<p><strong>ಪಾಂಡವಪುರ:</strong> ಪ್ರತ್ಯೇಕ ಘಟನೆಗಳಲ್ಲಿ ಬಿಸಿಲಿನ ತಾಪ ತಣಿಸಿಕೊಳ್ಳಲು ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. </p><p>ತಾಲ್ಲೂಕಿನ ಸುಂಕಾತೊಣ್ಣುರು ಗ್ರಾಮದ ಜಯರಾಮೇಗೌಡ ಅವರ ಪುತ್ರ ಎಸ್.ಟಿ. ಶಶಾಂಕ್ (19) ಅವರು ಭಾನುವಾರ ಕುರಹಟ್ಟಿ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ಆಯತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. </p><p>ಶಶಾಂಕ್ ಈಜುತ್ತಿದ್ದ ಸ್ಥಳದ 500 ಮೀಟರ್ ದೂರದಲ್ಲಿ ಸೋಮವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಮತ್ತೊಂದು ಘಟನೆಯಲ್ಲಿ, ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ವೆಂಕಟೇಶ್ ಅವರ ಪುತ್ರ ವಿದ್ಯಾರ್ಥಿ ಗೌತಮ್ ಗೌಡ (14) ಅವರು ಭಾನುವಾರ ಗ್ರಾಮದ ಬಳಿ ಇರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.</p><p>ಸೋಮವಾರ ಸಂಜೆ ತಾಲ್ಲೂಕಿನ ಆನುವಾಳು ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಗೌತಮ್ ಗೌಡ ಅವರು ಮೃತದೇಹವು ಪತ್ತೆಯಾಗಿದ್ದು, ಕ್ಯಾತನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಗೌತಮ್ ಗೌಡ ಅವರು ಕೆ.ಬೆಟ್ಟಹಳ್ಳಿ ವಿವೇಕಾನಂದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು, ಪರೀಕ್ಷೆ ಮುಗಿದು ಬೇಸಿಗೆ ರಜೆ ಇದ್ದುದ್ದರಿಂದ ಈಜಲು ಹೋಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ಪ್ರತ್ಯೇಕ ಘಟನೆಗಳಲ್ಲಿ ಬಿಸಿಲಿನ ತಾಪ ತಣಿಸಿಕೊಳ್ಳಲು ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. </p><p>ತಾಲ್ಲೂಕಿನ ಸುಂಕಾತೊಣ್ಣುರು ಗ್ರಾಮದ ಜಯರಾಮೇಗೌಡ ಅವರ ಪುತ್ರ ಎಸ್.ಟಿ. ಶಶಾಂಕ್ (19) ಅವರು ಭಾನುವಾರ ಕುರಹಟ್ಟಿ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ಆಯತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. </p><p>ಶಶಾಂಕ್ ಈಜುತ್ತಿದ್ದ ಸ್ಥಳದ 500 ಮೀಟರ್ ದೂರದಲ್ಲಿ ಸೋಮವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಮತ್ತೊಂದು ಘಟನೆಯಲ್ಲಿ, ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ವೆಂಕಟೇಶ್ ಅವರ ಪುತ್ರ ವಿದ್ಯಾರ್ಥಿ ಗೌತಮ್ ಗೌಡ (14) ಅವರು ಭಾನುವಾರ ಗ್ರಾಮದ ಬಳಿ ಇರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.</p><p>ಸೋಮವಾರ ಸಂಜೆ ತಾಲ್ಲೂಕಿನ ಆನುವಾಳು ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಗೌತಮ್ ಗೌಡ ಅವರು ಮೃತದೇಹವು ಪತ್ತೆಯಾಗಿದ್ದು, ಕ್ಯಾತನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಗೌತಮ್ ಗೌಡ ಅವರು ಕೆ.ಬೆಟ್ಟಹಳ್ಳಿ ವಿವೇಕಾನಂದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು, ಪರೀಕ್ಷೆ ಮುಗಿದು ಬೇಸಿಗೆ ರಜೆ ಇದ್ದುದ್ದರಿಂದ ಈಜಲು ಹೋಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>