<p><strong>ಶ್ರೀರಂಗಪಟ್ಟಣ: </strong>ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ತಾಲ್ಲೂಕಿನ ನಗುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಅಧಿಕಾರಿಗಳು ‘ಗಾಂಧಿಗಿರಿ’ ಮಾರ್ಗ ಹಿಡಿದಿದ್ದಾರೆ.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಮದುವೆ, ಬೀಗರ ಔತಣ, ಗೃಹ ಪ್ರವೇಶ, ಜನ್ಮದಿನ, ತಿಥಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ತೆರಳಿ ಪ್ಲಾಸ್ಟಿಕ್ ಹಾಳೆ, ತಟ್ಟೆ, ಲೋಟ, ಬಾಟಲಿ, ಬೋಗುಣಿ, ಚಮಚ ಬಳಸದಂತೆ ಮನವೊಲಿಸುತ್ತಿದ್ದಾರೆ.</p>.<p>ಕಾರ್ಯಕ್ರಮದ ಒಂದೆರಡು ದಿನ ಮೊದಲೇ ಸಂಬಂಧಿಸಿದವರ ಮನೆಗೆ ತೆರಳಿ ಪ್ಲಾಸ್ಟಿಕ್ ಬದಲು ಕಾಗದ, ಎಲೆ, ಇತರ ಕರಗುವ ಮತ್ತು ನಿರುಪದ್ರವಿ ವಸ್ತುಗಳನ್ನು ಬಳಸುವಂತೆ ಅರಿವು ಮೂಡಿಸುತ್ತಿದ್ದಾರೆ.</p>.<p>ಸಾಮೂಹಿಕ ಊಟದ ಕಾರ್ಯ ಕ್ರಮಗಳಿಗೆ ತೆರಳಿ ‘ಪ್ಲಾಸ್ಟಿಕ್ ವಸ್ತು ಬಳಸುವುದಿಲ್ಲ’ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ. ತಮ್ಮ ಮನವಿಗೆ ಓಗೊಡುವವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ ಮತ್ತು ಕಾರ್ಯದರ್ಶಿ ಸಾರ್ವಜನಿಕವಾಗಿ ಅಭಿನಂದಿಸುತ್ತಿದ್ದಾರೆ. ಮೈಸೂರು ಪೇಟ, ಮಣಿ ಹಾರ ತೊಡಿಸಿ ಸನ್ಮಾನಿಸಲಾಗುತ್ತಿದೆ. ಆ ಮೂಲಕ ಇತರರಿಗೂ ಪ್ರೇರಣೆ ನೀಡುತ್ತಿದ್ದಾರೆ.</p>.<p>ನಗುವನಹಳ್ಳಿಯ ನಿವಾಸಿ ನಟರಾಜ್ ಅವರ ಗೃಹ ಪ್ರವೇಶ ಕಾರ್ಯಕ್ರಮ ಶುಕ್ರವಾರ ನಡೆದಿದ್ದು, ಅದಕ್ಕಾಗಿ ತಂದಿದ್ದ ನೀರಿನ ಬಾಟಲಿ, ಹಾಳೆ, ಲೋಟಗಳನ್ನು ಬದಿಗಿಡಲಾಯಿತು. ‘ಪ್ಲಾಸ್ಟಿಕ್ ಬಳಸುವುದಿಲ್ಲ’ ಎಂದು ಶಪಥ ಮಾಡಿದರು. ನಟರಾಜ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು.</p>.<p>ಪ್ಲಾಸ್ಟಿಕ್ ಬಳಕೆ ವಿರುದ್ಧ ಮಂಡ್ಯ ಡಯಟ್ನ ಉಪನ್ಯಾಸಕ ಜಯಶಂಕರ್ ನೇತೃತ್ವದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ.</p>.<p>‘ಪ್ಲಾಸ್ಟಿಕ್ ವಸ್ತುಗಳಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕಗಳು ಇದ್ದು, ಜನರ ಆರೋಗ್ಯವನ್ನು ಕೆಡಿಸುತ್ತಿವೆ. ಪರಿಸರ ಹಾಳಾಗುತ್ತಿದೆ. ಜಾನುವಾರುಗಳ ಹೊಟ್ಟೆ ಸೇರುತ್ತಿದೆ. ಮೂರು ವರ್ಷಗಳಿಂದ ಜಾಗೃತಿ ಮೂಡಿಸುತ್ತಿದ್ದೇನೆ’ ಎಂದು ಉಪನ್ಯಾಸಕ ಜಯಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ತಾಲ್ಲೂಕಿನ ನಗುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಅಧಿಕಾರಿಗಳು ‘ಗಾಂಧಿಗಿರಿ’ ಮಾರ್ಗ ಹಿಡಿದಿದ್ದಾರೆ.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಮದುವೆ, ಬೀಗರ ಔತಣ, ಗೃಹ ಪ್ರವೇಶ, ಜನ್ಮದಿನ, ತಿಥಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ತೆರಳಿ ಪ್ಲಾಸ್ಟಿಕ್ ಹಾಳೆ, ತಟ್ಟೆ, ಲೋಟ, ಬಾಟಲಿ, ಬೋಗುಣಿ, ಚಮಚ ಬಳಸದಂತೆ ಮನವೊಲಿಸುತ್ತಿದ್ದಾರೆ.</p>.<p>ಕಾರ್ಯಕ್ರಮದ ಒಂದೆರಡು ದಿನ ಮೊದಲೇ ಸಂಬಂಧಿಸಿದವರ ಮನೆಗೆ ತೆರಳಿ ಪ್ಲಾಸ್ಟಿಕ್ ಬದಲು ಕಾಗದ, ಎಲೆ, ಇತರ ಕರಗುವ ಮತ್ತು ನಿರುಪದ್ರವಿ ವಸ್ತುಗಳನ್ನು ಬಳಸುವಂತೆ ಅರಿವು ಮೂಡಿಸುತ್ತಿದ್ದಾರೆ.</p>.<p>ಸಾಮೂಹಿಕ ಊಟದ ಕಾರ್ಯ ಕ್ರಮಗಳಿಗೆ ತೆರಳಿ ‘ಪ್ಲಾಸ್ಟಿಕ್ ವಸ್ತು ಬಳಸುವುದಿಲ್ಲ’ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ. ತಮ್ಮ ಮನವಿಗೆ ಓಗೊಡುವವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ ಮತ್ತು ಕಾರ್ಯದರ್ಶಿ ಸಾರ್ವಜನಿಕವಾಗಿ ಅಭಿನಂದಿಸುತ್ತಿದ್ದಾರೆ. ಮೈಸೂರು ಪೇಟ, ಮಣಿ ಹಾರ ತೊಡಿಸಿ ಸನ್ಮಾನಿಸಲಾಗುತ್ತಿದೆ. ಆ ಮೂಲಕ ಇತರರಿಗೂ ಪ್ರೇರಣೆ ನೀಡುತ್ತಿದ್ದಾರೆ.</p>.<p>ನಗುವನಹಳ್ಳಿಯ ನಿವಾಸಿ ನಟರಾಜ್ ಅವರ ಗೃಹ ಪ್ರವೇಶ ಕಾರ್ಯಕ್ರಮ ಶುಕ್ರವಾರ ನಡೆದಿದ್ದು, ಅದಕ್ಕಾಗಿ ತಂದಿದ್ದ ನೀರಿನ ಬಾಟಲಿ, ಹಾಳೆ, ಲೋಟಗಳನ್ನು ಬದಿಗಿಡಲಾಯಿತು. ‘ಪ್ಲಾಸ್ಟಿಕ್ ಬಳಸುವುದಿಲ್ಲ’ ಎಂದು ಶಪಥ ಮಾಡಿದರು. ನಟರಾಜ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು.</p>.<p>ಪ್ಲಾಸ್ಟಿಕ್ ಬಳಕೆ ವಿರುದ್ಧ ಮಂಡ್ಯ ಡಯಟ್ನ ಉಪನ್ಯಾಸಕ ಜಯಶಂಕರ್ ನೇತೃತ್ವದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ.</p>.<p>‘ಪ್ಲಾಸ್ಟಿಕ್ ವಸ್ತುಗಳಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕಗಳು ಇದ್ದು, ಜನರ ಆರೋಗ್ಯವನ್ನು ಕೆಡಿಸುತ್ತಿವೆ. ಪರಿಸರ ಹಾಳಾಗುತ್ತಿದೆ. ಜಾನುವಾರುಗಳ ಹೊಟ್ಟೆ ಸೇರುತ್ತಿದೆ. ಮೂರು ವರ್ಷಗಳಿಂದ ಜಾಗೃತಿ ಮೂಡಿಸುತ್ತಿದ್ದೇನೆ’ ಎಂದು ಉಪನ್ಯಾಸಕ ಜಯಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>