<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ರಾಂಪುರ ಸಂಪರ್ಕ ಸೇತುವೆ ಬಳಿ, ಕಾವೇರಿ ನದಿಯಲ್ಲಿ ನೀರುನಾಯಿಗಳ ಬೇಟೆಗೆ ಬೋನು ಇರಿಸಿದ್ದರು ಎಂಬ ಆರೋಪದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸಂಜೆ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಾರ್ವಜನಿಕರ ದೂರಿನ ಮೇರೆಗೆ ಗಸ್ತು ಅರಣ್ಯಪಾಲಕ ಬಸವರಾಜ್ ಮತ್ತು ಅರಣ್ಯ ವೀಕ್ಷಕ ತುಳಿಸಿಕುಮಾರ್ ಸ್ಥಳಕ್ಕೆ ತೆರಳಿ, ಸಮೀಪದ ಗಂಜಾಂ ನಿವಾಸಿ ರವಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ರವಿ ಅವರ ಬಳಿ ಇದ್ದ 5 ಬೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>‘ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೂಲಂಕಷ ತನಿಖೆಯ ಬಳಿಕ ವಾಸ್ತವ ಸಂಗತಿ ತಿಳಿಯಲಿದೆ’ ಎಂದು ಉಪ ವಲಯ ಅರಣ್ಯಾಧಿಕಾರಿ ಬಿ.ಎಂ. ನಾಗರಾಜ್ ತಿಳಿಸಿದ್ದಾರೆ.</p>.<p>‘ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಬೋನು ಇರಿಸಲಾಗಿತ್ತು. ನೀರುನಾಯಿ ಹಿಡಿಯಲು ಇಟ್ಟಿಲ್ಲ’ ಎಂದು ರವಿ ವಿಚಾರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p>.<p>‘ಪಟ್ಟಣದ ಸುತ್ತಮುತ್ತ ಕಾವೇರಿ ನದಿಯಲ್ಲಿ ಹಲವು ದಿನಗಳಿಂದ ನೀರುನಾಯಿಗಳ ಬೇಟೆ ನಡೆಯುತ್ತಿದೆ. ಅಳಿವಿನ ಅಂಚಿನಲ್ಲಿರುವ ಈ ವನ್ಯ ಜೀವಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ನೀರುನಾಯಿಗಳ ಕಳ್ಳ ಬೇಟೆಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು’ ಎಂದು ಮುಖಂಡ ಕೆ. ಚಂದನ್ ಆಗ್ರಹಿಸಿದರು. ರಾಮು, ಸತೀಶ್, ಶಂಕರ್, ಲಕ್ಷ್ಮಿನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ರಾಂಪುರ ಸಂಪರ್ಕ ಸೇತುವೆ ಬಳಿ, ಕಾವೇರಿ ನದಿಯಲ್ಲಿ ನೀರುನಾಯಿಗಳ ಬೇಟೆಗೆ ಬೋನು ಇರಿಸಿದ್ದರು ಎಂಬ ಆರೋಪದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸಂಜೆ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಾರ್ವಜನಿಕರ ದೂರಿನ ಮೇರೆಗೆ ಗಸ್ತು ಅರಣ್ಯಪಾಲಕ ಬಸವರಾಜ್ ಮತ್ತು ಅರಣ್ಯ ವೀಕ್ಷಕ ತುಳಿಸಿಕುಮಾರ್ ಸ್ಥಳಕ್ಕೆ ತೆರಳಿ, ಸಮೀಪದ ಗಂಜಾಂ ನಿವಾಸಿ ರವಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ರವಿ ಅವರ ಬಳಿ ಇದ್ದ 5 ಬೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>‘ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೂಲಂಕಷ ತನಿಖೆಯ ಬಳಿಕ ವಾಸ್ತವ ಸಂಗತಿ ತಿಳಿಯಲಿದೆ’ ಎಂದು ಉಪ ವಲಯ ಅರಣ್ಯಾಧಿಕಾರಿ ಬಿ.ಎಂ. ನಾಗರಾಜ್ ತಿಳಿಸಿದ್ದಾರೆ.</p>.<p>‘ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಬೋನು ಇರಿಸಲಾಗಿತ್ತು. ನೀರುನಾಯಿ ಹಿಡಿಯಲು ಇಟ್ಟಿಲ್ಲ’ ಎಂದು ರವಿ ವಿಚಾರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p>.<p>‘ಪಟ್ಟಣದ ಸುತ್ತಮುತ್ತ ಕಾವೇರಿ ನದಿಯಲ್ಲಿ ಹಲವು ದಿನಗಳಿಂದ ನೀರುನಾಯಿಗಳ ಬೇಟೆ ನಡೆಯುತ್ತಿದೆ. ಅಳಿವಿನ ಅಂಚಿನಲ್ಲಿರುವ ಈ ವನ್ಯ ಜೀವಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ನೀರುನಾಯಿಗಳ ಕಳ್ಳ ಬೇಟೆಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು’ ಎಂದು ಮುಖಂಡ ಕೆ. ಚಂದನ್ ಆಗ್ರಹಿಸಿದರು. ರಾಮು, ಸತೀಶ್, ಶಂಕರ್, ಲಕ್ಷ್ಮಿನಾರಾಯಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>