<p><strong>ಪಾಂಡವಪುರ</strong>: ‘ಪಟ್ಟಣದ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ರೈತರಿಂದ ಸ್ವಾಧೀನಪಡಿಸಿದ ಜಮೀನಿನ ಪರಿಹಾರ ₹ 24ಕೋಟಿ ಮೊತ್ತ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಲಭ್ಯವಿರುವ ₹4ಕೋಟಿ ನೀಡುವುದಾಗಿ ಇಲಾಖೆ ಕಾರ್ಯದರ್ಶಿ, ಕೆಯುಐಡಿಎಫ್ಸಿ ವ್ಯವಸ್ಥಾಪಕರು ತಿಳಿಸಿದ್ದಾರೆ’ ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.</p>.<p>ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಸಂತೆ ಮೈದಾನದಲ್ಲಿ ಸೂಪರ್ ಮಾರ್ಕೇಟ್ ಮತ್ತು ಮಳಿಗೆಗಳನ್ನು ಕೆಯುಐಡಿಎಫ್ಸಿಯಿಂದ ₹ 5ರಿಂದ ₹10ಕೋಟಿ ಸಾಲ ಪಡೆದು ನಿರ್ಮಿಸಲಾಗುವುದು. 30 ವರ್ಷಗಳ ಹಿಂದೆ ಹರಾಜು ನಡೆದಿದೆ ಹೊಸ ನಿಯಮದ ಪ್ರಕಾರ ವಾಣಿಜ್ಯ ಮಳಿಗೆ ಬಾಡಿಗೆ ವಸೂಲಿಗೆ ಕ್ರಮಕೈಗೊಳ್ಳಲಾಗಿದ್ದು, ಸಭೆಯ ಒಪ್ಪಿಗೆ ಬೇಕು ಎಂದು ಮನವಿ ಮಾಡಿದರು.</p>.<p>ಸದಸ್ಯ ಚಂದ್ರು ಮಾತನಾಡಿ, ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿರುವ ಬಳಿಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯ ವಿಶಾಲವಾದ ಎರಡು ಮಳಿಗೆಗಳನ್ನು ವ್ಯಕ್ತಿಯೊಬ್ಬರಿಗೆ ಕರಾರಿನಲ್ಲಿ ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆದ ವ್ಯಕ್ತಿ ಈ 2 ಮಳಿಗೆಗಳನ್ನು 6 ಮಳಿಗೆಗಳಾಗಿ ಮಾರ್ಪಾಡು ಮಾಡಿ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ. ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪುರಸಭೆ ಆರ್ಥಿಕ ಸಂಪನ್ಮೂಲದ ಕೊರತೆಯಿಂದ ನರಳುತ್ತಿದೆ. ಹೊರಗುತ್ತಿಗೆ ನೌಕರರ ಗುತ್ತಿಗೆ ಪಡೆದಿರುವ ವ್ಯಕ್ತಿ ನೌಕರರ ಭವಿಷ್ಯ ನಿಧಿ ಪಾವತಿಸದ ಕಾರಣ ಪುರಸಭೆ ₹ 26ಲಕ್ಷವನ್ನು ಭವಿಷ್ಯ ನಿಧಿಗೆ ಭರಿಸಿದೆ ಎಂದು ಆರೋಪಿಸಿದರು.</p>.<p>ಸದಸ್ಯ ಪಾರ್ಥಸಾರಥಿ ಮಾತನಾಡಿ, ಖಾಸಗಿ ವ್ಯಕ್ತಿಗಳು ಪುರಸಭೆ ವಾಣಿಜ್ಯ ಮಳಿಗೆಯನ್ನು ₹ 16ಲಕ್ಷಕ್ಕೆ ಪರಭಾರೆ ಮಾಡಿದ್ದಾರೆ. ಕೆಲವರು ಹೆಚ್ಚಿನ ಮುಂಗಡ ಹಣ ಪಡೆದು ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಪುರಸಭೆಯ 82 ವಾಣಿಜ್ಯ ಮಳಿಗೆಗಳನ್ನು ₹150ರಿಂದ ₹200ರಂತೆ ಬಾಡಿಗೆ ಪಡೆಯಲಾಗುತ್ತಿದೆ, ಹೆಚ್ಚಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.<br> <br>ಉಪಾಧ್ಯಕ್ಷ ಎಲ್.ಅಶೋಕ, ಸದಸ್ಯರಾದ ಅರ್ಚನಾ ಚಂದ್ರು, ಉಮಾಶಂಕರ್, ಆರ್.ಸೋಮಶೇಖರ್, ಶಿವಕುಮಾರ್, ಗೀತಾ ಅರ್ಮುಗಂ, ಖಮ್ಮರುನ್ನೀಸಾ, ಇಮ್ರಾನ್ ಪಾಷ, ಜಯಲಕ್ಷಮ್ಮ, ಎಂ.ಗಿರೀಶ್ ಹಾಗೂ ಅಧಿಕಾರಿಗಳಾದ ಯಶಸ್ವಿನಿ, ಮಣಿಪ್ರಸಾದ, ನಾಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ‘ಪಟ್ಟಣದ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ರೈತರಿಂದ ಸ್ವಾಧೀನಪಡಿಸಿದ ಜಮೀನಿನ ಪರಿಹಾರ ₹ 24ಕೋಟಿ ಮೊತ್ತ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಲಭ್ಯವಿರುವ ₹4ಕೋಟಿ ನೀಡುವುದಾಗಿ ಇಲಾಖೆ ಕಾರ್ಯದರ್ಶಿ, ಕೆಯುಐಡಿಎಫ್ಸಿ ವ್ಯವಸ್ಥಾಪಕರು ತಿಳಿಸಿದ್ದಾರೆ’ ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.</p>.<p>ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಸಂತೆ ಮೈದಾನದಲ್ಲಿ ಸೂಪರ್ ಮಾರ್ಕೇಟ್ ಮತ್ತು ಮಳಿಗೆಗಳನ್ನು ಕೆಯುಐಡಿಎಫ್ಸಿಯಿಂದ ₹ 5ರಿಂದ ₹10ಕೋಟಿ ಸಾಲ ಪಡೆದು ನಿರ್ಮಿಸಲಾಗುವುದು. 30 ವರ್ಷಗಳ ಹಿಂದೆ ಹರಾಜು ನಡೆದಿದೆ ಹೊಸ ನಿಯಮದ ಪ್ರಕಾರ ವಾಣಿಜ್ಯ ಮಳಿಗೆ ಬಾಡಿಗೆ ವಸೂಲಿಗೆ ಕ್ರಮಕೈಗೊಳ್ಳಲಾಗಿದ್ದು, ಸಭೆಯ ಒಪ್ಪಿಗೆ ಬೇಕು ಎಂದು ಮನವಿ ಮಾಡಿದರು.</p>.<p>ಸದಸ್ಯ ಚಂದ್ರು ಮಾತನಾಡಿ, ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿರುವ ಬಳಿಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯ ವಿಶಾಲವಾದ ಎರಡು ಮಳಿಗೆಗಳನ್ನು ವ್ಯಕ್ತಿಯೊಬ್ಬರಿಗೆ ಕರಾರಿನಲ್ಲಿ ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆದ ವ್ಯಕ್ತಿ ಈ 2 ಮಳಿಗೆಗಳನ್ನು 6 ಮಳಿಗೆಗಳಾಗಿ ಮಾರ್ಪಾಡು ಮಾಡಿ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ. ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪುರಸಭೆ ಆರ್ಥಿಕ ಸಂಪನ್ಮೂಲದ ಕೊರತೆಯಿಂದ ನರಳುತ್ತಿದೆ. ಹೊರಗುತ್ತಿಗೆ ನೌಕರರ ಗುತ್ತಿಗೆ ಪಡೆದಿರುವ ವ್ಯಕ್ತಿ ನೌಕರರ ಭವಿಷ್ಯ ನಿಧಿ ಪಾವತಿಸದ ಕಾರಣ ಪುರಸಭೆ ₹ 26ಲಕ್ಷವನ್ನು ಭವಿಷ್ಯ ನಿಧಿಗೆ ಭರಿಸಿದೆ ಎಂದು ಆರೋಪಿಸಿದರು.</p>.<p>ಸದಸ್ಯ ಪಾರ್ಥಸಾರಥಿ ಮಾತನಾಡಿ, ಖಾಸಗಿ ವ್ಯಕ್ತಿಗಳು ಪುರಸಭೆ ವಾಣಿಜ್ಯ ಮಳಿಗೆಯನ್ನು ₹ 16ಲಕ್ಷಕ್ಕೆ ಪರಭಾರೆ ಮಾಡಿದ್ದಾರೆ. ಕೆಲವರು ಹೆಚ್ಚಿನ ಮುಂಗಡ ಹಣ ಪಡೆದು ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಪುರಸಭೆಯ 82 ವಾಣಿಜ್ಯ ಮಳಿಗೆಗಳನ್ನು ₹150ರಿಂದ ₹200ರಂತೆ ಬಾಡಿಗೆ ಪಡೆಯಲಾಗುತ್ತಿದೆ, ಹೆಚ್ಚಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.<br> <br>ಉಪಾಧ್ಯಕ್ಷ ಎಲ್.ಅಶೋಕ, ಸದಸ್ಯರಾದ ಅರ್ಚನಾ ಚಂದ್ರು, ಉಮಾಶಂಕರ್, ಆರ್.ಸೋಮಶೇಖರ್, ಶಿವಕುಮಾರ್, ಗೀತಾ ಅರ್ಮುಗಂ, ಖಮ್ಮರುನ್ನೀಸಾ, ಇಮ್ರಾನ್ ಪಾಷ, ಜಯಲಕ್ಷಮ್ಮ, ಎಂ.ಗಿರೀಶ್ ಹಾಗೂ ಅಧಿಕಾರಿಗಳಾದ ಯಶಸ್ವಿನಿ, ಮಣಿಪ್ರಸಾದ, ನಾಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>