<p><strong>ಮದ್ದೂರು:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಕೃತ್ಯವನ್ನು ಭಾರತೀಯರಾದ ನಾವು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಕಬ್ಬಾರೆ ಗ್ರಾಮದಲ್ಲಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಅರುವನಹಳ್ಳಿಯಲ್ಲಿ ₹29 ಲಕ್ಷ ವೆಚ್ಚದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಕಾಶ್ಮೀರ ನಮ್ಮ ದೇಶದ ಮುಕುಟವಿದ್ದ ಹಾಗೆ. ಅಲ್ಲಿ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ. ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕು. ದೇಶವೂ ಭಯೋತ್ಪಾದಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕ್ರಮ ಕೈಗೊಳ್ಳುವ ಮೂಲಕ ನಮ್ಮ ಶಕ್ತಿ ಸಾಮರ್ಥ್ಯವನ್ನು ತೋರಿಸಬೇಕಾಗಿರುವ ಸಂದರ್ಭ ಬಂದಿದೆ’ ಎಂದರು.</p>.<p>‘ತಾಲ್ಲೂಕು ವ್ಯಾಪ್ತಿಯಲ್ಲಿ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ನೂತನ ಕೊಠಡಿ ನಿರ್ಮಾಣ ಮಾಡುವ ಕೆಲಸಕ್ಕೆ ಒತ್ತು ನೀಡುತ್ತಿದ್ದೇನೆ. ಈಗ ಬೇಸಿಗೆ ರಜೆ ಇದ್ದು, ಶಾಲೆಗಳು ಆರಂಭವಾಗುವುದಕ್ಕೂ ಮುನ್ನ ಕೊಠಡಿಗಳ ನಿರ್ಮಾಣ ಮಾಡಲಾಗುವುದು’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಗಮನ ನೀಡುತ್ತಿದ್ದು ಇಂದು ಕಬ್ಬಾರೆ - ಸೋಮನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ’ ಎಂದರು.</p>.<p>ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಚೆಲುವರಾಜು, ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಕೃತ್ಯವನ್ನು ಭಾರತೀಯರಾದ ನಾವು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಕಬ್ಬಾರೆ ಗ್ರಾಮದಲ್ಲಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಅರುವನಹಳ್ಳಿಯಲ್ಲಿ ₹29 ಲಕ್ಷ ವೆಚ್ಚದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಕಾಶ್ಮೀರ ನಮ್ಮ ದೇಶದ ಮುಕುಟವಿದ್ದ ಹಾಗೆ. ಅಲ್ಲಿ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಪಾಕಿಸ್ತಾನದ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ. ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕು. ದೇಶವೂ ಭಯೋತ್ಪಾದಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕ್ರಮ ಕೈಗೊಳ್ಳುವ ಮೂಲಕ ನಮ್ಮ ಶಕ್ತಿ ಸಾಮರ್ಥ್ಯವನ್ನು ತೋರಿಸಬೇಕಾಗಿರುವ ಸಂದರ್ಭ ಬಂದಿದೆ’ ಎಂದರು.</p>.<p>‘ತಾಲ್ಲೂಕು ವ್ಯಾಪ್ತಿಯಲ್ಲಿ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ನೂತನ ಕೊಠಡಿ ನಿರ್ಮಾಣ ಮಾಡುವ ಕೆಲಸಕ್ಕೆ ಒತ್ತು ನೀಡುತ್ತಿದ್ದೇನೆ. ಈಗ ಬೇಸಿಗೆ ರಜೆ ಇದ್ದು, ಶಾಲೆಗಳು ಆರಂಭವಾಗುವುದಕ್ಕೂ ಮುನ್ನ ಕೊಠಡಿಗಳ ನಿರ್ಮಾಣ ಮಾಡಲಾಗುವುದು’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಗಮನ ನೀಡುತ್ತಿದ್ದು ಇಂದು ಕಬ್ಬಾರೆ - ಸೋಮನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ’ ಎಂದರು.</p>.<p>ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಚೆಲುವರಾಜು, ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>