<p><strong>ಕೆ.ಆರ್.ಪೇಟೆ:</strong> ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.</p>.<p> ಶಾಸಕ ಎಚ್.ಟಿ.ಮಂಜು ಮಾತನಾಡಿ, ‘ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಜೆಡಿಎಸ್ ಪಕ್ಷ ಎಂದೂ ಬೆಂಬಲಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಆಶ್ಲೀಲ ಸಿ.ಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಿ ರಾಜ್ಯದ ಮಹಿಳೆಯರ ಮಾನ ದೇಶ ವಿದೇಶಗಳಲ್ಲಿ ಹರಾಜು ಹಾಕಿದವರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.</p>.<p>‘ಎಲ್. ಆರ್.ಶಿವರಾಮೇಗೌಡರಿಗೆ ಜೆಡಿಎಸ್ ಪಕ್ಷ ಹಲವು ಬಾರಿ ರಾಜಕೀಯದಲ್ಲಿ ಪುನರ್ ಜನ್ಮನೀಡಿತು. ಆದರೆ, ಅವರು ಅದನ್ನು ಉಳಿಸಿಕೊಳ್ಳದೆ ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರದಲ್ಲಿ ತೊಡಗಿದ್ದು ಜಿಲ್ಲೆಯ ಜನ ಈ ನಡವಳಿಕೆಗಳಿಂದ ಈಗಾಗಲೇ ಅವರನ್ನು ಕಸದಬುಟ್ಟಿಗೆ ಎಸೆದಿದ್ದಾರೆ. ಅವರಿಗೆ ಪಕ್ಷದ ದಿಕ್ಕಾರವಿದೆ’ ಎಂದರು.</p>.<p> ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಮಾತನಾಡಿ,‘ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸದಿದ್ದರೆ ಜೆ.ಡಿ.ಎಸ್ ಪಕ್ಷ ತನ್ನ ಚಳವಳಿಯನ್ನು ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ತೆಗೆದುಕೊಂಡು ಹೋಗಲಿದೆ’ ಎಂದರು. </p>.<p>ಮಾನವ ಸರಪಳಿಯಿಂದ ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯುಂಟಾಗಿತ್ತು. ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕಿರಾಂ, ಮನ್ ಮುಲ್ ನಿರ್ದೇಶಕ ಡಾಲು ರವಿ, ಎಂ. ಬಿ. ಹರೀಶ್, ಎಂ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಮುಖಂಡರಾದ ನಾಟನಹಳ್ಳಿ ಗಂಗಾಧರ್, ಮಲ್ಲೇನಹಳ್ಳಿ ಮೋಹನ್, ವಕೀಲ ಧನಂಜಯಕುಮಾರ್, ಅಗ್ರಹಾರ ಬಾಚಹಳ್ಳಿ ನಾಗೇಶ್, ಬಿ.ಎಂ.ಕಿರಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.</p>.<p> ಶಾಸಕ ಎಚ್.ಟಿ.ಮಂಜು ಮಾತನಾಡಿ, ‘ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಜೆಡಿಎಸ್ ಪಕ್ಷ ಎಂದೂ ಬೆಂಬಲಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಆಶ್ಲೀಲ ಸಿ.ಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಿ ರಾಜ್ಯದ ಮಹಿಳೆಯರ ಮಾನ ದೇಶ ವಿದೇಶಗಳಲ್ಲಿ ಹರಾಜು ಹಾಕಿದವರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.</p>.<p>‘ಎಲ್. ಆರ್.ಶಿವರಾಮೇಗೌಡರಿಗೆ ಜೆಡಿಎಸ್ ಪಕ್ಷ ಹಲವು ಬಾರಿ ರಾಜಕೀಯದಲ್ಲಿ ಪುನರ್ ಜನ್ಮನೀಡಿತು. ಆದರೆ, ಅವರು ಅದನ್ನು ಉಳಿಸಿಕೊಳ್ಳದೆ ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರದಲ್ಲಿ ತೊಡಗಿದ್ದು ಜಿಲ್ಲೆಯ ಜನ ಈ ನಡವಳಿಕೆಗಳಿಂದ ಈಗಾಗಲೇ ಅವರನ್ನು ಕಸದಬುಟ್ಟಿಗೆ ಎಸೆದಿದ್ದಾರೆ. ಅವರಿಗೆ ಪಕ್ಷದ ದಿಕ್ಕಾರವಿದೆ’ ಎಂದರು.</p>.<p> ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಮಾತನಾಡಿ,‘ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸದಿದ್ದರೆ ಜೆ.ಡಿ.ಎಸ್ ಪಕ್ಷ ತನ್ನ ಚಳವಳಿಯನ್ನು ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ತೆಗೆದುಕೊಂಡು ಹೋಗಲಿದೆ’ ಎಂದರು. </p>.<p>ಮಾನವ ಸರಪಳಿಯಿಂದ ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯುಂಟಾಗಿತ್ತು. ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕಿರಾಂ, ಮನ್ ಮುಲ್ ನಿರ್ದೇಶಕ ಡಾಲು ರವಿ, ಎಂ. ಬಿ. ಹರೀಶ್, ಎಂ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಮುಖಂಡರಾದ ನಾಟನಹಳ್ಳಿ ಗಂಗಾಧರ್, ಮಲ್ಲೇನಹಳ್ಳಿ ಮೋಹನ್, ವಕೀಲ ಧನಂಜಯಕುಮಾರ್, ಅಗ್ರಹಾರ ಬಾಚಹಳ್ಳಿ ನಾಗೇಶ್, ಬಿ.ಎಂ.ಕಿರಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>