ಕೆರಗೋಡು: ತೀವ್ರ ಅಸ್ವಸ್ಥರಾಗಿದ್ದ ರೋಗಿಯೊಬ್ಬರನ್ನು ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲು ತೆರಳಿದಾಗ ಅಲ್ಲಿ ಸಿಬ್ಬಂದಿ ಇಲ್ಲದ ಕಾರಣ ಚಿಕಿತ್ಸೆ ದೊರಕದೆ ಅವರು ನಿಧನರಾಗಿದ್ದಾರೆ. ಆರೋಗ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿ ಗುರುವಾರ ಕೇಂದ್ರದ ಬಳಿ ಸಂಬಂಧಿಕರು, ಸಾರ್ವಜನಿಕರು ಪ್ರತಿಭಟನೆ ನಡೆಸಿದರು.