<p><strong>ಪಾಂಡವಪುರ (ಮಂಡ್ಯ ಜಿಲ್ಲೆ):</strong> ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರ ಇಟ್ಟಿರುವುದಕ್ಕೆ ಬಲಗೈ ಸಮುದಾಯದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರಿಂದ ಅಂಬೇಡ್ಕರ್ ಜಯಂತಿ ರದ್ದಾಯಿತು.</p><p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರವನ್ನೂ ಇಡಲಾಗಿತ್ತು.</p><p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಲಗೈ ಸಮುದಾಯದ ಮುಖಂಡರು, ‘ಏ.5ರಂದು ಜಗಜೀವನರಾಂ ಭಾವಚಿತ್ರವಿಟ್ಟು ಅವರ ಜಯಂತಿ ಆಚರಿಸಲಾಗಿದೆ. ಅಂಬೇಡ್ಕರ್ ಜಯಂತಿಯ ದಿನ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಜಗಜೀವನರಾಂ ಭಾವಚಿತ್ರ ಇಡುವ ಅಗತ್ಯವಾದರೂ ಏನು’ ಎಂದು ಪ್ರಶ್ನಿಸಿದರು.</p><p>‘ಜಗಜೀವನರಾಂ ಭಾವಚಿತ್ರ ಇಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ’ ಎಂದು ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ ಸಭೆಗೆ ತಿಳಿಸಿದರು. ಬಳಿಕ ಬಲಗೈ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಲು ಮುಂದಾದರು.</p><p>‘ಮಾದಾರ ಮಹಾಸಭಾದ ಮುಖಂಡರು, ಜಗಜೀವನರಾಂ ಭಾವಚಿತ್ರವನ್ನು ತಂದು ಇಡಬೇಕು ಎಂದು ಒತ್ತಾಯಿಸಿದ್ದರಿಂದ ಅವರ ಭಾವಚಿತ್ರವನ್ನು ಇಡಬೇಕಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>ಈ ವೇಳೆ ಅಧಿಕಾರಿಗಳು ಮತ್ತು ಬಲಗೈ ಮುಖಂಡರ ನಡುವೆ ವಾಗ್ವಾದ ನಡೆಯಿತು. ಅಲ್ಲದೆ ಎಡಗೈ ಮತ್ತು ಬಲಗೈ ಸಮುದಾಯದ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.</p><p>ಮತ್ತಷ್ಟು ಕೋಪಗೊಂಡ ಬಲಗೈ ಮುಖಂಡರು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿ, ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಸ್ಥಳಕ್ಕೆ ಬಂದ ಶ್ರೀರಂಗಪಟ್ಟಣ ಸರ್ಕಲ್ ಇನ್ಸ್ಪೆಕ್ಟರ್ ಕುಮಾರ್, ಪಾಂಡವಪುರ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಅವರು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು.</p><p>ಬಳಿಕ ದೂರವಾಣಿಯ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಕುಮಾರ ಅವರು ‘ಏ.17ರ ಬಳಿಕ ಪಾಂಡವಪುರ ಪಟ್ಟಣಕ್ಕೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೊಂದು ದಿನ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ (ಮಂಡ್ಯ ಜಿಲ್ಲೆ):</strong> ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರ ಇಟ್ಟಿರುವುದಕ್ಕೆ ಬಲಗೈ ಸಮುದಾಯದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರಿಂದ ಅಂಬೇಡ್ಕರ್ ಜಯಂತಿ ರದ್ದಾಯಿತು.</p><p>ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರವನ್ನೂ ಇಡಲಾಗಿತ್ತು.</p><p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಲಗೈ ಸಮುದಾಯದ ಮುಖಂಡರು, ‘ಏ.5ರಂದು ಜಗಜೀವನರಾಂ ಭಾವಚಿತ್ರವಿಟ್ಟು ಅವರ ಜಯಂತಿ ಆಚರಿಸಲಾಗಿದೆ. ಅಂಬೇಡ್ಕರ್ ಜಯಂತಿಯ ದಿನ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಜಗಜೀವನರಾಂ ಭಾವಚಿತ್ರ ಇಡುವ ಅಗತ್ಯವಾದರೂ ಏನು’ ಎಂದು ಪ್ರಶ್ನಿಸಿದರು.</p><p>‘ಜಗಜೀವನರಾಂ ಭಾವಚಿತ್ರ ಇಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ’ ಎಂದು ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ ಸಭೆಗೆ ತಿಳಿಸಿದರು. ಬಳಿಕ ಬಲಗೈ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಲು ಮುಂದಾದರು.</p><p>‘ಮಾದಾರ ಮಹಾಸಭಾದ ಮುಖಂಡರು, ಜಗಜೀವನರಾಂ ಭಾವಚಿತ್ರವನ್ನು ತಂದು ಇಡಬೇಕು ಎಂದು ಒತ್ತಾಯಿಸಿದ್ದರಿಂದ ಅವರ ಭಾವಚಿತ್ರವನ್ನು ಇಡಬೇಕಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>ಈ ವೇಳೆ ಅಧಿಕಾರಿಗಳು ಮತ್ತು ಬಲಗೈ ಮುಖಂಡರ ನಡುವೆ ವಾಗ್ವಾದ ನಡೆಯಿತು. ಅಲ್ಲದೆ ಎಡಗೈ ಮತ್ತು ಬಲಗೈ ಸಮುದಾಯದ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.</p><p>ಮತ್ತಷ್ಟು ಕೋಪಗೊಂಡ ಬಲಗೈ ಮುಖಂಡರು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿ, ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಸ್ಥಳಕ್ಕೆ ಬಂದ ಶ್ರೀರಂಗಪಟ್ಟಣ ಸರ್ಕಲ್ ಇನ್ಸ್ಪೆಕ್ಟರ್ ಕುಮಾರ್, ಪಾಂಡವಪುರ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಅವರು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು.</p><p>ಬಳಿಕ ದೂರವಾಣಿಯ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಕುಮಾರ ಅವರು ‘ಏ.17ರ ಬಳಿಕ ಪಾಂಡವಪುರ ಪಟ್ಟಣಕ್ಕೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೊಂದು ದಿನ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>