<p><strong>ಪಾಂಡವಪುರ</strong>: ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡಬಾರದು ಎನ್ನುವ ಉದ್ದೇಶದಿಂದ ಪಟ್ಟಣದ ಎಲ್ಲಾ 23 ವಾರ್ಡ್ಗಳಲ್ಲೂ ‘ಹಾಟ್ ಸ್ಪಾಟ್ ಸ್ಥಳ’ಗಳನ್ನು ನಿರ್ಮಿಸಿ ಕಸ ಹಾಕದಂತೆ ತಡೆಯಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.</p>.<p>ಪಟ್ಟಣದ ವಿ.ಸಿ.ಕಾಲೊನಿಯಲ್ಲಿ ಶನಿವಾರ ಹಾಟ್ ಸ್ಪಾಟ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮೊದಲು ಪಟ್ಟಣದ ಶಾಂತಿನಗರದ ಅರಳಿಕಟ್ಟೆ ಸಮೀಪವಿರುವ ವಿಶ್ವೇಶ್ವರಯ್ಯ ನಾಲೆ ಬಳಿ ಕಸಹಾಕದಂತೆ ಹಾಟ್ಸ್ಪಾಟ್ ನಿರ್ಮಿಸಲಾಗಿತ್ತು ಎಂದರು.</p>.<p>ನಿರುಪಯುಕ್ತ ಟೈರ್ಗಳು ಹಾಗೂ ಮರದ ಸಾಮಗ್ರಿಗಳುನ್ನು ಬಳಸಿ ಅವುಗಳಿಗೆ ಬಣ್ಣವನ್ನು ಲೇಪಿಸಿ ಕಸ ಹರಡುತ್ತಿದ್ದ ಸ್ಥಳಗಳಲ್ಲಿ ಹಾಟ್ ಸ್ಪಾಟ್ ನಿರ್ಮಿಸಿದ್ದು, ಸಾರ್ವಜನಿಕರು ಕುಳಿತುಕೊಳ್ಳಲು ಕುರ್ಚಿಗಳ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಬಿಸಾಡಬಾರದು. ಪುರಸಭೆ ವಾಹನಗಳಿಗೆ ಒಣಕಸ ಹಾಗೂ ಹಸಿಕಸವನ್ನು ಪ್ರತ್ಯೇಕಗೊಳಿಸಿ ನೀಡಬೇಕು. ಜತೆಗೆ ವಿಶ್ವೇಶ್ವರಯ್ಯ ನಾಲೆಗೆ ಕೋಳಿ ಹಾಗೂ ಹಂದಿ ತ್ಯಾಜ್ಯಗಳನ್ನು ಬಿಸಾಡಲಾಗುತ್ತಿದೆ. ಇದರಿಂದ ಜನಜಾನುವಾರುಗಳು ಕುಡಿಯುವ ನೀರು ಕಲುಷಿತವಾಗುತ್ತದೆ. ನಾಲೆಗೆ ಇಂತಹ ತ್ಯಾಜ್ಯಗಳನ್ನು ಬಿಸಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಬಳಿಕ ಸ್ಮಶಾನದ ಬಳಿ 15ನೇ ಹಣಕಾಸು ಯೋಜನೆಯಡಿ ನಿರ್ಮಿಸುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಕುಮಾರ್, ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿತ್ತು. ಹಾಗಾಗಿ ರಸ್ತೆಗೆ ಡಾಂಬರೀಕರಣ ಮಾಡಲಾಗುತ್ತಿದೆ ಎಂದರು.</p>.<p>ಪುರಸಭೆ ಎಂಜಿನಿಯರ್ ಯಶಸ್ವಿನಿ ಆರೋಗ್ಯ ನಿರೀಕ್ಷಕ ಮಂಜುನಾಥ್, ಪರಿಸರ ಎಂಜಿನಿಯರ್ ಶಫೀನಾಜ್, ಗುತ್ತಿಗೆದಾರ ಎಚ್.ಸಿ.ಮಹೇಶ್ ಹಾಗೂ ಪುರಸಭೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡಬಾರದು ಎನ್ನುವ ಉದ್ದೇಶದಿಂದ ಪಟ್ಟಣದ ಎಲ್ಲಾ 23 ವಾರ್ಡ್ಗಳಲ್ಲೂ ‘ಹಾಟ್ ಸ್ಪಾಟ್ ಸ್ಥಳ’ಗಳನ್ನು ನಿರ್ಮಿಸಿ ಕಸ ಹಾಕದಂತೆ ತಡೆಯಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.</p>.<p>ಪಟ್ಟಣದ ವಿ.ಸಿ.ಕಾಲೊನಿಯಲ್ಲಿ ಶನಿವಾರ ಹಾಟ್ ಸ್ಪಾಟ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮೊದಲು ಪಟ್ಟಣದ ಶಾಂತಿನಗರದ ಅರಳಿಕಟ್ಟೆ ಸಮೀಪವಿರುವ ವಿಶ್ವೇಶ್ವರಯ್ಯ ನಾಲೆ ಬಳಿ ಕಸಹಾಕದಂತೆ ಹಾಟ್ಸ್ಪಾಟ್ ನಿರ್ಮಿಸಲಾಗಿತ್ತು ಎಂದರು.</p>.<p>ನಿರುಪಯುಕ್ತ ಟೈರ್ಗಳು ಹಾಗೂ ಮರದ ಸಾಮಗ್ರಿಗಳುನ್ನು ಬಳಸಿ ಅವುಗಳಿಗೆ ಬಣ್ಣವನ್ನು ಲೇಪಿಸಿ ಕಸ ಹರಡುತ್ತಿದ್ದ ಸ್ಥಳಗಳಲ್ಲಿ ಹಾಟ್ ಸ್ಪಾಟ್ ನಿರ್ಮಿಸಿದ್ದು, ಸಾರ್ವಜನಿಕರು ಕುಳಿತುಕೊಳ್ಳಲು ಕುರ್ಚಿಗಳ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಬಿಸಾಡಬಾರದು. ಪುರಸಭೆ ವಾಹನಗಳಿಗೆ ಒಣಕಸ ಹಾಗೂ ಹಸಿಕಸವನ್ನು ಪ್ರತ್ಯೇಕಗೊಳಿಸಿ ನೀಡಬೇಕು. ಜತೆಗೆ ವಿಶ್ವೇಶ್ವರಯ್ಯ ನಾಲೆಗೆ ಕೋಳಿ ಹಾಗೂ ಹಂದಿ ತ್ಯಾಜ್ಯಗಳನ್ನು ಬಿಸಾಡಲಾಗುತ್ತಿದೆ. ಇದರಿಂದ ಜನಜಾನುವಾರುಗಳು ಕುಡಿಯುವ ನೀರು ಕಲುಷಿತವಾಗುತ್ತದೆ. ನಾಲೆಗೆ ಇಂತಹ ತ್ಯಾಜ್ಯಗಳನ್ನು ಬಿಸಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಬಳಿಕ ಸ್ಮಶಾನದ ಬಳಿ 15ನೇ ಹಣಕಾಸು ಯೋಜನೆಯಡಿ ನಿರ್ಮಿಸುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಕುಮಾರ್, ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿತ್ತು. ಹಾಗಾಗಿ ರಸ್ತೆಗೆ ಡಾಂಬರೀಕರಣ ಮಾಡಲಾಗುತ್ತಿದೆ ಎಂದರು.</p>.<p>ಪುರಸಭೆ ಎಂಜಿನಿಯರ್ ಯಶಸ್ವಿನಿ ಆರೋಗ್ಯ ನಿರೀಕ್ಷಕ ಮಂಜುನಾಥ್, ಪರಿಸರ ಎಂಜಿನಿಯರ್ ಶಫೀನಾಜ್, ಗುತ್ತಿಗೆದಾರ ಎಚ್.ಸಿ.ಮಹೇಶ್ ಹಾಗೂ ಪುರಸಭೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>