<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನ ಬಿ.ನಾಟನಹಳ್ಳಿಯ ಎರಡು ಕಡೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಬೆಳೆದಿದ್ದ 16 ಕೆ.ಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.</p>.<p>ಗ್ರಾಮದ ಮಂಜೇಗೌಡ ಎಂಬುವವರ ಮನೆ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಮಾಹಿತಿ ಮೇರೆಗೆ ಮಂಗಳವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದರು.</p>.<p>‘ಸ್ಥಳದಿಂದ ಓಡಿ ಹೋಗಲು ಪ್ರಯತ್ನಿಸಿದ ಮಂಜೇಗೌಡನನ್ನು ಹಿಡಿದು ವಿಚಾರಿಸಿದಾಗ ಹೊಲದಲ್ಲಿ 6 ಕೆ.ಜಿ 450 ಗ್ರಾಂ ಗಾಂಜಾ ಬೆಳೆದಿರುವುದು ಪತ್ತೆಯಾಯಿತು. ಅದೇ ಗ್ರಾಮದ ರಾಮೇಗೌಡ ಎಂಬುವವರ ಮನೆ ಹಿಂಭಾಗದ ಹೊಲದಲ್ಲಿ ಬೆಳೆದಿದ್ದ 9 ಕೆ.ಜಿ 800 ಗ್ರಾಂ ಹಸಿ ಗಾಂಜಾ ವಶಪಡೆಸಿಕೊಳ್ಳಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ದಾಳಿ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಸಿಪಿಐ ಕೆ.ಎನ್.ಸುಧಾಕರ್, ಎಸ್ಐ ತೊಳಚನಾಯಕ್, ಸಿಬ್ಬಂದಿಗಳಾದ ಬಸಪ್ಪ, ಚಂದ್ರಶೇಖರ್, ಸುಜಾತಾ, ರೇವಣ್ಣ, ವೆಂಕಟೇಶ್, ಅನಿಲ್ ಕುಮಾರ್, ವಿರೂಪಾಕ್ಷ, ರವಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ನರೇಂದ್ರ, ಕಂದಾಯ ಅಧಿಕಾರಿ ರಾಜಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನ ಬಿ.ನಾಟನಹಳ್ಳಿಯ ಎರಡು ಕಡೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಬೆಳೆದಿದ್ದ 16 ಕೆ.ಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.</p>.<p>ಗ್ರಾಮದ ಮಂಜೇಗೌಡ ಎಂಬುವವರ ಮನೆ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಮಾಹಿತಿ ಮೇರೆಗೆ ಮಂಗಳವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದರು.</p>.<p>‘ಸ್ಥಳದಿಂದ ಓಡಿ ಹೋಗಲು ಪ್ರಯತ್ನಿಸಿದ ಮಂಜೇಗೌಡನನ್ನು ಹಿಡಿದು ವಿಚಾರಿಸಿದಾಗ ಹೊಲದಲ್ಲಿ 6 ಕೆ.ಜಿ 450 ಗ್ರಾಂ ಗಾಂಜಾ ಬೆಳೆದಿರುವುದು ಪತ್ತೆಯಾಯಿತು. ಅದೇ ಗ್ರಾಮದ ರಾಮೇಗೌಡ ಎಂಬುವವರ ಮನೆ ಹಿಂಭಾಗದ ಹೊಲದಲ್ಲಿ ಬೆಳೆದಿದ್ದ 9 ಕೆ.ಜಿ 800 ಗ್ರಾಂ ಹಸಿ ಗಾಂಜಾ ವಶಪಡೆಸಿಕೊಳ್ಳಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ದಾಳಿ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಸಿಪಿಐ ಕೆ.ಎನ್.ಸುಧಾಕರ್, ಎಸ್ಐ ತೊಳಚನಾಯಕ್, ಸಿಬ್ಬಂದಿಗಳಾದ ಬಸಪ್ಪ, ಚಂದ್ರಶೇಖರ್, ಸುಜಾತಾ, ರೇವಣ್ಣ, ವೆಂಕಟೇಶ್, ಅನಿಲ್ ಕುಮಾರ್, ವಿರೂಪಾಕ್ಷ, ರವಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ನರೇಂದ್ರ, ಕಂದಾಯ ಅಧಿಕಾರಿ ರಾಜಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>