ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಟೀಕೆ: ಸಾಹಿತಿ ಹಂ.ಪ.ನಾಗರಾಜಯ್ಯ ವಿಚಾರಣೆ

Last Updated 22 ಜನವರಿ 2021, 11:56 IST
ಅಕ್ಷರ ಗಾತ್ರ

ಮಂಡ್ಯ: ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ್ದಾರೆ ಎಂಬ ಆರೋಪದ ಮೇಲೆ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಗುರುವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು.

ಜ.17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಹಂ.ಪ.ನಾ ಅವರನ್ನು ಠಾಣೆಗೆ ಕರೆಸಲಾಗಿತ್ತು.

‘ಆಕ್ಷೇಪಾರ್ಹ ಹೇಳಿಕೆಗಳ ಯಾವುದೇ ದಾಖಲೆಗಳನ್ನು ದೂರುದಾರರು ಒದಗಿಸಿಲ್ಲ. ನಾಗರಾಜಯ್ಯ ಅವರ ಹೇಳಿಕೆ ಪಡೆದು ಕಳುಹಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT