<p><strong>ಪಾಂಡವಪುರ</strong>: ಪತಿಯಿಂದಲೇ ಮಾರಾಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಟ್ಟಣದ ಶಿಕ್ಷಕಿ ವೈ.ಎನ್.ಅನಿತಾ (37) ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿ ಮೃತಪಟ್ಟರು.</p>.<p>ಪಟ್ಟಣದ ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಶಾಂತಿನಗರದ ನಿವಾಸಿ ಅನಿತಾ ಅವರು ರಾಗಿಮುದ್ದನಹಳ್ಳಿ ಪ್ರೌಢಶಾಲೆ ಶಿಕ್ಷಕ ಪತಿ ನಟರಾಜುವಿನಿಂದ ತೀವ್ರ ಹಲ್ಲೆಗೊಳಗಾಗಿದ್ದರು.</p>.<p>ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕಳೆದ ಶುಕ್ರವಾರ ದಂಪತಿ ನಡುವೆ ಜಗಳ ನಡೆದು, ಪತಿ ನಟರಾಜು ಮನೆಯಲ್ಲಿದ್ದ ಸುತ್ತಿಗೆಯಿಂದ ಪತ್ನಿಯ ತಲೆಯ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದ.</p>.<p>ಗಾಯಗೊಂಡಿದ್ದ ಅನಿತಾ ಅವರನ್ನು ತಕ್ಷಣ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೆದುಳು ನಿಷ್ಕ್ರಿಯೆಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿತಾ ಮೃತಪಟ್ಟಿದ್ದಾರೆ.</p>.<p>ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿ ನಟರಾಜು ಅವರನ್ನು ಪಟ್ಟಣದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.</p>.<p>ಮೃತ ಅನಿತಾ ಅವರ ಅಂತ್ಯಕ್ರಿಯೆಯು ಮಂಗಳವಾರ ಪಟ್ಟಣದಲ್ಲಿ ನೆರವೇರಿತು. ಮೃತ ಅನಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಪತಿಯಿಂದಲೇ ಮಾರಾಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಟ್ಟಣದ ಶಿಕ್ಷಕಿ ವೈ.ಎನ್.ಅನಿತಾ (37) ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿ ಮೃತಪಟ್ಟರು.</p>.<p>ಪಟ್ಟಣದ ಖಾಸಗಿ ಶಾಲೆಯಲ್ಲಿ ಶಿಕ್ಷಕಿ ಶಾಂತಿನಗರದ ನಿವಾಸಿ ಅನಿತಾ ಅವರು ರಾಗಿಮುದ್ದನಹಳ್ಳಿ ಪ್ರೌಢಶಾಲೆ ಶಿಕ್ಷಕ ಪತಿ ನಟರಾಜುವಿನಿಂದ ತೀವ್ರ ಹಲ್ಲೆಗೊಳಗಾಗಿದ್ದರು.</p>.<p>ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕಳೆದ ಶುಕ್ರವಾರ ದಂಪತಿ ನಡುವೆ ಜಗಳ ನಡೆದು, ಪತಿ ನಟರಾಜು ಮನೆಯಲ್ಲಿದ್ದ ಸುತ್ತಿಗೆಯಿಂದ ಪತ್ನಿಯ ತಲೆಯ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದ.</p>.<p>ಗಾಯಗೊಂಡಿದ್ದ ಅನಿತಾ ಅವರನ್ನು ತಕ್ಷಣ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೆದುಳು ನಿಷ್ಕ್ರಿಯೆಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿತಾ ಮೃತಪಟ್ಟಿದ್ದಾರೆ.</p>.<p>ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿ ನಟರಾಜು ಅವರನ್ನು ಪಟ್ಟಣದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.</p>.<p>ಮೃತ ಅನಿತಾ ಅವರ ಅಂತ್ಯಕ್ರಿಯೆಯು ಮಂಗಳವಾರ ಪಟ್ಟಣದಲ್ಲಿ ನೆರವೇರಿತು. ಮೃತ ಅನಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>