<p><strong>ಪಾಂಡವಪುರ</strong>: ಭೂಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡದ ಕಾರಣ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದರು. </p><p>ಮೈಸೂರು–ಬೆಂಗಳೂರು ಜೋಡಿ ರೈಲು ಮಾರ್ಗ ನಿರ್ಮಾಣ ಹಾಗೂ ಮೈಸೂರು– ಬೆಂಗಳೂರು ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಸಂಬಂಧ ರೈತರಿಂದ ಭೂಮಿ ಸ್ವಾಧೀನ ಮಾಡಿಕೊಂಡ ಸರ್ಕಾರವು ಪರಿಹಾರ ನೀಡಿರಲಿಲ್ಲ.</p><p>ಶ್ರೀರಂಗಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಧೀಶರ ಆದೇಶದ ಮೇರೆಗೆ ನ್ಯಾಯಾಲಯದ ಸಿಬ್ಬಂದಿ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಟೇಬಲ್, ಚೇರ್ಗಳು ಸೇರಿದಂತೆ ಇತರ ಸಾಮಗ್ರಿಗಳನ್ನು ಜಪ್ತಿ ಮಾಡಿ, ಪಾಂಡವಪುರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಾಗಿಸಿದರು.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಹಾಗೂ ಮಾಕಕೊಪ್ಪಲು ರೈತರಾದ ಬಾಲಕೃಷ್ಣ ಮತ್ತು ಚಂದ್ರಶೇಖರ್ ಅವರಿಗೆ ಸೇರಿದ ಗ್ರಾಮದ ಸರ್ವೆ ನಂ.55 ಹಾಗೂ 836ಕ್ಕೆ ಸೇರಿದ 12 ಗುಂಟೆ ಜಮೀನನ್ನು 2013ರಲ್ಲಿ ರೈಲ್ವೆ ಇಲಾಖೆಗೆ ಪಾಂಡವಪುರ ಉಪವಿಭಾಗಾಧಿಕಾರಿ ಸ್ವಾಧೀನಕ್ಕೆ ಪಡೆದಿದ್ದರು. ಆದರೆ ಈ ರೈತರಿಗೆ ₹ 1.37 ಕೋಟಿ ಭೂ ಪರಿಹಾರವನ್ನು ನೀಡಿರಲಿಲ್ಲ.</p><p>ಜಪ್ತಿ ವೇಳೆ ಉಪವಿಭಾಗಾಧಿಕಾರಿಗಳು ಕಚೇರಿಯಲ್ಲಿ ಇರಲಿಲ್ಲ. ಭೂಪರಿಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ 4 ಬಾರಿ ಎಸಿ ಕಚೇರಿಯನ್ನು ಜಪ್ತಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಭೂಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡದ ಕಾರಣ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದರು. </p><p>ಮೈಸೂರು–ಬೆಂಗಳೂರು ಜೋಡಿ ರೈಲು ಮಾರ್ಗ ನಿರ್ಮಾಣ ಹಾಗೂ ಮೈಸೂರು– ಬೆಂಗಳೂರು ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಸಂಬಂಧ ರೈತರಿಂದ ಭೂಮಿ ಸ್ವಾಧೀನ ಮಾಡಿಕೊಂಡ ಸರ್ಕಾರವು ಪರಿಹಾರ ನೀಡಿರಲಿಲ್ಲ.</p><p>ಶ್ರೀರಂಗಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಧೀಶರ ಆದೇಶದ ಮೇರೆಗೆ ನ್ಯಾಯಾಲಯದ ಸಿಬ್ಬಂದಿ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಟೇಬಲ್, ಚೇರ್ಗಳು ಸೇರಿದಂತೆ ಇತರ ಸಾಮಗ್ರಿಗಳನ್ನು ಜಪ್ತಿ ಮಾಡಿ, ಪಾಂಡವಪುರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಾಗಿಸಿದರು.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಹಾಗೂ ಮಾಕಕೊಪ್ಪಲು ರೈತರಾದ ಬಾಲಕೃಷ್ಣ ಮತ್ತು ಚಂದ್ರಶೇಖರ್ ಅವರಿಗೆ ಸೇರಿದ ಗ್ರಾಮದ ಸರ್ವೆ ನಂ.55 ಹಾಗೂ 836ಕ್ಕೆ ಸೇರಿದ 12 ಗುಂಟೆ ಜಮೀನನ್ನು 2013ರಲ್ಲಿ ರೈಲ್ವೆ ಇಲಾಖೆಗೆ ಪಾಂಡವಪುರ ಉಪವಿಭಾಗಾಧಿಕಾರಿ ಸ್ವಾಧೀನಕ್ಕೆ ಪಡೆದಿದ್ದರು. ಆದರೆ ಈ ರೈತರಿಗೆ ₹ 1.37 ಕೋಟಿ ಭೂ ಪರಿಹಾರವನ್ನು ನೀಡಿರಲಿಲ್ಲ.</p><p>ಜಪ್ತಿ ವೇಳೆ ಉಪವಿಭಾಗಾಧಿಕಾರಿಗಳು ಕಚೇರಿಯಲ್ಲಿ ಇರಲಿಲ್ಲ. ಭೂಪರಿಹಾರ ಸಂಬಂಧ ಕಳೆದ ಎರಡು ವರ್ಷಗಳಿಂದ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ 4 ಬಾರಿ ಎಸಿ ಕಚೇರಿಯನ್ನು ಜಪ್ತಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>