<p><strong>ಕೆ.ಆರ್.ಪೇಟೆ:</strong> ‘ಹೇಮಾವತಿ ನೀರನ್ನು ತುಮಕೂರಿನಿಂದ ಮಾಗಡಿ ಭಾಗಕ್ಕೆ ತೆಗೆದುಕೊಂಡು ಹೋಗುವ ಸರ್ಕಾರದ ನಿರ್ಧಾರದ ಬಗ್ಗೆ ಈ ಭಾಗದ ಶಾಸಕರು ಧ್ವನಿ ಎತ್ತದಿರುವುದು ಸರಿಯಲ್ಲ’ ಎಂದು ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಮದುಗೆರೆ ರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸರ್ಕಾರದ ಈ ವಿವಾದಿತ ಯೋಜನೆಯಿಂದ ಜಿಲ್ಲೆಯ ಹೇಮಾವತಿ ಜಲಾನಯನ ಪ್ರದೇಶದ ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ಮತ್ತು ಮಂಡ್ಯ ತಾಲ್ಲೂಕಿನ ಕೆಲ ಪ್ರದೇಶಗಳ ರೈತರ ಬದುಕು ಬೀದಿಗೆ ಬೀಳಲಿದೆ. ಮೂಲ ಯೋಜನೆಯನ್ನು ಬದಲಿಸಿ ರಾಮನಗರ ಜಿಲ್ಲೆಗೆ ನೀರು ತೆಗೆದುಕೊಂಡು ಹೋದರೆ ಅದರ ದುಷ್ಪರಿಣಾಮ ಈ ನಾಲ್ಕು ತಾಲ್ಲೂಕಿನ ರೈತರ ಮೇಲೆ ಆಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಹೇಮಾವತಿ ಜಲಾಶಯದಲ್ಲಿ 27 ಟಿಎಂಸಿ ನೀರು ಸಂಗ್ರಹವಿದ್ದರೂ ಬೇಸಿಗೆ ನೀರು ಪಡೆಯಲಾಗದ ಸ್ಥಿತಿಯಲ್ಲಿ ಮಂಡ್ಯ ಭಾಗದ ರೈತರು ಇದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ಸರ್ಕಾರದ ತೀರ್ಮಾನದ ವಿರುದ್ದ ಧ್ವನಿ ಎತ್ತಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ‘ಹೇಮಾವತಿ ನೀರನ್ನು ತುಮಕೂರಿನಿಂದ ಮಾಗಡಿ ಭಾಗಕ್ಕೆ ತೆಗೆದುಕೊಂಡು ಹೋಗುವ ಸರ್ಕಾರದ ನಿರ್ಧಾರದ ಬಗ್ಗೆ ಈ ಭಾಗದ ಶಾಸಕರು ಧ್ವನಿ ಎತ್ತದಿರುವುದು ಸರಿಯಲ್ಲ’ ಎಂದು ಜಿಲ್ಲಾ ರೈತ ಸಂಘದ ಮಾಜಿ ಅಧ್ಯಕ್ಷ ಮದುಗೆರೆ ರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸರ್ಕಾರದ ಈ ವಿವಾದಿತ ಯೋಜನೆಯಿಂದ ಜಿಲ್ಲೆಯ ಹೇಮಾವತಿ ಜಲಾನಯನ ಪ್ರದೇಶದ ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ಮತ್ತು ಮಂಡ್ಯ ತಾಲ್ಲೂಕಿನ ಕೆಲ ಪ್ರದೇಶಗಳ ರೈತರ ಬದುಕು ಬೀದಿಗೆ ಬೀಳಲಿದೆ. ಮೂಲ ಯೋಜನೆಯನ್ನು ಬದಲಿಸಿ ರಾಮನಗರ ಜಿಲ್ಲೆಗೆ ನೀರು ತೆಗೆದುಕೊಂಡು ಹೋದರೆ ಅದರ ದುಷ್ಪರಿಣಾಮ ಈ ನಾಲ್ಕು ತಾಲ್ಲೂಕಿನ ರೈತರ ಮೇಲೆ ಆಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಹೇಮಾವತಿ ಜಲಾಶಯದಲ್ಲಿ 27 ಟಿಎಂಸಿ ನೀರು ಸಂಗ್ರಹವಿದ್ದರೂ ಬೇಸಿಗೆ ನೀರು ಪಡೆಯಲಾಗದ ಸ್ಥಿತಿಯಲ್ಲಿ ಮಂಡ್ಯ ಭಾಗದ ರೈತರು ಇದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ಸರ್ಕಾರದ ತೀರ್ಮಾನದ ವಿರುದ್ದ ಧ್ವನಿ ಎತ್ತಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>