<p><strong>ಪಾಂಡವಪುರ:</strong> ಪಟ್ಟಣದ ಸಾರಿಗೆ ಬಸ್ ಡಿಪೋ ಬಳಿಯ ಗೋದಾಮಿನಲ್ಲಿ ತಹಶೀಲ್ದಾರ್ ಎಸ್.ಸಂತೋಷ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕಾನೂನು ಬಾಹಿರವಾಗಿ ಇಟ್ಟಿದ್ದ 52 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದು, ಗೋದಾಮಿಗೆ ಬೀಗ ಮುದ್ರೆ ಹಾಕಿದರು.</p>.<p>ಹಿರೇಮರಳಿ ಗ್ರಾಮದ ಚಲುವೇಗೌಡ ಎಂಬವರ ಗೋದಾಮಿನಲ್ಲಿ ಬೇವಿನಕುಪ್ಪೆ ಗ್ರಾಮದ ಪವನ್ ಅವರು 52 ಪಿಒಪಿ ಗಣೇಶ ಮೂರ್ತಿಗಳನ್ನು ಇಟ್ಟಿದ್ದರು.</p>.<p>ತಹಶೀಲ್ದಾರ್ ಎಸ್.ಸಂತೋಷ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಆರೋಗ್ಯ ನಿರೀಕ್ಷಕಿ ಧನಲಕ್ಷ್ಮಿ, ಪೊಲೀಸ್ ಇನ್ಸ್ಪೆಕ್ಟರ್ ಶರತ್ ಕುಮಾರ್, ಪಿಎಸ್ಐ ಉಮೇಶ್ ಕಾರ್ಯಾಚರಣೆ ನಡೆಸಿ, ಪವನ್ ಅವರಿಗೆ ದಂಡ ವಿಧಿಸಿದ್ದಾರೆ.</p>.<p>ಪಟ್ಟಣದ ಹಳೆ ಬಸ್ ನಿಲ್ದಾಣ, ಪೊಲೀಸ್ ವಸತಿ ಗೃಹ ಸ್ಥಳದ ಎದುರಿನ ಅಂಗಡಿ ಸೇರಿದಂತೆ ವಿವಿಧೆಡೆ ರಾಸಾಯನಿಕಯುಕ್ತ ಮಣ್ಣಿನ ಗಣಪತಿ ಮೂರ್ತಿಗಳನ್ನು ಇಟ್ಟಿದ್ದವರ ವಿರುದ್ಧ ಕ್ರಮವಹಿಸಿದರು.<br> ತಹಶೀಲ್ದಾರ್ ಎಸ್.ಸಂತೋಷ್, ಪಿಒಪಿ ಮೂರ್ತಿಗಳನ್ನು ಇಡಬಾರದು ಎಂದು ಮಾರಾಟಗಾರರ ಸಭೆ ನಡೆಸಿ ನಿರ್ದೇಶನ ನೀಡಲಾಗಿತ್ತು. ರಾಸಾಯನಿಕ ಮಣ್ಣಿನ ಗಣೇಶ್ ಮೂರ್ತಿಗಳನ್ನು ಇಟ್ಟಿದ್ದವರ ಮೇಲೂ ಕ್ರಮವಹಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ಪಟ್ಟಣದ ಸಾರಿಗೆ ಬಸ್ ಡಿಪೋ ಬಳಿಯ ಗೋದಾಮಿನಲ್ಲಿ ತಹಶೀಲ್ದಾರ್ ಎಸ್.ಸಂತೋಷ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕಾನೂನು ಬಾಹಿರವಾಗಿ ಇಟ್ಟಿದ್ದ 52 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದು, ಗೋದಾಮಿಗೆ ಬೀಗ ಮುದ್ರೆ ಹಾಕಿದರು.</p>.<p>ಹಿರೇಮರಳಿ ಗ್ರಾಮದ ಚಲುವೇಗೌಡ ಎಂಬವರ ಗೋದಾಮಿನಲ್ಲಿ ಬೇವಿನಕುಪ್ಪೆ ಗ್ರಾಮದ ಪವನ್ ಅವರು 52 ಪಿಒಪಿ ಗಣೇಶ ಮೂರ್ತಿಗಳನ್ನು ಇಟ್ಟಿದ್ದರು.</p>.<p>ತಹಶೀಲ್ದಾರ್ ಎಸ್.ಸಂತೋಷ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಆರೋಗ್ಯ ನಿರೀಕ್ಷಕಿ ಧನಲಕ್ಷ್ಮಿ, ಪೊಲೀಸ್ ಇನ್ಸ್ಪೆಕ್ಟರ್ ಶರತ್ ಕುಮಾರ್, ಪಿಎಸ್ಐ ಉಮೇಶ್ ಕಾರ್ಯಾಚರಣೆ ನಡೆಸಿ, ಪವನ್ ಅವರಿಗೆ ದಂಡ ವಿಧಿಸಿದ್ದಾರೆ.</p>.<p>ಪಟ್ಟಣದ ಹಳೆ ಬಸ್ ನಿಲ್ದಾಣ, ಪೊಲೀಸ್ ವಸತಿ ಗೃಹ ಸ್ಥಳದ ಎದುರಿನ ಅಂಗಡಿ ಸೇರಿದಂತೆ ವಿವಿಧೆಡೆ ರಾಸಾಯನಿಕಯುಕ್ತ ಮಣ್ಣಿನ ಗಣಪತಿ ಮೂರ್ತಿಗಳನ್ನು ಇಟ್ಟಿದ್ದವರ ವಿರುದ್ಧ ಕ್ರಮವಹಿಸಿದರು.<br> ತಹಶೀಲ್ದಾರ್ ಎಸ್.ಸಂತೋಷ್, ಪಿಒಪಿ ಮೂರ್ತಿಗಳನ್ನು ಇಡಬಾರದು ಎಂದು ಮಾರಾಟಗಾರರ ಸಭೆ ನಡೆಸಿ ನಿರ್ದೇಶನ ನೀಡಲಾಗಿತ್ತು. ರಾಸಾಯನಿಕ ಮಣ್ಣಿನ ಗಣೇಶ್ ಮೂರ್ತಿಗಳನ್ನು ಇಟ್ಟಿದ್ದವರ ಮೇಲೂ ಕ್ರಮವಹಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>