<p>ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದ ದನಗಳ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಮಹದೇಶ್ವರಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.</p>.<p>ಬೇಬಿಬೆಟ್ಟದ ತಪ್ಪಲಿನಲ್ಲಿರುವ ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಸುತ್ತ ಹುಲಿ ವಾಹನೋತ್ಸವ ನಡೆಯಿತು. ಬೆಳಿಗ್ಗೆ 10ಕ್ಕೆ ಸಿದ್ಧಗೊಂಡಿದ್ದ ರಥೋತ್ಸವಕ್ಕೆ ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವ ಸ್ವಾಮೀಜಿ ಮತ್ತು ರೈತ ಸಂಘದ ನಾಯಕಿ ಸುನೀತಾ ಪುಟ್ಟಣ್ಣಯ್ಯ ಚಾಲನೆ ನೀಡಿದರು.</p>.<p>ಜಾತ್ರೆಗೆ ಬಂದಿದ್ದ ಅಪಾರ ಭಕ್ತರು ರಥಕ್ಕೆ ಹಣ್ಣು, ಜವನ ಎಸೆದು, ಕೈಮುಗಿದ ನಮಸ್ಕರಿಸಿದರು. ‘ಉಘೇ ಉಘೇ ಮಹದೇಶ್ವರ’ ಎಂದು ಘೋಷಣೆ ಕೂಗುತ್ತಾ ರಥವನ್ನು ಎಳೆದರು.</p>.<p>ದನಗಳ ಜಾತ್ರಾ ಮಾಳದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಬೇಬಿಬೆಟ್ಟದ ಸುತ್ತಮುತ್ತಲಿನ ಗ್ರಾಮದ ಅಪಾರ ಜನರು ರಥೋತ್ಸವದಲ್ಲಿ ಭಾಗವಹಿಸಿ ರಥವನ್ನು ಎಳೆದರು. ಮಧ್ಯಾಹ್ನ 3 ಗಂಟೆಯಲ್ಲಿ ರಥೋತ್ಸವವು ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತಲುಪಿ, ಕೊನೆಗೊಂಡಿತು.</p>.<p>ಷಣ್ಮುಖ ಸ್ವಾಮೀಜಿ, ತಾ.ಪಂ. ಇಒ ವೀಣಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದ ದನಗಳ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಮಹದೇಶ್ವರಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.</p>.<p>ಬೇಬಿಬೆಟ್ಟದ ತಪ್ಪಲಿನಲ್ಲಿರುವ ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಸುತ್ತ ಹುಲಿ ವಾಹನೋತ್ಸವ ನಡೆಯಿತು. ಬೆಳಿಗ್ಗೆ 10ಕ್ಕೆ ಸಿದ್ಧಗೊಂಡಿದ್ದ ರಥೋತ್ಸವಕ್ಕೆ ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವ ಸ್ವಾಮೀಜಿ ಮತ್ತು ರೈತ ಸಂಘದ ನಾಯಕಿ ಸುನೀತಾ ಪುಟ್ಟಣ್ಣಯ್ಯ ಚಾಲನೆ ನೀಡಿದರು.</p>.<p>ಜಾತ್ರೆಗೆ ಬಂದಿದ್ದ ಅಪಾರ ಭಕ್ತರು ರಥಕ್ಕೆ ಹಣ್ಣು, ಜವನ ಎಸೆದು, ಕೈಮುಗಿದ ನಮಸ್ಕರಿಸಿದರು. ‘ಉಘೇ ಉಘೇ ಮಹದೇಶ್ವರ’ ಎಂದು ಘೋಷಣೆ ಕೂಗುತ್ತಾ ರಥವನ್ನು ಎಳೆದರು.</p>.<p>ದನಗಳ ಜಾತ್ರಾ ಮಾಳದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಬೇಬಿಬೆಟ್ಟದ ಸುತ್ತಮುತ್ತಲಿನ ಗ್ರಾಮದ ಅಪಾರ ಜನರು ರಥೋತ್ಸವದಲ್ಲಿ ಭಾಗವಹಿಸಿ ರಥವನ್ನು ಎಳೆದರು. ಮಧ್ಯಾಹ್ನ 3 ಗಂಟೆಯಲ್ಲಿ ರಥೋತ್ಸವವು ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತಲುಪಿ, ಕೊನೆಗೊಂಡಿತು.</p>.<p>ಷಣ್ಮುಖ ಸ್ವಾಮೀಜಿ, ತಾ.ಪಂ. ಇಒ ವೀಣಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>