ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಗುಂಡಿಗೆ ಬಿದ್ದ ಬೈಕ್‌: ಗರ್ಭಿಣಿ ಸಾವು

Last Updated 18 ಅಕ್ಟೋಬರ್ 2022, 20:41 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ತರೀಪುರ ಬಳಿ ಸೋಮವಾರ ರಸ್ತೆ ಗುಂಡಿಗೆ ಬೈಕ್‌ ಬಿದ್ದು ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ, ಮಹದೇವಪುರದ ಕಾರ್ತಿಕ್ ಅವರ ಪತ್ನಿ ಛಾಯಾದೇವಿ (22) ಮಂಗಳವಾರ ಸಂಜೆ ಮೃತಪಟ್ಟರು.

ಬೈಕ್‌ ಚಲಾಯಿಸುತ್ತಿದ್ದ ಕಾರ್ತಿಕ್‌ ಕೂಡ ಗಾಯಗೊಂಡಿದ್ದು, ಚಿಕಿತ್ಸೆ ಪಡೆದಿದ್ದಾರೆ. ದಂಪತಿ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ವೇಳೆ ಅಪಘಾತ ನಡೆದಿತ್ತು.

ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕ್ರೋಶ: ‘ತರೀಪುರ, ಮಹದೇವಪುರ ಮಾರ್ಗದಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು, ಉದ್ದಕ್ಕೂ ಗುಂಡಿಗಳು ನಿರ್ಮಾಣವಾಗಿವೆ. ಅದರಿಂದಲೇ ಗರ್ಭಿಣಿ ಛಾಯಾದೇವಿ ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆ ದುರಸ್ತಿ ಮಾಡಿಸುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಗಮನ ಹರಿಸುತ್ತಿಲ್ಲ’ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT