<p><strong>ಮದ್ದೂರು</strong>: ‘ಗೋನಿಯೋಜಸ್ ಪರೋಪಜೀವಿ ಉತ್ಪಾದನಾ ಪ್ರಯೋಗ ಶಾಲೆಯಿಂದ ತೆಂಗು ಬೆಳೆಗಾರರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪಟ್ಟಣದ ತೋಟಗಾರಿಕೆ ಇಲಾಖೆ ಕಟ್ಟಡದ ಬಳಿ ನಿರ್ಮಿಸಿರುವ ಗೋನಿಯೋಜಸ್ ಪರೋಪ ಜೀವಿ ಉತ್ಪಾದನಾ ಪ್ರಯೋಗ ಶಾಲೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ರೈತರಿಗೆ ತೆಂಗು ಬೆಳೆ ಆರ್ಥಿಕ ಮೂಲಗಳ ಬೆಳೆಯಾಗಿದ್ದು, ಹಲವು ವರ್ಷಗಳಿಂದ ತೆಂಗು ಬೆಳೆಗೆ ನುಸಿಪೀಡೆ ರೋಗ ಹಾಗೂ ಕಪ್ಪು ತಲೆಹುಳು ಕಾಟದಿಂದಾಗಿ ರೈತರು ತೊಂದರೆಗೊಳಗಾಗಿದ್ದರು. ಈ ಪ್ರಯೋಗಶಾಲೆಯಿಂದ ಕೀಟಬಾಧೆಗಳನ್ನು ಹತೋಟಿಗೆ ತರಬಹುದು’ ಎಂದರು.</p>.<p>ತೊಟಗಾರಿಕೆ ಇಲಾಖೆಯ ಅಧಿಕಾರಿಗಳು ನಿಗದಿತ ಸಮಯಕ್ಕೆ ತೆಂಗಿಗೆ ಯಾವುದೇ ರೀತಿ ರೋಗ ಬಾರದಂತೆ ಕೀಟನಾಶಕ ಸಂಪಡಣೆ, ಬೇವಿನ ಹಿಂಡಿ ವಿತರಣೆ ಹಾಗೂ ರೈತರಿಗೆ ವಿಶೇಷ ಕಾರ್ಯಾಗಾರಗಳನ್ನು ಹಾಗೂ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಂಡು ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು’ ಎಂದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯ ನಿರ್ದೇಶಕಿ ಕೆ.ಎಂ.ರೇಖಾ ಮಾತನಾಡಿ, ‘2025 -26ರ ನರೇಗಾ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಯಾಗಿರುವ ರೈತರು ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯಡಿ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಹನಿ ನೀರಾವರಿ ಯೋಜನೆ ಅಡಿ ಶೇ 90ರಷ್ಟು ಸಹಾಯ ಧನವಿದ್ದು (ಅಡಿಕೆ ಬೆಳೆ ಹೊರತುಪಡಿಸಿ)ಇದರ ಉಪಯೋಗವನ್ನು ಪಡೆದುಕೊಳ್ಳುಬೇಕು’ ಎಂದರು.</p>.<p>‘ತಾಳೆ ಗಿಡಗಳನ್ನು ಇಲಾಖೆಯಿಂದ ಉಚಿತವಾಗಿ ಪಡೆದು ನಾಟಿ ಮಾಡಿ ನಿರ್ವಹಣೆ ಮತ್ತು ಇತರೆ ಸೌಲಭ್ಯಗಳಿಗೆ ಸಹಾಯಧನ ಪಡೆಯಬಹುದು’ ಎಂದರು.</p>.<p>ಇಲಾಖೆಯ ಸಿಬ್ಬಂದಿ ಸಂಪತ್, ಪದ್ಮ, ದಿವ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ‘ಗೋನಿಯೋಜಸ್ ಪರೋಪಜೀವಿ ಉತ್ಪಾದನಾ ಪ್ರಯೋಗ ಶಾಲೆಯಿಂದ ತೆಂಗು ಬೆಳೆಗಾರರಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪಟ್ಟಣದ ತೋಟಗಾರಿಕೆ ಇಲಾಖೆ ಕಟ್ಟಡದ ಬಳಿ ನಿರ್ಮಿಸಿರುವ ಗೋನಿಯೋಜಸ್ ಪರೋಪ ಜೀವಿ ಉತ್ಪಾದನಾ ಪ್ರಯೋಗ ಶಾಲೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ರೈತರಿಗೆ ತೆಂಗು ಬೆಳೆ ಆರ್ಥಿಕ ಮೂಲಗಳ ಬೆಳೆಯಾಗಿದ್ದು, ಹಲವು ವರ್ಷಗಳಿಂದ ತೆಂಗು ಬೆಳೆಗೆ ನುಸಿಪೀಡೆ ರೋಗ ಹಾಗೂ ಕಪ್ಪು ತಲೆಹುಳು ಕಾಟದಿಂದಾಗಿ ರೈತರು ತೊಂದರೆಗೊಳಗಾಗಿದ್ದರು. ಈ ಪ್ರಯೋಗಶಾಲೆಯಿಂದ ಕೀಟಬಾಧೆಗಳನ್ನು ಹತೋಟಿಗೆ ತರಬಹುದು’ ಎಂದರು.</p>.<p>ತೊಟಗಾರಿಕೆ ಇಲಾಖೆಯ ಅಧಿಕಾರಿಗಳು ನಿಗದಿತ ಸಮಯಕ್ಕೆ ತೆಂಗಿಗೆ ಯಾವುದೇ ರೀತಿ ರೋಗ ಬಾರದಂತೆ ಕೀಟನಾಶಕ ಸಂಪಡಣೆ, ಬೇವಿನ ಹಿಂಡಿ ವಿತರಣೆ ಹಾಗೂ ರೈತರಿಗೆ ವಿಶೇಷ ಕಾರ್ಯಾಗಾರಗಳನ್ನು ಹಾಗೂ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಂಡು ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು’ ಎಂದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯ ನಿರ್ದೇಶಕಿ ಕೆ.ಎಂ.ರೇಖಾ ಮಾತನಾಡಿ, ‘2025 -26ರ ನರೇಗಾ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಯಾಗಿರುವ ರೈತರು ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯಡಿ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಹನಿ ನೀರಾವರಿ ಯೋಜನೆ ಅಡಿ ಶೇ 90ರಷ್ಟು ಸಹಾಯ ಧನವಿದ್ದು (ಅಡಿಕೆ ಬೆಳೆ ಹೊರತುಪಡಿಸಿ)ಇದರ ಉಪಯೋಗವನ್ನು ಪಡೆದುಕೊಳ್ಳುಬೇಕು’ ಎಂದರು.</p>.<p>‘ತಾಳೆ ಗಿಡಗಳನ್ನು ಇಲಾಖೆಯಿಂದ ಉಚಿತವಾಗಿ ಪಡೆದು ನಾಟಿ ಮಾಡಿ ನಿರ್ವಹಣೆ ಮತ್ತು ಇತರೆ ಸೌಲಭ್ಯಗಳಿಗೆ ಸಹಾಯಧನ ಪಡೆಯಬಹುದು’ ಎಂದರು.</p>.<p>ಇಲಾಖೆಯ ಸಿಬ್ಬಂದಿ ಸಂಪತ್, ಪದ್ಮ, ದಿವ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>