<p><strong>ಮೈಸೂರು/ಮಂಡ್ಯ:</strong> ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಪ್ರಾಂತ್ಯದ ಕೆಆರ್ಎಸ್, ಕಬಿನಿ, ಹಾರಂಗಿ, ಹೇಮಾತಿ, ನುಗು, ತಾರಕ ಅಣೆಕಟ್ಟೆಗಳಲ್ಲಿ ಕೈಗಾರಿಕಾ ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ.</p>.<p>‘ಕೆಆರ್ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರ, ಉತ್ತರ ದ್ವಾರ, ಬೃಂದಾವನ ಪ್ರವೇಶ ದ್ವಾರ ಮತ್ತು ಆರ್ಕಿಡ್ ಹೋಟೆಲ್ ಪ್ರವೇಶ ಮಾರ್ಗದಲ್ಲಿ ಸಂಚರಿಸುವವರ ಮೇಲೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಸ್) ಹದ್ದಿನ ಕಣ್ಣಿಟ್ಟಿದೆ. ಈ ಮಾರ್ಗಗಳಲ್ಲಿ ಬರುವ ಮತ್ತು ಹೋಗುವವರನ್ನು ತಪಾಸಣೆಗೆ ಒಳಡಿಸಲಾಗುತ್ತಿದೆ. ಅಣೆಕಟ್ಟೆಯ ಸರಹದ್ದಿನಲ್ಲಿ, ಜನ ಸಂಚಾರ ಹೆಚ್ಚು ಇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಿನದ 24 ಗಂಟೆಯೂ ಪೊಲೀಸರು ಕಾವಲು ಕಾಯುತ್ತಿದ್ದಾರೆ’ ಎಂದು ಕೈಗಾರಿಕಾ ಭದ್ರತಾ ಪಡೆಯ ಸಹಾಯಕ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.</p>.<p>‘ಅಣೆಕಟ್ಟೆಯ ಭದ್ರತೆಗೆ ಒಬ್ಬರು ಸಹಾಯಕ ಕಮಾಂಡೆಂಟ್, ಮೂವರು ಇನ್ಸ್ಪೆಕ್ಟರ್ಗಳು ಸೇರಿ 56 ಮಂದಿ ಇದ್ದು, ಮೂರು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಬ್ಬಂದಿಯ ರಜೆಯನ್ನು ಸದ್ಯ ಕಡಿತಗೊಳಿಸಲಾಗಿದೆ. ಅನುಮಾನಾಸ್ಪದವಾಗಿ ಓಡಾಡುವವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು/ಮಂಡ್ಯ:</strong> ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಪ್ರಾಂತ್ಯದ ಕೆಆರ್ಎಸ್, ಕಬಿನಿ, ಹಾರಂಗಿ, ಹೇಮಾತಿ, ನುಗು, ತಾರಕ ಅಣೆಕಟ್ಟೆಗಳಲ್ಲಿ ಕೈಗಾರಿಕಾ ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ.</p>.<p>‘ಕೆಆರ್ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರ, ಉತ್ತರ ದ್ವಾರ, ಬೃಂದಾವನ ಪ್ರವೇಶ ದ್ವಾರ ಮತ್ತು ಆರ್ಕಿಡ್ ಹೋಟೆಲ್ ಪ್ರವೇಶ ಮಾರ್ಗದಲ್ಲಿ ಸಂಚರಿಸುವವರ ಮೇಲೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಸ್) ಹದ್ದಿನ ಕಣ್ಣಿಟ್ಟಿದೆ. ಈ ಮಾರ್ಗಗಳಲ್ಲಿ ಬರುವ ಮತ್ತು ಹೋಗುವವರನ್ನು ತಪಾಸಣೆಗೆ ಒಳಡಿಸಲಾಗುತ್ತಿದೆ. ಅಣೆಕಟ್ಟೆಯ ಸರಹದ್ದಿನಲ್ಲಿ, ಜನ ಸಂಚಾರ ಹೆಚ್ಚು ಇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಿನದ 24 ಗಂಟೆಯೂ ಪೊಲೀಸರು ಕಾವಲು ಕಾಯುತ್ತಿದ್ದಾರೆ’ ಎಂದು ಕೈಗಾರಿಕಾ ಭದ್ರತಾ ಪಡೆಯ ಸಹಾಯಕ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.</p>.<p>‘ಅಣೆಕಟ್ಟೆಯ ಭದ್ರತೆಗೆ ಒಬ್ಬರು ಸಹಾಯಕ ಕಮಾಂಡೆಂಟ್, ಮೂವರು ಇನ್ಸ್ಪೆಕ್ಟರ್ಗಳು ಸೇರಿ 56 ಮಂದಿ ಇದ್ದು, ಮೂರು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಬ್ಬಂದಿಯ ರಜೆಯನ್ನು ಸದ್ಯ ಕಡಿತಗೊಳಿಸಲಾಗಿದೆ. ಅನುಮಾನಾಸ್ಪದವಾಗಿ ಓಡಾಡುವವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>