<p><strong>ಹಲಗೂರು (ಮಂಡ್ಯ ಜಿಲ್ಲೆ): </strong>ಇಲ್ಲಿಯ ಕಾವೇರಿ ವನ್ಯಜೀವಿ ವಲಯದಲ್ಲಿ ನಾಲ್ವರು ಶುಕ್ರವಾರ ನಸುಕಿನಲ್ಲಿ 2 ಜಿಂಕೆ ಬೇಟೆಯಾಡಿ ಕೊಂದು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಒಬ್ಬನನ್ನು ಬಂಧಿಸಿದ್ದು ಮೂವರು ಪರಾರಿಯಾಗಿದ್ದಾರೆ.</p>.<p>ವೆಂಕಟೇಶ್ ಗುಂಡೇಟಿನಿಂದ ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನು, ಶೇಖರ್, ತೀರ್ಥ ಕತ್ತಲಲ್ಲಿ ಪರಾರಿಯಾಗಿದ್ದಾರೆ.</p>.<p>ನಸುಕಿನ 3 ಗಂಟೆ ಸಮಯದಲ್ಲಿ ಆರೋಪಿಗಳು ನಾಡಬಂದೂಕಿನಿಂದ 2 ಜಿಂಕೆಯನ್ನು ಕೊಂದಿದ್ದಾರೆ. ಗುಂಡಿನ ಸದ್ದು ಅರಿತ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಪಾಳಿಯ ಗಸ್ತಿನಲ್ಲಿದ್ದ ವನ ಪಾಲಕರು ಆರೋಪಿಗಳನ್ನು ಸುತ್ತುವರಿದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳ ಪ್ರತಿರೋಧ ವ್ಯಕ್ತಪಡಿಸಿ ಗುಂಡು ಹಾರಿಸಲು ಯತ್ನಿಸಿದ್ದಾರೆ.</p>.<p>ಅಪಾಯ ಅರಿತ ವನಪಾಲರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ವೆಂಕಟೇಶ್ ಸಿಕ್ಕಿಬಿದ್ದಿದ್ದಾನೆ. ಪರಾರಿಯಾದ ಮೂವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.</p>.<p>ಸ್ಥಳಕ್ಕೆ ಎಸಿಎಫ್ ಅಂಕರಾಜು, ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ, ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ಮಾರುತಿ ತಮ್ಮಣ್ಣವರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು (ಮಂಡ್ಯ ಜಿಲ್ಲೆ): </strong>ಇಲ್ಲಿಯ ಕಾವೇರಿ ವನ್ಯಜೀವಿ ವಲಯದಲ್ಲಿ ನಾಲ್ವರು ಶುಕ್ರವಾರ ನಸುಕಿನಲ್ಲಿ 2 ಜಿಂಕೆ ಬೇಟೆಯಾಡಿ ಕೊಂದು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಒಬ್ಬನನ್ನು ಬಂಧಿಸಿದ್ದು ಮೂವರು ಪರಾರಿಯಾಗಿದ್ದಾರೆ.</p>.<p>ವೆಂಕಟೇಶ್ ಗುಂಡೇಟಿನಿಂದ ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನು, ಶೇಖರ್, ತೀರ್ಥ ಕತ್ತಲಲ್ಲಿ ಪರಾರಿಯಾಗಿದ್ದಾರೆ.</p>.<p>ನಸುಕಿನ 3 ಗಂಟೆ ಸಮಯದಲ್ಲಿ ಆರೋಪಿಗಳು ನಾಡಬಂದೂಕಿನಿಂದ 2 ಜಿಂಕೆಯನ್ನು ಕೊಂದಿದ್ದಾರೆ. ಗುಂಡಿನ ಸದ್ದು ಅರಿತ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಪಾಳಿಯ ಗಸ್ತಿನಲ್ಲಿದ್ದ ವನ ಪಾಲಕರು ಆರೋಪಿಗಳನ್ನು ಸುತ್ತುವರಿದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳ ಪ್ರತಿರೋಧ ವ್ಯಕ್ತಪಡಿಸಿ ಗುಂಡು ಹಾರಿಸಲು ಯತ್ನಿಸಿದ್ದಾರೆ.</p>.<p>ಅಪಾಯ ಅರಿತ ವನಪಾಲರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ವೆಂಕಟೇಶ್ ಸಿಕ್ಕಿಬಿದ್ದಿದ್ದಾನೆ. ಪರಾರಿಯಾದ ಮೂವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.</p>.<p>ಸ್ಥಳಕ್ಕೆ ಎಸಿಎಫ್ ಅಂಕರಾಜು, ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ, ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ಮಾರುತಿ ತಮ್ಮಣ್ಣವರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>