<p><strong>ಮದ್ದೂರು:</strong> ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಈ ತೀರ್ಪನ್ನು ಗೌರವಿಸುವುದಾಗಿ ಸಂಸದ ಸಿ.ಎನ್. ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ಸೋಮನಹಳ್ಳಿಯ ವಿದ್ಯಾಸಂಸ್ಥೆಯ ಪ್ರಯೋಗ ಸಂಸ್ಥೆಯು ನಿರ್ಮಿಸಿರುವ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. </p>.<p>ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಒಂದು ವೇಳೆ ನಡೆದಿದ್ದರೆ ಯುಪಿಎ ಇಷ್ಟೊಂದು ಸ್ಥಾನಗಳನ್ನು ಹೇಗೆ ಗಳಿಸಲು ಸಾಧ್ಯವಾಗುತ್ತಿತ್ತು. ಅವರ ಆರೋಪ ಸತ್ಯಕ್ಕೆ ದೂರವಾಗಿದೆ. ನನ್ನನ್ನು ಕ್ಷೇತ್ರದ ಜನತೆ 2 ಲಕ್ಷಕ್ಕೂ ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂಬುದನ್ನು ಬುದ್ಧಿ ಇದ್ದವರು ಅರಿತುಕೊಂಡಿದ್ದರೆ ಹೀಗೆ ಆರೋಪ ಮಾಡುತ್ತಿರಲಿಲ್ಲ. ಅವರಿಗೆ (ಕಾಂಗ್ರೆಸ್) ಹೆಚ್ಚು ಸ್ಥಾನ ಬರದಿದ್ದಾಗ ಇವಿಎಂ ಯಂತ್ರಗಳು ಸರಿಯಿಲ್ಲ ಎಂದು ಆರೋಪ ಮಾಡಿದ್ದರು’ ಎಂದು ಕುಟುಕಿದರು.</p>.<p>ನಂತರ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿ, ಕೆಂಗಲ್ ಹನುಮಂತಯ್ಯ, ಎಸ್.ಎಂ. ಕೃಷ್ಣ ಅವರಂತಹ ಮಹಾನ್ ವ್ಯಕ್ತಿಗಳು ವಿದ್ಯಾಭ್ಯಾಸ ಮಾಡಿದ ಮದ್ದೂರು ಬಳಿಯ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಕರಣ್ ಅವರು ಆಸಕ್ತಿಯಿಂದ ಸುಸಜ್ಜಿತ ವಿಜ್ಞಾನ ಪ್ರಯೋಗಶಾಲೆಯನ್ನು ಆರಂಭಿಸಿರುವುದು ಸ್ವಾಗತಾರ್ಹ ಎಂದರು.</p>.<p>ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥ ಕರಣ್, ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸ್ವಾಮೀಜಿ, ಸಂಸ್ಥೆಯ ಆಡಳಿತಾಧಿಕಾರಿ ಶಿವರಾಮೇಗೌಡ, ಡಾ. ನಾಗರಾಜ, ಟಿ.ವಿ.ರಾಜು, ಡಾ.ಆನಂದ, ಡಾ.ವಿಷ್ಣುಕಾಂತ್, ಮುರಳಿಮೋಹನ್ ಹಾಜರಿದ್ದರು.</p>.ಅತ್ಯಾಚಾರ ಪ್ರಕರಣ: ಪ್ರಜ್ವಲ್ಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಈ ತೀರ್ಪನ್ನು ಗೌರವಿಸುವುದಾಗಿ ಸಂಸದ ಸಿ.ಎನ್. ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ಸೋಮನಹಳ್ಳಿಯ ವಿದ್ಯಾಸಂಸ್ಥೆಯ ಪ್ರಯೋಗ ಸಂಸ್ಥೆಯು ನಿರ್ಮಿಸಿರುವ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. </p>.<p>ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಒಂದು ವೇಳೆ ನಡೆದಿದ್ದರೆ ಯುಪಿಎ ಇಷ್ಟೊಂದು ಸ್ಥಾನಗಳನ್ನು ಹೇಗೆ ಗಳಿಸಲು ಸಾಧ್ಯವಾಗುತ್ತಿತ್ತು. ಅವರ ಆರೋಪ ಸತ್ಯಕ್ಕೆ ದೂರವಾಗಿದೆ. ನನ್ನನ್ನು ಕ್ಷೇತ್ರದ ಜನತೆ 2 ಲಕ್ಷಕ್ಕೂ ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿದ್ದಾರೆ ಎಂಬುದನ್ನು ಬುದ್ಧಿ ಇದ್ದವರು ಅರಿತುಕೊಂಡಿದ್ದರೆ ಹೀಗೆ ಆರೋಪ ಮಾಡುತ್ತಿರಲಿಲ್ಲ. ಅವರಿಗೆ (ಕಾಂಗ್ರೆಸ್) ಹೆಚ್ಚು ಸ್ಥಾನ ಬರದಿದ್ದಾಗ ಇವಿಎಂ ಯಂತ್ರಗಳು ಸರಿಯಿಲ್ಲ ಎಂದು ಆರೋಪ ಮಾಡಿದ್ದರು’ ಎಂದು ಕುಟುಕಿದರು.</p>.<p>ನಂತರ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿ, ಕೆಂಗಲ್ ಹನುಮಂತಯ್ಯ, ಎಸ್.ಎಂ. ಕೃಷ್ಣ ಅವರಂತಹ ಮಹಾನ್ ವ್ಯಕ್ತಿಗಳು ವಿದ್ಯಾಭ್ಯಾಸ ಮಾಡಿದ ಮದ್ದೂರು ಬಳಿಯ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಕರಣ್ ಅವರು ಆಸಕ್ತಿಯಿಂದ ಸುಸಜ್ಜಿತ ವಿಜ್ಞಾನ ಪ್ರಯೋಗಶಾಲೆಯನ್ನು ಆರಂಭಿಸಿರುವುದು ಸ್ವಾಗತಾರ್ಹ ಎಂದರು.</p>.<p>ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥ ಕರಣ್, ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸ್ವಾಮೀಜಿ, ಸಂಸ್ಥೆಯ ಆಡಳಿತಾಧಿಕಾರಿ ಶಿವರಾಮೇಗೌಡ, ಡಾ. ನಾಗರಾಜ, ಟಿ.ವಿ.ರಾಜು, ಡಾ.ಆನಂದ, ಡಾ.ವಿಷ್ಣುಕಾಂತ್, ಮುರಳಿಮೋಹನ್ ಹಾಜರಿದ್ದರು.</p>.ಅತ್ಯಾಚಾರ ಪ್ರಕರಣ: ಪ್ರಜ್ವಲ್ಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>