‘ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡ ಕಾಂಗ್ರೆಸ್– ಜೆಡಿಎಸ್, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ದೋಸ್ತಿ ಮುಂದುವರಿಸಬೇಕಾಗಿತ್ತು. ಆದರೆ ಎರಡೂ ಪಕ್ಷಗಳ ನಡುವೆ ಹೊಂದಾಣಿಕೆಯ ಕೊರತೆಯುಂಟಾಗಿ ಸ್ಥಳೀಯ ಚುನಾವಣೆಯಲ್ಲಿ ಕುಸ್ತಿ ಮಾಡುತ್ತಿವೆ. ಕಪಟ ನಾಟಕ ಪ್ರದರ್ಶಿಸುತ್ತಿವೆ. ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ಹಣ ಇಲ್ಲದಾಗಿದೆ. ರೈತರ ಸಾಲ ಮನ್ನಾ ನೆಪವೊಡ್ಡಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ’ ಎಂದು ಆರೋಪಿಸಿದರು.