ಜ.17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಹಂ.ಪ.ನಾ ಅವರನ್ನು ಠಾಣೆಗೆ ಕರೆಸಲಾಗಿತ್ತು.