<p><strong>ಶ್ರೀರಂಗಪಟ್ಟಣ:</strong> ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಟ್ಟಣದ ಪ್ರಧಾನ ಅಂಚೆ ಕಚೇರಿ ಬಳಿ ಶುಕ್ರವಾರ ಅಂಚೆ ಪತ್ರ ಚಳವಳಿ ನಡೆಸಿದರು. ಮುಖ್ಯಮಂತ್ರಿಗೆ ಅಂಚೆ ಪತ್ರಗಳನ್ನು ಕಳುಹಿಸಿದರು.</p>.<p>‘ಹೊಸ ಪಿಂಚಣಿ ಯೋಜನೆ ಅಸಮಂಜಸವಾಗಿದೆ. ಈ ಹಿಂದೆ ಇದ್ದ ಪಿಂಚಣಿ ಯೋಜನೆಯನ್ನೇ (ಒಪಿಎಸ್) ಮುಂದುವರಿಸಬೇಕು. ಈ ಬೇಡಿಕೆಗಾಗಿ ಸಾಂಕೇತಿಕವಾಗಿ ಪತ್ರ ಚಳವಳಿ ನಡೆಸುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ತೀವ್ರ ಸ್ವರೂಪದ ಚಳವಳಿ ರೂಪಿಸಲಾಗುವುದು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್. ಲೋಕೇಶ್ ಎಚ್ಚರಿಸಿದರು.</p>.<p>ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಅಧ್ಯಕ್ಷ ಟಿ.ಪಿ. ಕುಮಾರ್ ಮಾತನಾಡಿ, ‘ಹೊಸ ಪಿಂಚಣಿ ಯೋಜನೆಗೆ ಪರಿಶೀಲನೆ ಹಂತದಲ್ಲೇ ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೂ ಅದನ್ನು ಜಾರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರ ಹಿತಕ್ಕೆ ವಿರುದ್ಧವಾಗಿರುವ ಈ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಮೋಹನ್, ಖಜಾಂಚಿ ಸುನೀತಾ, ಪದಾಧಿಕಾರಿಗಳಾದ ಸಿ. ಮಹೇಶ್, ಎನ್.ಎನ್. ಪ್ರಕಾಶ್, ಸುರೇಶ್, ಸಿ.ಎಸ್. ವಾಣಿ, ಡಿ. ರಮೇಶ್, ಎಸ್.ಎಂ. ವನಜಾಕ್ಷಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಟ್ಟಣದ ಪ್ರಧಾನ ಅಂಚೆ ಕಚೇರಿ ಬಳಿ ಶುಕ್ರವಾರ ಅಂಚೆ ಪತ್ರ ಚಳವಳಿ ನಡೆಸಿದರು. ಮುಖ್ಯಮಂತ್ರಿಗೆ ಅಂಚೆ ಪತ್ರಗಳನ್ನು ಕಳುಹಿಸಿದರು.</p>.<p>‘ಹೊಸ ಪಿಂಚಣಿ ಯೋಜನೆ ಅಸಮಂಜಸವಾಗಿದೆ. ಈ ಹಿಂದೆ ಇದ್ದ ಪಿಂಚಣಿ ಯೋಜನೆಯನ್ನೇ (ಒಪಿಎಸ್) ಮುಂದುವರಿಸಬೇಕು. ಈ ಬೇಡಿಕೆಗಾಗಿ ಸಾಂಕೇತಿಕವಾಗಿ ಪತ್ರ ಚಳವಳಿ ನಡೆಸುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ತೀವ್ರ ಸ್ವರೂಪದ ಚಳವಳಿ ರೂಪಿಸಲಾಗುವುದು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್. ಲೋಕೇಶ್ ಎಚ್ಚರಿಸಿದರು.</p>.<p>ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಅಧ್ಯಕ್ಷ ಟಿ.ಪಿ. ಕುಮಾರ್ ಮಾತನಾಡಿ, ‘ಹೊಸ ಪಿಂಚಣಿ ಯೋಜನೆಗೆ ಪರಿಶೀಲನೆ ಹಂತದಲ್ಲೇ ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೂ ಅದನ್ನು ಜಾರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರ ಹಿತಕ್ಕೆ ವಿರುದ್ಧವಾಗಿರುವ ಈ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ’ ಎಂದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಮೋಹನ್, ಖಜಾಂಚಿ ಸುನೀತಾ, ಪದಾಧಿಕಾರಿಗಳಾದ ಸಿ. ಮಹೇಶ್, ಎನ್.ಎನ್. ಪ್ರಕಾಶ್, ಸುರೇಶ್, ಸಿ.ಎಸ್. ವಾಣಿ, ಡಿ. ರಮೇಶ್, ಎಸ್.ಎಂ. ವನಜಾಕ್ಷಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>