<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ಇಳಿಸಂಜೆಯ ತಂಪು ಗಾಳಿ, ನೆರೆದ ಸಾವಿರಾರು ಮಂದಿಯ ಭಕ್ತಿಯ ಸಿಂಚನದ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1,066ನೇ ಜಯಂತಿ ಮಹೋತ್ಸವಕ್ಕೆ ಇಲ್ಲಿ ಮಂಗಳವಾರ ವಿಧ್ಯುಕ್ತ ಚಾಲನೆ ನೀಡಿದರು. </p>.ಮಳವಳ್ಳಿ: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿಗೆ ಅದ್ದೂರಿ ಸ್ವಾಗತ.<p>ಏಷ್ಯಾ ಖಂಡದಲ್ಲೇ ಮೊಟ್ಟಮೊದಲು ಜಲ ವಿದ್ಯುತ್ ಉತ್ಪಾದಿಸಿದ ತಾಲ್ಲೂಕಿನ ಶಿವನಸಮುದ್ರದ ಇತಿಹಾಸವೂ ಕಾರ್ಯಕ್ರಮದ ಶ್ರೀ ಘನಲಿಂಗ ಶಿವಯೋಗಿ ವೇದಿಕೆಯಲ್ಲಿ ಹೊಳೆಯಿತು.</p><p>ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ಒಂದು ವಾರ ಕಾಲ ನಡೆಯಲಿರುವ ಉತ್ಸವವನ್ನು ಕಳೆಗಟ್ಟಿಸಲು, ವಸ್ತು ಪ್ರದರ್ಶನದ ನೂರು ಮಳಿಗೆಗಳೂ ಸಂಭ್ರಮದಿಂದ ಬಾಗಿಲು ತೆರೆದವು. </p><p>ಉದ್ಘಾಟನೆ ಬಳಿಕ ಮಾತನಾಡಿದ ರಾಷ್ಟ್ರಪತಿ, ಸುತ್ತೂರು ಮಠವು ಹಮ್ಮಿಕೊಂಡಿರುವ ಸೇವಾ ಕಾರ್ಯಗಳನ್ನು, ಮಠದ ಸ್ವಾಮೀಜಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ‘ನಾಳಿನ ಭಾರತಕ್ಕಾಗಿ ಯುವಜನರಲ್ಲಿ ಇಂಥ ಮಠಗಳು ಸ್ಫೂರ್ತಿ ತುಂಬಬೇಕು’ ಎಂದು ಕರೆ ನೀಡಿದರು.</p>.ಮಂಡ್ಯ: ರಾಷ್ಟ್ರಪತಿ ಆಗಮನ; ಮಳವಳ್ಳಿ ಶೃಂಗಾರಮಯ .<p>‘ಕರ್ನಾಟಕವು ಇಂಥ ಹಲವು ಮಠಗಳ ಸೇವೆಯನ್ನು ಕಂಡಿದೆ. ಕಾಯಕವೇ ಕೈಲಾಸ ಎಂಬುದು ಸಂತರಿಗೆ ಬರಿಯ ಮಾತಾಗದೆ, ಬದುಕಿನ ಭಾಗವೇ ಆಗಿತ್ತು’ ಎಂದು ಅಭಿಪ್ರಾಯಪಟ್ಟರು.</p><p>’ಇಂದಿನ ಕ್ಷಿಪ್ರ ಬದಲಾವಣೆ ಮತ್ತು ಅನಿಶ್ಚಿತತೆಯ ಕಾಲದಲ್ಲಿ ನೈತಿಕ ನಾಯಕತ್ವ ಯುವಜನರಲ್ಲಿ ಮೂಡಬೇಕು. 2047ರ ಹೊತ್ತಿಗೆ ಭಾರತದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಒಳಗೊಳ್ಳುವಿಕೆ, ಅಭಿವೃದ್ಧಿ ಮತ್ತು ಮಾನವೀಯತೆ ಒಟ್ಟಿಗೇ ಸಾಗಬೇಕು’ ಎಂದು ಹೇಳಿದರು.</p><p>‘ಶಿವಯೋಗಿಗಳ ತ್ಯಾಗ ಮತ್ತು ಅಧ್ಯಾತ್ಮಿಕ ಶಕ್ತಿಗಳು ಬೆಳಕಿನ ದೀವಿಗೆಗಳಂತೆ. 8ನೇ ಶತಮಾನದಲ್ಲಿ ಮಠವನ್ನು ಸ್ಥಾಪಿಸಿದ ಶಿವಯೋಗಿಗಳು ಒಬ್ಬ ಅಖಂಡ ಗುರು. ಅವರ ನಂತರ ಬಂದ, ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು. </p>.ಮಳವಳ್ಳಿ: ಬೆಳಕವಾಡಿ ದೊಡ್ಡಕೆರೆ ಸಂರಕ್ಷಣೆಗೆ ಆಗ್ರಹ.<p>‘8ನೇ ಶತಮಾನದಲ್ಲಿ ಮಠ ಸ್ಥಾಪಿಸಿದ ಶಿವಯೋಗಿ ಸ್ವಾಮಿಗಳ ಬದುಕು, ದರ್ಶನ ಮತ್ತು ಸಂದೇಶಗಳು ಅನನ್ಯವಾದದು. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಧರ್ಮ, ಶಿಕ್ಷಣ, ಸಂಸ್ಕೃತಿ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಬೋಧನೆಗಳು ಹಲವು ತಲೆಮಾರುಗಳಿಗೆ ಮಾರ್ಗದರ್ಶಕವಾಗಿವೆ. ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಸುತ್ತೂರು ಮಠದ ಜೆಎಸ್ಎಸ್ ಮಹಾವಿದ್ಯಾಪೀಠವು ದೇಶ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಸುಸ್ಥಿರ ಅಭಿವೃದ್ಧಿಯ ವಿಷಯದಲ್ಲಿ ಸುತ್ತೂರು ಮಠವು ಆಧಾರಸ್ತಂಭದಂತೆ ನಿಂತಿದೆ’ ಎಂದು ಬಣ್ಣಿಸಿದರು. </p><p>ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ‘ಸಮಾಜದಲ್ಲಿ ಏಕತೆ, ಸಮತೆ ಮತ್ತು ಸದ್ಭಾವಗಳನ್ನು ತರುವಲ್ಲಿ ಮಠವು ಗಣನೀಯ ಕಾರ್ಯ ಮಾಡಿದೆ’ ಎಂದರು.</p>.VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ.<p>ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ತಂದೆ ಎಚ್.ಡಿ. ದೇವೇಗೌಡರು ರಾಜಕೀಯ ಪ್ರವೇಶ ಮಾಡಿದ 60ರ ದಶಕದಿಂದಲೂ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧವನ್ನು ಹೊಂದಿದೆ’ ಎಂದರು ನೆನೆದರು.</p><p>ಸುತ್ತೂರು ಶಿವರಾತ್ರಿದೇಶಿ ಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕನಕಪುರ ಶ್ರೀದೇಗುಲ ಮಠದ ಚನ್ನಬಸವ ಸ್ವಾಮಿ ಪಾಲ್ಗೊಂಡರು.</p>.ಮಳವಳ್ಳಿ: ಕೋಟ್ಯಂತರ ಮೌಲ್ಯ ಒತ್ತುವರಿ ಜಾಗ ತೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ಇಳಿಸಂಜೆಯ ತಂಪು ಗಾಳಿ, ನೆರೆದ ಸಾವಿರಾರು ಮಂದಿಯ ಭಕ್ತಿಯ ಸಿಂಚನದ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1,066ನೇ ಜಯಂತಿ ಮಹೋತ್ಸವಕ್ಕೆ ಇಲ್ಲಿ ಮಂಗಳವಾರ ವಿಧ್ಯುಕ್ತ ಚಾಲನೆ ನೀಡಿದರು. </p>.ಮಳವಳ್ಳಿ: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿಗೆ ಅದ್ದೂರಿ ಸ್ವಾಗತ.<p>ಏಷ್ಯಾ ಖಂಡದಲ್ಲೇ ಮೊಟ್ಟಮೊದಲು ಜಲ ವಿದ್ಯುತ್ ಉತ್ಪಾದಿಸಿದ ತಾಲ್ಲೂಕಿನ ಶಿವನಸಮುದ್ರದ ಇತಿಹಾಸವೂ ಕಾರ್ಯಕ್ರಮದ ಶ್ರೀ ಘನಲಿಂಗ ಶಿವಯೋಗಿ ವೇದಿಕೆಯಲ್ಲಿ ಹೊಳೆಯಿತು.</p><p>ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ಒಂದು ವಾರ ಕಾಲ ನಡೆಯಲಿರುವ ಉತ್ಸವವನ್ನು ಕಳೆಗಟ್ಟಿಸಲು, ವಸ್ತು ಪ್ರದರ್ಶನದ ನೂರು ಮಳಿಗೆಗಳೂ ಸಂಭ್ರಮದಿಂದ ಬಾಗಿಲು ತೆರೆದವು. </p><p>ಉದ್ಘಾಟನೆ ಬಳಿಕ ಮಾತನಾಡಿದ ರಾಷ್ಟ್ರಪತಿ, ಸುತ್ತೂರು ಮಠವು ಹಮ್ಮಿಕೊಂಡಿರುವ ಸೇವಾ ಕಾರ್ಯಗಳನ್ನು, ಮಠದ ಸ್ವಾಮೀಜಿಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ‘ನಾಳಿನ ಭಾರತಕ್ಕಾಗಿ ಯುವಜನರಲ್ಲಿ ಇಂಥ ಮಠಗಳು ಸ್ಫೂರ್ತಿ ತುಂಬಬೇಕು’ ಎಂದು ಕರೆ ನೀಡಿದರು.</p>.ಮಂಡ್ಯ: ರಾಷ್ಟ್ರಪತಿ ಆಗಮನ; ಮಳವಳ್ಳಿ ಶೃಂಗಾರಮಯ .<p>‘ಕರ್ನಾಟಕವು ಇಂಥ ಹಲವು ಮಠಗಳ ಸೇವೆಯನ್ನು ಕಂಡಿದೆ. ಕಾಯಕವೇ ಕೈಲಾಸ ಎಂಬುದು ಸಂತರಿಗೆ ಬರಿಯ ಮಾತಾಗದೆ, ಬದುಕಿನ ಭಾಗವೇ ಆಗಿತ್ತು’ ಎಂದು ಅಭಿಪ್ರಾಯಪಟ್ಟರು.</p><p>’ಇಂದಿನ ಕ್ಷಿಪ್ರ ಬದಲಾವಣೆ ಮತ್ತು ಅನಿಶ್ಚಿತತೆಯ ಕಾಲದಲ್ಲಿ ನೈತಿಕ ನಾಯಕತ್ವ ಯುವಜನರಲ್ಲಿ ಮೂಡಬೇಕು. 2047ರ ಹೊತ್ತಿಗೆ ಭಾರತದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಒಳಗೊಳ್ಳುವಿಕೆ, ಅಭಿವೃದ್ಧಿ ಮತ್ತು ಮಾನವೀಯತೆ ಒಟ್ಟಿಗೇ ಸಾಗಬೇಕು’ ಎಂದು ಹೇಳಿದರು.</p><p>‘ಶಿವಯೋಗಿಗಳ ತ್ಯಾಗ ಮತ್ತು ಅಧ್ಯಾತ್ಮಿಕ ಶಕ್ತಿಗಳು ಬೆಳಕಿನ ದೀವಿಗೆಗಳಂತೆ. 8ನೇ ಶತಮಾನದಲ್ಲಿ ಮಠವನ್ನು ಸ್ಥಾಪಿಸಿದ ಶಿವಯೋಗಿಗಳು ಒಬ್ಬ ಅಖಂಡ ಗುರು. ಅವರ ನಂತರ ಬಂದ, ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು. </p>.ಮಳವಳ್ಳಿ: ಬೆಳಕವಾಡಿ ದೊಡ್ಡಕೆರೆ ಸಂರಕ್ಷಣೆಗೆ ಆಗ್ರಹ.<p>‘8ನೇ ಶತಮಾನದಲ್ಲಿ ಮಠ ಸ್ಥಾಪಿಸಿದ ಶಿವಯೋಗಿ ಸ್ವಾಮಿಗಳ ಬದುಕು, ದರ್ಶನ ಮತ್ತು ಸಂದೇಶಗಳು ಅನನ್ಯವಾದದು. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಧರ್ಮ, ಶಿಕ್ಷಣ, ಸಂಸ್ಕೃತಿ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಬೋಧನೆಗಳು ಹಲವು ತಲೆಮಾರುಗಳಿಗೆ ಮಾರ್ಗದರ್ಶಕವಾಗಿವೆ. ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಸುತ್ತೂರು ಮಠದ ಜೆಎಸ್ಎಸ್ ಮಹಾವಿದ್ಯಾಪೀಠವು ದೇಶ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಸುಸ್ಥಿರ ಅಭಿವೃದ್ಧಿಯ ವಿಷಯದಲ್ಲಿ ಸುತ್ತೂರು ಮಠವು ಆಧಾರಸ್ತಂಭದಂತೆ ನಿಂತಿದೆ’ ಎಂದು ಬಣ್ಣಿಸಿದರು. </p><p>ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ‘ಸಮಾಜದಲ್ಲಿ ಏಕತೆ, ಸಮತೆ ಮತ್ತು ಸದ್ಭಾವಗಳನ್ನು ತರುವಲ್ಲಿ ಮಠವು ಗಣನೀಯ ಕಾರ್ಯ ಮಾಡಿದೆ’ ಎಂದರು.</p>.VIDEO | ಮಳವಳ್ಳಿ: 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ.<p>ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ತಂದೆ ಎಚ್.ಡಿ. ದೇವೇಗೌಡರು ರಾಜಕೀಯ ಪ್ರವೇಶ ಮಾಡಿದ 60ರ ದಶಕದಿಂದಲೂ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧವನ್ನು ಹೊಂದಿದೆ’ ಎಂದರು ನೆನೆದರು.</p><p>ಸುತ್ತೂರು ಶಿವರಾತ್ರಿದೇಶಿ ಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕನಕಪುರ ಶ್ರೀದೇಗುಲ ಮಠದ ಚನ್ನಬಸವ ಸ್ವಾಮಿ ಪಾಲ್ಗೊಂಡರು.</p>.ಮಳವಳ್ಳಿ: ಕೋಟ್ಯಂತರ ಮೌಲ್ಯ ಒತ್ತುವರಿ ಜಾಗ ತೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>