‘ತಾಲ್ಲೂಕಿನ ಕರಿಘಟ್ಟದ ಶ್ರೀನಿವಾಸ, ಗಂಜಾಂ ನಿಮಿಷಾಂಬಾ ದೇವಾಲಯದಲ್ಲಿ ಗುರುವಾರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಶ್ರೀರಂಗನಾಥಸ್ವಾಮಿ ದೇವಾಲಯವನ್ನು ಮಾತ್ರ ಬಂದ್ ಮಾಡಿರುವುದು ಸರಿಯಲ್ಲ. ಇದರಿಂದ ವ್ಯಾಪಾರಿಗಳಿಗೂ ತೊಂದರೆಯಾಗಿದೆ. ಕೋವಿಡ್–19 ಮಾರ್ಗಸೂಚಿ ಅನ್ವಯ ಶ್ರೀರಂಗನಾಥನ ದರ್ಶನಕ್ಕೆ ಅವಕಾಶ ನೀಡಬೇಕಿತ್ತು’ ಎಂದು ಜ್ಯೋತಿಷಿ ಡಾ.ಭಾನುಪ್ರಕಾಶ್ ಶರ್ಮಾ, ಪುರಸಭೆ ಸದಸ್ಯ ಎಂ. ಶ್ರೀನಿವಾಸ್ ಹೇಳಿದರು.