<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ನಿಮಿತ್ತ ಶ್ರೀಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ.</p><p>ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ, ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವುಳ್ಳ ಬೃಹತ್ ಕಟೌಟ್ಗಳು, ಓಂ ಚಿತ್ರವುಳ್ಳ ಕೇಸರಿ ಬಾವುಟಗಳು ಕ್ಷೇತ್ರದ ತುಂಬೆಲ್ಲಾ ರಾರಾಜಿಸುತ್ತಿವೆ. ಶ್ರೀಮಠವನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷ ರೀತಿಯಲ್ಲಿ ಸಿಂಗರಿಸಲಾಗಿದೆ.</p><p>ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಬೃಹತ್ತಾದ ಹತ್ತಾರು ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಹೆಲಿಪ್ಯಾಡ್ನಿಂದ ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆವರೆಗೆ ಡಾಂಬರೀಕರಣ, ರಸ್ತೆ ಬದಿಯಲ್ಲಿ ಗಿಡ ನೆಟ್ಟು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಗಿದೆ. ಒಟ್ಟಾರೆ ಶ್ರೀಮಠವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ.</p><p>ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಬಳಿಕ ಕ್ಷೇತ್ರದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಭಕ್ತ ಸಂಗಮ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ 500 ಅಡಿ ಅಗಲ 600 ಅಡಿ ಉದ್ದ ವಿಸ್ತೀರ್ಣದ ಬೃಹತ್ ಪೆಂಡಾಲ್ನಲ್ಲಿ 40 ಅಡಿ ಉದ್ದ 80 ಅಡಿ ಅಗಲದ ಸುಸಜ್ಜಿತ ವೇದಿಕೆ ನಿರ್ಮಾಣಗೊಂಡಿದೆ. ಭಕ್ತರಿಗೆ 70 ಸಾವಿರಕ್ಕೂ ಹೆಚ್ಚು ಆಸನಗಳನ್ನು ಹಾಕಲಾಗಿದೆ.</p><p><strong>ತಪಾಸಣೆಗೆ 10 ತಂಡ:</strong></p><p>ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಸುರಕ್ಷತೆ ದೃಷ್ಟಿಯಿಂದ ಶ್ವಾನದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಶ್ರೀಕ್ಷೇತ್ರದಾದ್ಯಂತ ಇಂಚಿಂಚೂ ತಪಾಸಣೆ ನಡೆಸಿ ಮುಂಜಾಗ್ರತೆ ವಹಿಸಿದ್ದಾರೆ. ಇದಕ್ಕಾಗಿ 80 ಮಂದಿ ಸಿಬ್ಬಂದಿಯನ್ನು ಒಳಗೊಂಡ ಮಂಡ್ಯ, ಮೈಸೂರು, ಚಾಮರಾಜನಗರ, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ರಾಯಚೂರು ಜಿಲ್ಲೆಗಳ 10 ತಂಡಗಳನ್ನು ನಿಯೋಜಿಸಲಾಗಿದೆ.</p><p><strong>ಅಂಗಡಿ ಬಂದ್:</strong></p><p>ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಶ್ರೀಮಠದ ಆವರಣದಲ್ಲಿರುವ ಹಾಗೂ ಮಠದ ಮುಖ್ಯದ್ವಾರದಲ್ಲಿರುವ ಚಾಮರಾಜನಗರ– ಜೇವರ್ಗಿ ರಾಷ್ಷ್ರೀಯ ಹೆದ್ದಾರಿ ಬದಿಯ ಎಲ್ಲಾ ಬಗೆಯ ಹೋಟೆಲ್, ಅಂಗಡಿ ಮಳಿಗೆಗಳನ್ನು ಸೋಮವಾರದಿಂದಲೇ ಮುಚ್ಚಿಸಲಾಗಿದೆ.</p><p>ಜಿಲ್ಲಾಧಿಕಾರಿ ಕುಮಾರ, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಜಿ.ಆದರ್ಶ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕ್ಷೇತ್ರದಲ್ಲೇ ಮೊಕ್ಕಾಂ ಹೂಡಿ ಅಗತ್ಯ ಕ್ರಮ ವಹಿಸಿದ್ದಾರೆ.</p><p><strong>ವಿವಿಧ ಗಣ್ಯರ ಭೇಟಿ:</strong></p><p>ಮೈಸೂರಿನ ಸುತ್ತೂರು ಮಠದ ಪೀಠಾಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಬಾಲಗಂಗಾಧರನಾಥ ಸ್ವಾಮೀಜಿಯವರ ಮೂರ್ತಿಗೆ ಪೂಜೆ ಸಲ್ಲಿಸಿದರು.</p><p>ರಾಜ್ಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಪೂಜೆ ಸಲ್ಲಿಸಿ ಮೋದಿ ಆಗಮನಕ್ಕೆ ಕ್ಷೇತ್ರದ ಸಿದ್ಧತೆಗಳನ್ನು ಪರಿಶೀಲಿಸಿದರು.</p><p><strong>ಶ್ರೀಮಠದಲ್ಲಿ ಎಸ್ಪಿಜಿ ಕಣ್ಗಾವಲು</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠಕ್ಕೆ ಬಂದು ಹೋಗುವವರೆಗೆ ಶ್ರೀಮಠದ ಭದ್ರತೆ ಎಸ್ಪಿಜಿ ತಂಡದ ಹಿಡಿತದಲ್ಲಿರುತ್ತದೆ ಎನ್ನಲಾಗಿದೆ. ಇದಕ್ಕಾಗಿ ಐಜಿ, ಡಿಐಜಿ, ಎಸ್ಪಿ ದರ್ಜೆಯ ವಿಶೇಷ ರಕ್ಷಣಾ ತಂಡದ (ಎಸ್ಪಿಜಿ) ಅಧಿಕಾರಿಗಳನ್ನೊಳಗೊಂಡ ತಂಡವು ಭದ್ರತೆಯ ಉಸ್ತುವಾರಿ ವಹಿಸಿದೆ ಎಂದು ಮೂಲಗಳು ಸ್ಪಷ್ಟ ಪಡಿಸಿದೆ.</p><p>ಆದಿಚುಂಚನಗಿರಿ ಕ್ಷೇತ್ರದಲ್ಲಿ ಭದ್ರತೆಗಾಗಿ 5 ಎಸ್ಪಿ, 7 ಎಎಸ್ಪಿ, 18 ಡಿವೈಎಸ್ಪಿ, 55 ಇನ್ಸ್ಪೆಕ್ಟರ್, 120 ಮಂದಿ ಪಿಎಸ್ಐ ಸೇರಿದಂತೆ 1500ಕ್ಕೂ ಹೆಚ್ಚು ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿ ಒಳಗೊಂಡ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದರ ಜೊತೆಗೆ 8 ಕೆಎಸ್ಆರ್ಪಿ, 9 ಡಿಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.</p><p><strong>ಮೂರು ಹೆಲಿಪ್ಯಾಡ್ ನಿರ್ಮಾಣ</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿಯಲು ಆದಿಚುಂಚನಗಿರಿ ಕ್ಷೇತ್ರದ ಸಂಸ್ಕೃತ ಕಾಲೇಜಿನ ತಪೋವನದ ಆವರಣದಲ್ಲಿ 3 ಹೆಲಿಪ್ಯಾಡ್ಗಳನ್ನು ನಿರ್ಮಿಸಿ, 3 ಅಗ್ನಿಶಾಮಕ ಮತ್ತು ಆಂಬುಲೆನ್ಸ್ ವಾಹನಗಳನ್ನು ಮೀಸಲಿಡಲಾಗಿದೆ.</p><p>ನರೇಂದ್ರ ಮೋದಿ ಅವರು ಪ್ರಯಾಣಿಸುವ ತಲಾ 15 ಟನ್ ಸಾಮರ್ಥ್ಯದ ಮೂರು ವಿಶೇಷ ಹೆಲಿಕಾಪ್ಟರ್ಗಳ ಸಂಚಾರ, ಲ್ಯಾಂಡಿಂಗ್ ಹಾಗೂ ಟೇಕ್ಆಫ್ ವೇಳೆ ಯಾವುದೇ ಸಣ್ಣ ಪುಟ್ಟ ಅಡಚಣೆಯಾಗದಂತೆ ಜಿಲ್ಲಾಡಳಿತ ಹಾಗೂ ವಿಶೇಷ ರಕ್ಷಣಾ ತಂಡ (ಎಸ್.ಪಿ.ಜಿ) ಕಟ್ಟೆಚ್ಚರ ವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ನಿಮಿತ್ತ ಶ್ರೀಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ.</p><p>ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ, ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವುಳ್ಳ ಬೃಹತ್ ಕಟೌಟ್ಗಳು, ಓಂ ಚಿತ್ರವುಳ್ಳ ಕೇಸರಿ ಬಾವುಟಗಳು ಕ್ಷೇತ್ರದ ತುಂಬೆಲ್ಲಾ ರಾರಾಜಿಸುತ್ತಿವೆ. ಶ್ರೀಮಠವನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷ ರೀತಿಯಲ್ಲಿ ಸಿಂಗರಿಸಲಾಗಿದೆ.</p><p>ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಬೃಹತ್ತಾದ ಹತ್ತಾರು ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಹೆಲಿಪ್ಯಾಡ್ನಿಂದ ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆವರೆಗೆ ಡಾಂಬರೀಕರಣ, ರಸ್ತೆ ಬದಿಯಲ್ಲಿ ಗಿಡ ನೆಟ್ಟು ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಗಿದೆ. ಒಟ್ಟಾರೆ ಶ್ರೀಮಠವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ.</p><p>ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಬಳಿಕ ಕ್ಷೇತ್ರದ ಬಿ.ಜಿ.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಭಕ್ತ ಸಂಗಮ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ 500 ಅಡಿ ಅಗಲ 600 ಅಡಿ ಉದ್ದ ವಿಸ್ತೀರ್ಣದ ಬೃಹತ್ ಪೆಂಡಾಲ್ನಲ್ಲಿ 40 ಅಡಿ ಉದ್ದ 80 ಅಡಿ ಅಗಲದ ಸುಸಜ್ಜಿತ ವೇದಿಕೆ ನಿರ್ಮಾಣಗೊಂಡಿದೆ. ಭಕ್ತರಿಗೆ 70 ಸಾವಿರಕ್ಕೂ ಹೆಚ್ಚು ಆಸನಗಳನ್ನು ಹಾಕಲಾಗಿದೆ.</p><p><strong>ತಪಾಸಣೆಗೆ 10 ತಂಡ:</strong></p><p>ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಸುರಕ್ಷತೆ ದೃಷ್ಟಿಯಿಂದ ಶ್ವಾನದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಶ್ರೀಕ್ಷೇತ್ರದಾದ್ಯಂತ ಇಂಚಿಂಚೂ ತಪಾಸಣೆ ನಡೆಸಿ ಮುಂಜಾಗ್ರತೆ ವಹಿಸಿದ್ದಾರೆ. ಇದಕ್ಕಾಗಿ 80 ಮಂದಿ ಸಿಬ್ಬಂದಿಯನ್ನು ಒಳಗೊಂಡ ಮಂಡ್ಯ, ಮೈಸೂರು, ಚಾಮರಾಜನಗರ, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ರಾಯಚೂರು ಜಿಲ್ಲೆಗಳ 10 ತಂಡಗಳನ್ನು ನಿಯೋಜಿಸಲಾಗಿದೆ.</p><p><strong>ಅಂಗಡಿ ಬಂದ್:</strong></p><p>ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಶ್ರೀಮಠದ ಆವರಣದಲ್ಲಿರುವ ಹಾಗೂ ಮಠದ ಮುಖ್ಯದ್ವಾರದಲ್ಲಿರುವ ಚಾಮರಾಜನಗರ– ಜೇವರ್ಗಿ ರಾಷ್ಷ್ರೀಯ ಹೆದ್ದಾರಿ ಬದಿಯ ಎಲ್ಲಾ ಬಗೆಯ ಹೋಟೆಲ್, ಅಂಗಡಿ ಮಳಿಗೆಗಳನ್ನು ಸೋಮವಾರದಿಂದಲೇ ಮುಚ್ಚಿಸಲಾಗಿದೆ.</p><p>ಜಿಲ್ಲಾಧಿಕಾರಿ ಕುಮಾರ, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಜಿ.ಆದರ್ಶ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕ್ಷೇತ್ರದಲ್ಲೇ ಮೊಕ್ಕಾಂ ಹೂಡಿ ಅಗತ್ಯ ಕ್ರಮ ವಹಿಸಿದ್ದಾರೆ.</p><p><strong>ವಿವಿಧ ಗಣ್ಯರ ಭೇಟಿ:</strong></p><p>ಮೈಸೂರಿನ ಸುತ್ತೂರು ಮಠದ ಪೀಠಾಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಬಾಲಗಂಗಾಧರನಾಥ ಸ್ವಾಮೀಜಿಯವರ ಮೂರ್ತಿಗೆ ಪೂಜೆ ಸಲ್ಲಿಸಿದರು.</p><p>ರಾಜ್ಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಪೂಜೆ ಸಲ್ಲಿಸಿ ಮೋದಿ ಆಗಮನಕ್ಕೆ ಕ್ಷೇತ್ರದ ಸಿದ್ಧತೆಗಳನ್ನು ಪರಿಶೀಲಿಸಿದರು.</p><p><strong>ಶ್ರೀಮಠದಲ್ಲಿ ಎಸ್ಪಿಜಿ ಕಣ್ಗಾವಲು</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠಕ್ಕೆ ಬಂದು ಹೋಗುವವರೆಗೆ ಶ್ರೀಮಠದ ಭದ್ರತೆ ಎಸ್ಪಿಜಿ ತಂಡದ ಹಿಡಿತದಲ್ಲಿರುತ್ತದೆ ಎನ್ನಲಾಗಿದೆ. ಇದಕ್ಕಾಗಿ ಐಜಿ, ಡಿಐಜಿ, ಎಸ್ಪಿ ದರ್ಜೆಯ ವಿಶೇಷ ರಕ್ಷಣಾ ತಂಡದ (ಎಸ್ಪಿಜಿ) ಅಧಿಕಾರಿಗಳನ್ನೊಳಗೊಂಡ ತಂಡವು ಭದ್ರತೆಯ ಉಸ್ತುವಾರಿ ವಹಿಸಿದೆ ಎಂದು ಮೂಲಗಳು ಸ್ಪಷ್ಟ ಪಡಿಸಿದೆ.</p><p>ಆದಿಚುಂಚನಗಿರಿ ಕ್ಷೇತ್ರದಲ್ಲಿ ಭದ್ರತೆಗಾಗಿ 5 ಎಸ್ಪಿ, 7 ಎಎಸ್ಪಿ, 18 ಡಿವೈಎಸ್ಪಿ, 55 ಇನ್ಸ್ಪೆಕ್ಟರ್, 120 ಮಂದಿ ಪಿಎಸ್ಐ ಸೇರಿದಂತೆ 1500ಕ್ಕೂ ಹೆಚ್ಚು ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿ ಒಳಗೊಂಡ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದರ ಜೊತೆಗೆ 8 ಕೆಎಸ್ಆರ್ಪಿ, 9 ಡಿಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.</p><p><strong>ಮೂರು ಹೆಲಿಪ್ಯಾಡ್ ನಿರ್ಮಾಣ</strong></p><p>ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿಯಲು ಆದಿಚುಂಚನಗಿರಿ ಕ್ಷೇತ್ರದ ಸಂಸ್ಕೃತ ಕಾಲೇಜಿನ ತಪೋವನದ ಆವರಣದಲ್ಲಿ 3 ಹೆಲಿಪ್ಯಾಡ್ಗಳನ್ನು ನಿರ್ಮಿಸಿ, 3 ಅಗ್ನಿಶಾಮಕ ಮತ್ತು ಆಂಬುಲೆನ್ಸ್ ವಾಹನಗಳನ್ನು ಮೀಸಲಿಡಲಾಗಿದೆ.</p><p>ನರೇಂದ್ರ ಮೋದಿ ಅವರು ಪ್ರಯಾಣಿಸುವ ತಲಾ 15 ಟನ್ ಸಾಮರ್ಥ್ಯದ ಮೂರು ವಿಶೇಷ ಹೆಲಿಕಾಪ್ಟರ್ಗಳ ಸಂಚಾರ, ಲ್ಯಾಂಡಿಂಗ್ ಹಾಗೂ ಟೇಕ್ಆಫ್ ವೇಳೆ ಯಾವುದೇ ಸಣ್ಣ ಪುಟ್ಟ ಅಡಚಣೆಯಾಗದಂತೆ ಜಿಲ್ಲಾಡಳಿತ ಹಾಗೂ ವಿಶೇಷ ರಕ್ಷಣಾ ತಂಡ (ಎಸ್.ಪಿ.ಜಿ) ಕಟ್ಟೆಚ್ಚರ ವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>