<p><strong>ಪಾಂಡವಪುರ</strong>: ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮನಸ್ಸಿಲ್ಲದ ಮನಸ್ಸಿನಲ್ಲಿ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರ ಪ್ರಚಾರ ಮಾಡಲು ಬರಬೇಕಾಯಿತು’ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಹೇಳಿದರು.</p>.<p>ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಭಾನುವಾರ ಮಕ್ಕಳ ಸಾಹಿತ್ಯ ಪರಿಷತ್, ತೇಜಸ್ವಿ ಅಭಿಮಾನಿಗಳ ಬಳಗ, ತ್ರಿ ಸೃಜನ ವೇದಿಕೆ ಆಯೋಜಿಸಿದ್ದ ‘ನಮ್ಮ ಗ್ರಾಮ ನಮ್ಮ ಹಕ್ಕು’ ಹೆಸರಿನಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಜೆಡಿಎಸ್– ಬಿಎಸ್ಪಿಯೊಂದಿಗೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿತ್ತು. ಈ ಕಾರಣದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಪಾಂಡವಪುರದಲ್ಲಿ ನಡೆದಿದ್ದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ. ಹೋರಾಟದ ಹಿನ್ನೆಲೆಯಿಂದ ಬಂದಿದ್ದವನಾಗಿದ್ದರಿಂದ ಈ ಕ್ಷೇತ್ರದಲ್ಲಿ ರೈತ ಸಂಘದ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬರಬೇಕಾಗಿದ್ದವನು, ಜೆಡಿಎಸ್ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬರಬೇಕಾಯಿತು’ ಎಂದರು.</p>.<p>‘ವಾಸ್ತವವಾಗಿ ಜನರು ಭ್ರಷ್ಟರಲ್ಲ. ಆದರೆ, ರಾಜಕಾರಣಿಗಳಾದ ನಾವು ಜನರನ್ನು ಭ್ರಷ್ಟರನ್ನಾಗಿ ಮಾಡಿದ್ದೇವೆ. ಚುನಾವಣೆಯಲ್ಲಿ ಮತದಾರನಿಗೆ ಹಣ ನೀಡಿ ಚುನಾವಣೆಯನ್ನೇ ಭ್ರಷ್ಟಗೊ ಳಿಸಲಾಗಿದೆ. ಜಾತಿ, ಹಣದ ಹೆಸರಿನಲ್ಲಿ ಚುನಾವಣೆ ನಡೆಯುತ್ತಿರುವುದು ಪ್ರಜಾಪ್ರಭುತ್ವದ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಮತದಾರರನ್ನು ಭ್ರಷ್ಟರನ್ನಾಗಿ ಮಾಡಿರುವುದರಿಂದ ಚುನಾವಣೆ ಯಿಂದ ಚುನಾವಣೆಗೆ ಅಭ್ಯರ್ಥಿಯ ಚುನಾವಣೆ ವೆಚ್ಚ ದುಬಾರಿಯಾಗುತ್ತಿದೆ. ಇದರಿಂದಲೇ ಭ್ರಷ್ಟಾಚಾರ ವಿಸ್ತಾರ ಗೊಳ್ಳುತ್ತಾ ಸಾಗಿದ್ದು, ಸಹಜ ಎಂಬಂತಾ ಗಿದೆ. ಇದನ್ನು ತಡೆಯದಿದ್ದರೆ ಪ್ರಜಾ ಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದರು.</p>.<p class="Subhead"><strong>ರಾಜಕಾರಣದಲ್ಲಿ ರಾಜಿ ಅನಿವಾರ್ಯ:</strong> ರಾಜಕಾರಣ ಮಾಡಬೇಕೆಂದರೆ ನಾವು ವ್ಯವಸ್ಥೆಯೊಡನೆ ಒಂದಿಷ್ಟು ರಾಜಿ ಮಾಡಿಕೊಳ್ಳಬೇಕಿದೆ. ಜನರ ಭಾವನೆಗಳಿಗೆ ಸ್ಪಂದಿಸಬೇಕಿದೆ. ನಮ್ಮ ಮನಸ್ಸಿಗೆ ಒಪ್ಪಲಿ ಬಿಡಲಿ ರಾಜಕಾರಣಕ್ಕಾಗಿ ಹೊಂದಿಕೊಂಡು ಹೋಗಬೇಕಿದೆ ಎಂದರು.</p>.<p><strong>ಯುವಕರಿಂದ ಸಾಧ್ಯ: </strong>ಪ್ರತಿ ಕ್ಷೇತ್ರದಲ್ಲಿರುವ ವಿದ್ಯಾವಂತ ಯವ ಸಮುದಾಯ ಇಂಥ ವ್ಯವಸ್ಥೆಯನ್ನು ಅರ್ಥಮಾಡಿಕೊಂಡು ಜಾತಿ–ಹಣ ಮುಕ್ತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಹೊರಬೇಕಿದೆ. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಕನಿಷ್ಠ ಶೇ 20ರಷ್ಟು ಯುವಕ–ಯುವತಿಯವರು ಬದ್ಧತೆಯಿಂದ ಕೆಲಸ ಮಾಡಿದರ ಮಾತ್ರ ಚುನಾವಣೆ ಭ್ರಷ್ಟಾಚಾರ ತಡೆಯಬಹುದು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಅರಳಕುಪ್ಪೆಯ ಎ.ಆರ್.ರೂಪಾ, ಹರವು ಗ್ರಾ.ಪಂ.ನ ವೈ.ಎಚ್.ಮಂಜು ನಾಥ ಅಭಿಪ್ರಾಯ ಹಂಚಿಕೊಂಡರು.</p>.<p>ನಾಲ್ಕು ಬಾರಿ ಆಯ್ಕೆಯಾಗಿರುವ ಬಾಬುರಾಯನಕೊಪ್ಪಲಿನ ಬಿ.ಎಂ.ಶ್ರೀನಿವಾಸ್ ಕಾರ್ಯಕ್ರಮ ಉದ್ಫಾಟಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಹಿರಿಯ ಮುಖಂಡ ಕೆ.ಟಿ.ಗೋವಿಂದೇಗೌಡ ಮಾತನಾಡಿದರು.</p>.<p>ಮಕ್ಕಳ ಸಾಹಿತ್ಯ ಪರಿಷತ್ತಿನ ಎಚ್.ಆರ್.ಧನ್ಯಕುಮಾರ್, ತೇಜಸ್ವಿ ಅಭಿಮಾನಿಗಳ ಬಳಗ ಮತ್ತು ತ್ರಿ ಸೃಜನ ವೇದಿಕೆಯ ಡಾ.ಅಭಿನಯ್, ಅಮಿತ್, ಗುರು ಕ್ಯಾತನಹಳ್ಳಿ, ರವಿಕುಮಾರ್, ಪ್ರಸನ್ನ, ಹರೀಶ್, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮನಸ್ಸಿಲ್ಲದ ಮನಸ್ಸಿನಲ್ಲಿ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರ ಪ್ರಚಾರ ಮಾಡಲು ಬರಬೇಕಾಯಿತು’ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಹೇಳಿದರು.</p>.<p>ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಭಾನುವಾರ ಮಕ್ಕಳ ಸಾಹಿತ್ಯ ಪರಿಷತ್, ತೇಜಸ್ವಿ ಅಭಿಮಾನಿಗಳ ಬಳಗ, ತ್ರಿ ಸೃಜನ ವೇದಿಕೆ ಆಯೋಜಿಸಿದ್ದ ‘ನಮ್ಮ ಗ್ರಾಮ ನಮ್ಮ ಹಕ್ಕು’ ಹೆಸರಿನಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಜೆಡಿಎಸ್– ಬಿಎಸ್ಪಿಯೊಂದಿಗೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿತ್ತು. ಈ ಕಾರಣದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಪಾಂಡವಪುರದಲ್ಲಿ ನಡೆದಿದ್ದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ. ಹೋರಾಟದ ಹಿನ್ನೆಲೆಯಿಂದ ಬಂದಿದ್ದವನಾಗಿದ್ದರಿಂದ ಈ ಕ್ಷೇತ್ರದಲ್ಲಿ ರೈತ ಸಂಘದ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬರಬೇಕಾಗಿದ್ದವನು, ಜೆಡಿಎಸ್ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬರಬೇಕಾಯಿತು’ ಎಂದರು.</p>.<p>‘ವಾಸ್ತವವಾಗಿ ಜನರು ಭ್ರಷ್ಟರಲ್ಲ. ಆದರೆ, ರಾಜಕಾರಣಿಗಳಾದ ನಾವು ಜನರನ್ನು ಭ್ರಷ್ಟರನ್ನಾಗಿ ಮಾಡಿದ್ದೇವೆ. ಚುನಾವಣೆಯಲ್ಲಿ ಮತದಾರನಿಗೆ ಹಣ ನೀಡಿ ಚುನಾವಣೆಯನ್ನೇ ಭ್ರಷ್ಟಗೊ ಳಿಸಲಾಗಿದೆ. ಜಾತಿ, ಹಣದ ಹೆಸರಿನಲ್ಲಿ ಚುನಾವಣೆ ನಡೆಯುತ್ತಿರುವುದು ಪ್ರಜಾಪ್ರಭುತ್ವದ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಮತದಾರರನ್ನು ಭ್ರಷ್ಟರನ್ನಾಗಿ ಮಾಡಿರುವುದರಿಂದ ಚುನಾವಣೆ ಯಿಂದ ಚುನಾವಣೆಗೆ ಅಭ್ಯರ್ಥಿಯ ಚುನಾವಣೆ ವೆಚ್ಚ ದುಬಾರಿಯಾಗುತ್ತಿದೆ. ಇದರಿಂದಲೇ ಭ್ರಷ್ಟಾಚಾರ ವಿಸ್ತಾರ ಗೊಳ್ಳುತ್ತಾ ಸಾಗಿದ್ದು, ಸಹಜ ಎಂಬಂತಾ ಗಿದೆ. ಇದನ್ನು ತಡೆಯದಿದ್ದರೆ ಪ್ರಜಾ ಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದರು.</p>.<p class="Subhead"><strong>ರಾಜಕಾರಣದಲ್ಲಿ ರಾಜಿ ಅನಿವಾರ್ಯ:</strong> ರಾಜಕಾರಣ ಮಾಡಬೇಕೆಂದರೆ ನಾವು ವ್ಯವಸ್ಥೆಯೊಡನೆ ಒಂದಿಷ್ಟು ರಾಜಿ ಮಾಡಿಕೊಳ್ಳಬೇಕಿದೆ. ಜನರ ಭಾವನೆಗಳಿಗೆ ಸ್ಪಂದಿಸಬೇಕಿದೆ. ನಮ್ಮ ಮನಸ್ಸಿಗೆ ಒಪ್ಪಲಿ ಬಿಡಲಿ ರಾಜಕಾರಣಕ್ಕಾಗಿ ಹೊಂದಿಕೊಂಡು ಹೋಗಬೇಕಿದೆ ಎಂದರು.</p>.<p><strong>ಯುವಕರಿಂದ ಸಾಧ್ಯ: </strong>ಪ್ರತಿ ಕ್ಷೇತ್ರದಲ್ಲಿರುವ ವಿದ್ಯಾವಂತ ಯವ ಸಮುದಾಯ ಇಂಥ ವ್ಯವಸ್ಥೆಯನ್ನು ಅರ್ಥಮಾಡಿಕೊಂಡು ಜಾತಿ–ಹಣ ಮುಕ್ತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಹೊರಬೇಕಿದೆ. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಕನಿಷ್ಠ ಶೇ 20ರಷ್ಟು ಯುವಕ–ಯುವತಿಯವರು ಬದ್ಧತೆಯಿಂದ ಕೆಲಸ ಮಾಡಿದರ ಮಾತ್ರ ಚುನಾವಣೆ ಭ್ರಷ್ಟಾಚಾರ ತಡೆಯಬಹುದು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಅರಳಕುಪ್ಪೆಯ ಎ.ಆರ್.ರೂಪಾ, ಹರವು ಗ್ರಾ.ಪಂ.ನ ವೈ.ಎಚ್.ಮಂಜು ನಾಥ ಅಭಿಪ್ರಾಯ ಹಂಚಿಕೊಂಡರು.</p>.<p>ನಾಲ್ಕು ಬಾರಿ ಆಯ್ಕೆಯಾಗಿರುವ ಬಾಬುರಾಯನಕೊಪ್ಪಲಿನ ಬಿ.ಎಂ.ಶ್ರೀನಿವಾಸ್ ಕಾರ್ಯಕ್ರಮ ಉದ್ಫಾಟಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಹಿರಿಯ ಮುಖಂಡ ಕೆ.ಟಿ.ಗೋವಿಂದೇಗೌಡ ಮಾತನಾಡಿದರು.</p>.<p>ಮಕ್ಕಳ ಸಾಹಿತ್ಯ ಪರಿಷತ್ತಿನ ಎಚ್.ಆರ್.ಧನ್ಯಕುಮಾರ್, ತೇಜಸ್ವಿ ಅಭಿಮಾನಿಗಳ ಬಳಗ ಮತ್ತು ತ್ರಿ ಸೃಜನ ವೇದಿಕೆಯ ಡಾ.ಅಭಿನಯ್, ಅಮಿತ್, ಗುರು ಕ್ಯಾತನಹಳ್ಳಿ, ರವಿಕುಮಾರ್, ಪ್ರಸನ್ನ, ಹರೀಶ್, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>