಕೇಶ್ವರಸ್ವಾಮಿ ದೇವಾಲಯದಲ್ಲಿ ಹಲವು ತಿಂಗಳುಗಳಿಂದ ಹುಂಡಿ ತೆರೆಯದೇ ಇರುವುದರಿಂದ ಘಟನೆ ನಡೆದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಎ ದರ್ಜೆ ದೇವಾಲಯಗಳಲ್ಲಿ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು, ಬಿ ದರ್ಜೆ ದೇವಾಲಯಗಳಲ್ಲಿ ತಹಶೀಲ್ದಾರ್ ಸಮುಖದಲ್ಲಿ ತಿಂಗಳಿಗೊಮ್ಮೆ ಹುಂಡಿ ತೆರೆಯಲು ಸೂಚನೆ ನೀಡಲಾಗುವುದು’ ಎಂದು ಹೇಳಿದರು.