ಗ್ರಾಮಗಳಲ್ಲಿ ನಡೆಯುವ ಮಹದೇಶ್ವರಸ್ವಾಮಿ ಜಾತ್ರೆ, ಹುಲಿವಾಹನೋತ್ಸವ ಸಂದರ್ಭದಲ್ಲಿ ಹುಲಿವೇಷದ ಪರಿಕರ, ಹುಲಿ ಗೊಂಬೆಗಳನ್ನು ಬಹಳ ದಿನಗಳ ಹಿಂದೆಯೇ ತೊಣ್ಣೂರು ಕೆರೆಗೆ ಬಿಡಲಾಗಿತ್ತು. ಮಳೆಯಾಗಿ ಕೆರೆಗೆ ಹೊಸ ನೀರು ಹರಿದು ಬಂದ ಪರಿಣಾಮ ಬುಧವಾರ ಗೊಂಬೆಗಳು, ಹುಲಿ ಚರ್ಮದಂತಿರುವ ಮೇಲ್ಪದರ ಮೇಲೆ ಬಂದು ತೇಲುತ್ತಿದ್ದವು.