<p><strong>ಕಿಕ್ಕೇರಿ:</strong> ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಕೆಡಿಪಿ ಮೂಲಕ ಕಾರ್ಯವ್ಯಾಪ್ತಿ ವಿಶಾಲವಾಗಿದ್ದು, ಚಳಿ ಬಿಟ್ಟು ಕೆಲಸ ಮಾಡಿ ಎಂದು ಶಾಸಕ ಎಚ್.ಟಿ. ಮಂಜು ತಿಳಿಸಿದರು.</p>.<p>ಹೋಬಳಿಯ ಸಾಸಲು ಗ್ರಾಮದಲ್ಲಿ ಭಾನುವಾರ ಬಿ.ಆರ್. ಅಂಬೇಡ್ಕರ್ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟಿಸಿ ಮಾತನಾಡಿದರು.</p>.<p>‘ಪಿಡಿಒಗಳು ಅಂಜದೇ ಗ್ರಾಮಾಭಿವೃದ್ಧಿಗೆ ಕೆಲಸ ಮಾಡಿ. ಸಂಘಕ್ಕೆ ₹5 ಲಕ್ಷ ಅನುದಾನ ಬಂದಿದೆ. ಅನುದಾನ ಹಣವನ್ನು ಹಂಚಿಕೊಳ್ಳದೆ ಮತ್ತಷ್ಟು ಹಣವನ್ನು ಬ್ಯಾಂಕ್ಗಳಲ್ಲಿ ಸಾಲವಾಗಿ ಪಡೆಯಿರಿ. ಕುಕ್ಕುಟ ಫಾರಂ ಆರಂಭಿಸಿ. ಸಂಘದ ಅಭಿವೃದ್ಧಿಯೊಂದಿಗೆ ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಸವಲತ್ತುಗಳಿದ್ದು, ಸದ್ಬಳಕೆ ಮಾಡಿಕೊಳ್ಳಿ’ ಎಂದರು.</p>.<p>‘ಸಂಘದ ಮಹಿಳೆಯರು ಗ್ರಾಮದಲ್ಲಿ ಸಣ್ಣಪುಟ್ಟ ಸಮಾರಂಭ ಮಾಡಲು ಸಮಸ್ಯೆಯಾಗಿದ್ದು, ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಿಕೊಡಿ’ ಎಂದರು.</p>.<p>‘ಗ್ರಾಮದ ಬಹುತೇಕ ರಸ್ತೆಗಳು ಗುಂಡಿಬಿದ್ದಿದ್ದು, ಚರಂಡಿ, ಸೇತುವೆ ಮಾಡದೆ ರಸ್ತೆ ಕಾಮಗಾರಿ ಮಾಡಲಾಗಿದೆ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಗ್ರಾಮಸ್ಥರು ಅಲವತ್ತುಕೊಂಡರು.</p>.<p>ಸೂಕ್ತ ಮಾಹಿತಿ ಪಡೆದು ಲೋಪವಾಗಿರುವುದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಶಾಸಕರು ನುಡಿದರು.</p>.<p>ಐಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಶಂಭುಲಿಂಗಯ್ಯ, ಉಪಾಧ್ಯಕ್ಷ ಈರಾಜು, ಐನೋರಹಳ್ಳಿ ಮಲ್ಲೇಶ್, ಕರವೇ ಗುರುಮೂರ್ತಿ, ಪಿಡಿಒ ವಿಜಯ್, ಡೇರಿ ಜಗದೀಶ್, ಸಂಘದ ಚಿನ್ನಮ್ಮ, ಶಿವಮ್ಮ, ಜಯಮ್ಮ, ನಿಂಗಮ್ಮ ಭಾಗವಹಿಸಿದ್ದರು. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಕೆಡಿಪಿ ಮೂಲಕ ಕಾರ್ಯವ್ಯಾಪ್ತಿ ವಿಶಾಲವಾಗಿದ್ದು, ಚಳಿ ಬಿಟ್ಟು ಕೆಲಸ ಮಾಡಿ ಎಂದು ಶಾಸಕ ಎಚ್.ಟಿ. ಮಂಜು ತಿಳಿಸಿದರು.</p>.<p>ಹೋಬಳಿಯ ಸಾಸಲು ಗ್ರಾಮದಲ್ಲಿ ಭಾನುವಾರ ಬಿ.ಆರ್. ಅಂಬೇಡ್ಕರ್ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟಿಸಿ ಮಾತನಾಡಿದರು.</p>.<p>‘ಪಿಡಿಒಗಳು ಅಂಜದೇ ಗ್ರಾಮಾಭಿವೃದ್ಧಿಗೆ ಕೆಲಸ ಮಾಡಿ. ಸಂಘಕ್ಕೆ ₹5 ಲಕ್ಷ ಅನುದಾನ ಬಂದಿದೆ. ಅನುದಾನ ಹಣವನ್ನು ಹಂಚಿಕೊಳ್ಳದೆ ಮತ್ತಷ್ಟು ಹಣವನ್ನು ಬ್ಯಾಂಕ್ಗಳಲ್ಲಿ ಸಾಲವಾಗಿ ಪಡೆಯಿರಿ. ಕುಕ್ಕುಟ ಫಾರಂ ಆರಂಭಿಸಿ. ಸಂಘದ ಅಭಿವೃದ್ಧಿಯೊಂದಿಗೆ ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಸವಲತ್ತುಗಳಿದ್ದು, ಸದ್ಬಳಕೆ ಮಾಡಿಕೊಳ್ಳಿ’ ಎಂದರು.</p>.<p>‘ಸಂಘದ ಮಹಿಳೆಯರು ಗ್ರಾಮದಲ್ಲಿ ಸಣ್ಣಪುಟ್ಟ ಸಮಾರಂಭ ಮಾಡಲು ಸಮಸ್ಯೆಯಾಗಿದ್ದು, ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಿಕೊಡಿ’ ಎಂದರು.</p>.<p>‘ಗ್ರಾಮದ ಬಹುತೇಕ ರಸ್ತೆಗಳು ಗುಂಡಿಬಿದ್ದಿದ್ದು, ಚರಂಡಿ, ಸೇತುವೆ ಮಾಡದೆ ರಸ್ತೆ ಕಾಮಗಾರಿ ಮಾಡಲಾಗಿದೆ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಗ್ರಾಮಸ್ಥರು ಅಲವತ್ತುಕೊಂಡರು.</p>.<p>ಸೂಕ್ತ ಮಾಹಿತಿ ಪಡೆದು ಲೋಪವಾಗಿರುವುದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಶಾಸಕರು ನುಡಿದರು.</p>.<p>ಐಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಶಂಭುಲಿಂಗಯ್ಯ, ಉಪಾಧ್ಯಕ್ಷ ಈರಾಜು, ಐನೋರಹಳ್ಳಿ ಮಲ್ಲೇಶ್, ಕರವೇ ಗುರುಮೂರ್ತಿ, ಪಿಡಿಒ ವಿಜಯ್, ಡೇರಿ ಜಗದೀಶ್, ಸಂಘದ ಚಿನ್ನಮ್ಮ, ಶಿವಮ್ಮ, ಜಯಮ್ಮ, ನಿಂಗಮ್ಮ ಭಾಗವಹಿಸಿದ್ದರು. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>