<p><strong>ಮಳವಳ್ಳಿ(ಮಂಡ್ಯ):</strong> ತಾಲ್ಲೂಕಿನ ಕೆಂಬೂತಗೆರೆ ಗ್ರಾಮದಲ್ಲಿ ಸಕಾಲಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಮನೆಯನ್ನು ಮುಟ್ಟಗೋಲು ಹಾಕಿಕೊಳ್ಳಲಾಗುವುದು ಎಂದು ಖಾಸಗಿ ಫೈನಾನ್ಸ್ ಸಂಸ್ಥೆಯೊಂದು ನೋಟಿಸ್ ಜಾರಿ ಮಾಡಿದೆ.</p><p>ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಕೆ. ವೆಂಕಟೇಶ್ ಮತ್ತು ರತ್ನಮ್ಮ ಅವರು ಮನೆ ನಿರ್ಮಾಣಕ್ಕೆ ಮಣಪ್ಪುರಂ ಹೋಮ್ ಫೈನಾನ್ಸ್ನಿಂದ ₹8.50 ಲಕ್ಷ ಸಾಲ ಪಡೆದು ಹಲವು ಕಂತುಗಳನ್ನು ಕಟ್ಟಿದ್ದಾರೆ. ಈ ನಡುವೆ ವೆಂಕಟೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದರಿಂದ ಕಳೆದ 7 ತಿಂಗಳಿನಿಂದ ಹಣ ಪಾವತಿ ಮಾಡಿಲ್ಲ. ಹೀಗಾಗಿ ಬಡ್ಡಿ ಸೇರಿದಂತೆ ಸುಮಾರು ₹8 ಲಕ್ಷ ಹಣ ಕಟ್ಟುವಂತೆ ತಾಕೀತು ಮಾಡಿದ್ದಾರೆ. </p><p>‘ಹಣ ಕಟ್ಟದಿದ್ದರೆ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು’ ಎಂದು ನೋಟಿಸ್ ಅನ್ನು ಮನೆ ಮುಂದೆ ಅಂಟಿಸಿದ್ದಾರೆ’ ಎಂದು ರತ್ನಮ್ಮ ದೂರಿದರು.</p><p>ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಟರಾಜು ನೊಂದ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p><p>ನಂತರ ಅವರು ಮಾತನಾಡಿ, ‘ತಾಲ್ಲೂಕಿನ ಕೊನ್ನಾಪುರ ಹಾಗೂ ಮಲಿಯೂರು ಗ್ರಾಮಗಳಲ್ಲಿ ಖಾಸಗಿ ಫೈನಾನ್ಸ್ ಕಿರುಕುಳದಿಂದ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸಂದರ್ಭದಲ್ಲಿ ಇದೀಗ ಮತ್ತೊಂದು ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಸಾಲ ಪಾವತಿಗೆ ಕಾಲಾವಕಾಶ ಕೊಡಿಸುವುದರೊಂದಿಗೆ ಹೆಚ್ಚುವರಿ ಬಡ್ಡಿಯನ್ನು ಕಡಿತಗೊಳಿಸಿ ಆ ಕುಟುಂಬದ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ(ಮಂಡ್ಯ):</strong> ತಾಲ್ಲೂಕಿನ ಕೆಂಬೂತಗೆರೆ ಗ್ರಾಮದಲ್ಲಿ ಸಕಾಲಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಮನೆಯನ್ನು ಮುಟ್ಟಗೋಲು ಹಾಕಿಕೊಳ್ಳಲಾಗುವುದು ಎಂದು ಖಾಸಗಿ ಫೈನಾನ್ಸ್ ಸಂಸ್ಥೆಯೊಂದು ನೋಟಿಸ್ ಜಾರಿ ಮಾಡಿದೆ.</p><p>ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಕೆ. ವೆಂಕಟೇಶ್ ಮತ್ತು ರತ್ನಮ್ಮ ಅವರು ಮನೆ ನಿರ್ಮಾಣಕ್ಕೆ ಮಣಪ್ಪುರಂ ಹೋಮ್ ಫೈನಾನ್ಸ್ನಿಂದ ₹8.50 ಲಕ್ಷ ಸಾಲ ಪಡೆದು ಹಲವು ಕಂತುಗಳನ್ನು ಕಟ್ಟಿದ್ದಾರೆ. ಈ ನಡುವೆ ವೆಂಕಟೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದರಿಂದ ಕಳೆದ 7 ತಿಂಗಳಿನಿಂದ ಹಣ ಪಾವತಿ ಮಾಡಿಲ್ಲ. ಹೀಗಾಗಿ ಬಡ್ಡಿ ಸೇರಿದಂತೆ ಸುಮಾರು ₹8 ಲಕ್ಷ ಹಣ ಕಟ್ಟುವಂತೆ ತಾಕೀತು ಮಾಡಿದ್ದಾರೆ. </p><p>‘ಹಣ ಕಟ್ಟದಿದ್ದರೆ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು’ ಎಂದು ನೋಟಿಸ್ ಅನ್ನು ಮನೆ ಮುಂದೆ ಅಂಟಿಸಿದ್ದಾರೆ’ ಎಂದು ರತ್ನಮ್ಮ ದೂರಿದರು.</p><p>ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಟರಾಜು ನೊಂದ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.</p><p>ನಂತರ ಅವರು ಮಾತನಾಡಿ, ‘ತಾಲ್ಲೂಕಿನ ಕೊನ್ನಾಪುರ ಹಾಗೂ ಮಲಿಯೂರು ಗ್ರಾಮಗಳಲ್ಲಿ ಖಾಸಗಿ ಫೈನಾನ್ಸ್ ಕಿರುಕುಳದಿಂದ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸಂದರ್ಭದಲ್ಲಿ ಇದೀಗ ಮತ್ತೊಂದು ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಸಾಲ ಪಾವತಿಗೆ ಕಾಲಾವಕಾಶ ಕೊಡಿಸುವುದರೊಂದಿಗೆ ಹೆಚ್ಚುವರಿ ಬಡ್ಡಿಯನ್ನು ಕಡಿತಗೊಳಿಸಿ ಆ ಕುಟುಂಬದ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>