<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿರುವ ಭೂವರಾಹನಾಥದೇವಸ್ಥಾಮಿ ದೇವಸ್ಥಾನ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿ, ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಅವರು ವಿಶೇಷ ಬೋಟ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವಥಿ, ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಪ್ರಭು ಮೊದಲಾದವರೊಂದಿಗೆ ಕೆ.ಆರ್.ಎಸ್ ಹಿನ್ನೀರಿನಲ್ಲಿ ಶುಕ್ರವಾರ ಸಂಜೆ ತಾಲ್ಲೂಕಿನ ಅಂಬಿಗರಹಳ್ಳಿ- ಸಂಗಾಪುರದ ತ್ರಿವೇಣಿ ಸಂಗಮದಿಂದ ಬೆಳತೂರು ದ್ವೀಪ, ಭೂವರಹನಾಥ ದೇಗುಲ ಇರುವ ಕಲ್ಲಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಸಾಹಸ ಕ್ರೀಡೆಗಳನ್ನು ವೀಕ್ಷಿಸಿದರು.</p>.<p>‘ಮುಂಬರುವ ದಿನಗಳಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ನೀರು ಕೃಷಿ ಮತ್ತು ಕುಡಿಯುವ ನೀರಿಗೆ ಮಾತ್ರ ಬಳಕೆಯಾಗದೆ ಗುಜರಾತ್ ರಾಜ್ಯದ ನರ್ಮದಾ ಸರೋವರದ ಮಾದರಿಯಲ್ಲಿ ಅಣೆಕಟ್ಟೆಯ ಹಿನ್ನೀರನ್ನು ಪ್ರವಾಸೋದ್ಯಮದ ವಿವಿಧ ಕಾರ್ಯಗಳಿಗೆ ಬಳಕೆ ಮಾಡಿ<br />ಕೊಂಡು ಅಭಿವೃದ್ಧಿಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅಪಾರವಾದ ಅವಕಾಶಗಳಿದ್ದು, ಜಿಲ್ಲೆಯಲ್ಲಿರುವ ಪ್ರಾಚೀನ ದೇವಾಲಯಗಳು, ಹಿನ್ನೀರಿನಲ್ಲಿರುವ ನಡುಗಡ್ಡೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಜಿಲ್ಲೆಗೆ ಆಕರ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>‘ಹೇಮಾವತಿ ನದಿಯು ಹಲವಾರು ನಡುಗಡ್ಡೆಗಳನ್ನು ಸೃಷ್ಟಿಸಿದ್ದು, ಅವುಗಳ ಅಭಿವೃದ್ಧಿಗೆ ಕ್ರಮ ವಹಿಸಿ ಪ್ರವಾಸಿಗರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು. ತೂಗು ಸೇತುವೆ ನಿರ್ಮಿಸುವ ಮೂಲಕ ಆಕರ್ಷಕಗೊಳಿಸಲಾಗುವುದು. ದೋಣಿ ವಿಹಾರ ಆರಂಭಿಸಲಾಗುವುದು’ ಎಂದು ನುಡಿದರು.</p>.<p>ನಾರಾಯಣಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ನೂರಾರು ಪ್ರವಾಸಿತಾಣಗಳಿದ್ದು, ತಾಲ್ಲೂಕಿನಲ್ಲಿ ಹೇಮಾವತಿ ನದಿಯು ಹೇಮಗಿರಿ<br />ಬಳಿ ಹೊಸಪಟ್ಟಣ ಸೇರಿದಂತೆ ಕಲ್ಲಹಳ್ಳಿ, ಮಂದಗೆರೆ ಬಳಿ ನಡುಗಡ್ಡೆಯನ್ನು ಸೃಷ್ಟಿಸಿದ ಜಿಲ್ಲೆಯ ಹೆಸರನ್ನು ಜಾಗತಿಕ ಭೂಪಟದಲ್ಲಿ ಶಾಶ್ವತಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿದ್ದು, ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದರು.</p>.<p>ಪಾಂಡವಪುರ ಉಪವಿಭಾ ಗಾಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರ್ಗಳಾದ ರೂಪ, ಎಂ.ಶಿವಮೂರ್ತಿ , ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸ ರಾಘವನ್, ಮುಖಂಡರಾದ ಅಂ.ಚಿ.ಸಣ್ಣಸ್ವಾಮೀಗೌಡ, ಡಾ. ಆರ್.ಕೆ.ವೆಂಕಟೇಶ್ ಸೇರಿದಂತೆ ಪ್ರವಾಸೋದ್ಯಮ, ಕ್ರೀಡೆ ಹಾಗೂ ಯುವಜನ ಸೇವಾ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ: </strong>ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿರುವ ಭೂವರಾಹನಾಥದೇವಸ್ಥಾಮಿ ದೇವಸ್ಥಾನ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿ, ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಅವರು ವಿಶೇಷ ಬೋಟ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವಥಿ, ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಪ್ರಭು ಮೊದಲಾದವರೊಂದಿಗೆ ಕೆ.ಆರ್.ಎಸ್ ಹಿನ್ನೀರಿನಲ್ಲಿ ಶುಕ್ರವಾರ ಸಂಜೆ ತಾಲ್ಲೂಕಿನ ಅಂಬಿಗರಹಳ್ಳಿ- ಸಂಗಾಪುರದ ತ್ರಿವೇಣಿ ಸಂಗಮದಿಂದ ಬೆಳತೂರು ದ್ವೀಪ, ಭೂವರಹನಾಥ ದೇಗುಲ ಇರುವ ಕಲ್ಲಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ನಂತರ ಸಾಹಸ ಕ್ರೀಡೆಗಳನ್ನು ವೀಕ್ಷಿಸಿದರು.</p>.<p>‘ಮುಂಬರುವ ದಿನಗಳಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ನೀರು ಕೃಷಿ ಮತ್ತು ಕುಡಿಯುವ ನೀರಿಗೆ ಮಾತ್ರ ಬಳಕೆಯಾಗದೆ ಗುಜರಾತ್ ರಾಜ್ಯದ ನರ್ಮದಾ ಸರೋವರದ ಮಾದರಿಯಲ್ಲಿ ಅಣೆಕಟ್ಟೆಯ ಹಿನ್ನೀರನ್ನು ಪ್ರವಾಸೋದ್ಯಮದ ವಿವಿಧ ಕಾರ್ಯಗಳಿಗೆ ಬಳಕೆ ಮಾಡಿ<br />ಕೊಂಡು ಅಭಿವೃದ್ಧಿಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅಪಾರವಾದ ಅವಕಾಶಗಳಿದ್ದು, ಜಿಲ್ಲೆಯಲ್ಲಿರುವ ಪ್ರಾಚೀನ ದೇವಾಲಯಗಳು, ಹಿನ್ನೀರಿನಲ್ಲಿರುವ ನಡುಗಡ್ಡೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಜಿಲ್ಲೆಗೆ ಆಕರ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>‘ಹೇಮಾವತಿ ನದಿಯು ಹಲವಾರು ನಡುಗಡ್ಡೆಗಳನ್ನು ಸೃಷ್ಟಿಸಿದ್ದು, ಅವುಗಳ ಅಭಿವೃದ್ಧಿಗೆ ಕ್ರಮ ವಹಿಸಿ ಪ್ರವಾಸಿಗರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು. ತೂಗು ಸೇತುವೆ ನಿರ್ಮಿಸುವ ಮೂಲಕ ಆಕರ್ಷಕಗೊಳಿಸಲಾಗುವುದು. ದೋಣಿ ವಿಹಾರ ಆರಂಭಿಸಲಾಗುವುದು’ ಎಂದು ನುಡಿದರು.</p>.<p>ನಾರಾಯಣಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ನೂರಾರು ಪ್ರವಾಸಿತಾಣಗಳಿದ್ದು, ತಾಲ್ಲೂಕಿನಲ್ಲಿ ಹೇಮಾವತಿ ನದಿಯು ಹೇಮಗಿರಿ<br />ಬಳಿ ಹೊಸಪಟ್ಟಣ ಸೇರಿದಂತೆ ಕಲ್ಲಹಳ್ಳಿ, ಮಂದಗೆರೆ ಬಳಿ ನಡುಗಡ್ಡೆಯನ್ನು ಸೃಷ್ಟಿಸಿದ ಜಿಲ್ಲೆಯ ಹೆಸರನ್ನು ಜಾಗತಿಕ ಭೂಪಟದಲ್ಲಿ ಶಾಶ್ವತಗೊಳಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿದ್ದು, ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದರು.</p>.<p>ಪಾಂಡವಪುರ ಉಪವಿಭಾ ಗಾಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರ್ಗಳಾದ ರೂಪ, ಎಂ.ಶಿವಮೂರ್ತಿ , ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸ ರಾಘವನ್, ಮುಖಂಡರಾದ ಅಂ.ಚಿ.ಸಣ್ಣಸ್ವಾಮೀಗೌಡ, ಡಾ. ಆರ್.ಕೆ.ವೆಂಕಟೇಶ್ ಸೇರಿದಂತೆ ಪ್ರವಾಸೋದ್ಯಮ, ಕ್ರೀಡೆ ಹಾಗೂ ಯುವಜನ ಸೇವಾ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>