<p><strong>ಮಂಡ್ಯ</strong>: ‘ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಮಂಡ್ಯದಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಪ್ರತಿ ತಾಲ್ಲೂಕಿನಲ್ಲೂ ಆಮ್ಲಜನಕ ಘಟಕ ಸ್ಥಾಪನೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಹೇಳಿದರು.</p>.<p>ಮಂಡ್ಯದ ಮಿಮ್ಸ್ ಆಸ್ಪತ್ರೆ ಆವರಣದಲ್ಲಿ ಬುಧವಾರ ಘಟಕ ಸ್ಥಾಪನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಮಂಡ್ಯ ಹಾಗೂ ಮಳವಳ್ಳಿ ಯಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಅವಕಾಶ ನೀಡಿದೆ. ಇಷ್ಟು ದಿನ ಬೇರೆ ಕಡೆಯಿಂದ ಆಮ್ಲಜನಕ ತರಿಸಿಕೊಳ್ಳುತ್ತಿದ್ದೆವು. ಮುಂದೆ ಈ ಸಮಸ್ಯೆ ಉದ್ಭವಿಸುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರತಿ ತಾಲ್ಲೂಕಿನಲ್ಲೂ ಆಮ್ಲಜನಕ ಘಟಕ ನಿರ್ಮಾಣವಾಗಬೇಕು. ಅದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.</p>.<p>ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಮಂಜು, ಮಿಮ್ಸ್ ನಿರ್ದೇಶಕ ಡಾ.ಹರೀಶ್ ಇದ್ದರು.</p>.<p><strong>ಜಿಲ್ಲಾಧಿಕಾರಿ ಭರವಸೆ: </strong>‘ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಅವಶ್ಯಕತೆ ಹೆಚ್ಚಾಗಿದ್ದು ಪ್ರತಿ ತಾಲ್ಲೂಕಿನಲ್ಲಿ ಘಟಕ ಸ್ಥಾಪನೆಯೇ ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆ ಮತ್ತು ಏಜೆನ್ಸಿಯವರು ಸಹಕರಿಸಲು ಮುಂದಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಹೇಳಿದರು.</p>.<p>ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು ‘ಹೊಂಬಾಳೆ ಸಂಸ್ಥೆಯಿಂದ 500 ಎಲ್ಪಿಎಂ ಆಮ್ಲಜನಕ ಘಟಕ ನೀಡಲು ಮುಂದಾಗಿದ್ದು ಅದನ್ನು ಕೆ.ಆರ್ ಪೇಟೆ ಮತ್ತು ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗುವುದು. ಪಾಂಡವಪುರಕ್ಕೆ 400 ಅಥವಾ 500 ಎಲ್ ಪಿ ಎಂ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ 1 ಘಟಕ ಸ್ಥಾಪನೆಗೆ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಮುರಗೇಶ್ ನಿರಾಣಿ ಸಕ್ಕರೆ ಕಂಪನಿಯವರ ಜೊತೆ ಚರ್ಚೆ ನಡೆಯುತ್ತಿದೆ’ ಎಂದರು.</p>.<p>‘ಇನ್ನು ಮಂಡ್ಯ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ವತಿಯಿಂದ ಮದ್ದೂರು ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಘಟಕ ಸ್ಥಾಪನೆ ಮಾಡುವ ಚರ್ಚೆ ನೆಡಯುತ್ತಿದೆ. ನಾಗಮಂಗಲದಲ್ಲಿ ಘಟಕ ಸ್ಥಾಪನೆ ಸಂಬಂಧ 7 ಕೈಗಾರಿಕೆಗಳು ಮುಂದೆ ಬಂದಿವೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಮಂಡ್ಯದಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. ಪ್ರತಿ ತಾಲ್ಲೂಕಿನಲ್ಲೂ ಆಮ್ಲಜನಕ ಘಟಕ ಸ್ಥಾಪನೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಹೇಳಿದರು.</p>.<p>ಮಂಡ್ಯದ ಮಿಮ್ಸ್ ಆಸ್ಪತ್ರೆ ಆವರಣದಲ್ಲಿ ಬುಧವಾರ ಘಟಕ ಸ್ಥಾಪನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರ ಮಂಡ್ಯ ಹಾಗೂ ಮಳವಳ್ಳಿ ಯಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಅವಕಾಶ ನೀಡಿದೆ. ಇಷ್ಟು ದಿನ ಬೇರೆ ಕಡೆಯಿಂದ ಆಮ್ಲಜನಕ ತರಿಸಿಕೊಳ್ಳುತ್ತಿದ್ದೆವು. ಮುಂದೆ ಈ ಸಮಸ್ಯೆ ಉದ್ಭವಿಸುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರತಿ ತಾಲ್ಲೂಕಿನಲ್ಲೂ ಆಮ್ಲಜನಕ ಘಟಕ ನಿರ್ಮಾಣವಾಗಬೇಕು. ಅದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.</p>.<p>ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಮಂಜು, ಮಿಮ್ಸ್ ನಿರ್ದೇಶಕ ಡಾ.ಹರೀಶ್ ಇದ್ದರು.</p>.<p><strong>ಜಿಲ್ಲಾಧಿಕಾರಿ ಭರವಸೆ: </strong>‘ಜಿಲ್ಲೆಯ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಅವಶ್ಯಕತೆ ಹೆಚ್ಚಾಗಿದ್ದು ಪ್ರತಿ ತಾಲ್ಲೂಕಿನಲ್ಲಿ ಘಟಕ ಸ್ಥಾಪನೆಯೇ ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆ ಮತ್ತು ಏಜೆನ್ಸಿಯವರು ಸಹಕರಿಸಲು ಮುಂದಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಹೇಳಿದರು.</p>.<p>ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು ‘ಹೊಂಬಾಳೆ ಸಂಸ್ಥೆಯಿಂದ 500 ಎಲ್ಪಿಎಂ ಆಮ್ಲಜನಕ ಘಟಕ ನೀಡಲು ಮುಂದಾಗಿದ್ದು ಅದನ್ನು ಕೆ.ಆರ್ ಪೇಟೆ ಮತ್ತು ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗುವುದು. ಪಾಂಡವಪುರಕ್ಕೆ 400 ಅಥವಾ 500 ಎಲ್ ಪಿ ಎಂ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ 1 ಘಟಕ ಸ್ಥಾಪನೆಗೆ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಮುರಗೇಶ್ ನಿರಾಣಿ ಸಕ್ಕರೆ ಕಂಪನಿಯವರ ಜೊತೆ ಚರ್ಚೆ ನಡೆಯುತ್ತಿದೆ’ ಎಂದರು.</p>.<p>‘ಇನ್ನು ಮಂಡ್ಯ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ವತಿಯಿಂದ ಮದ್ದೂರು ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಘಟಕ ಸ್ಥಾಪನೆ ಮಾಡುವ ಚರ್ಚೆ ನೆಡಯುತ್ತಿದೆ. ನಾಗಮಂಗಲದಲ್ಲಿ ಘಟಕ ಸ್ಥಾಪನೆ ಸಂಬಂಧ 7 ಕೈಗಾರಿಕೆಗಳು ಮುಂದೆ ಬಂದಿವೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>