ಕೊಪ್ಪದ ಎನ್ಎಸ್ಎಲ್, ಮಂಡ್ಯದ ಮೈಶುಗರ್ಸ್ ಸಕ್ಕರೆ ಕಾರ್ಖಾನೆಗೆ ಸಾಗಿಸಲೂ ಇದೇ ರಸ್ತೆಯ ಮೂಲಕವೇ ಸಾಗಿಸುತ್ತಾರೆ. ಸುಮಾರು 1 ವರ್ಷದಿಂದ ಈ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಿವೆ. ಈ ಕುರಿತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.