<p><strong>ಮಂಡ್ಯ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನಾ ಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮೊದಲು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್ ಶನಿವಾರ ನೂತನ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ.</p>.<p>ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ತಿದ್ದುಪಡಿ ಅನ್ವಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಮೀಸಲಾತಿ ಅವಧಿಯನ್ನು 5 ವರ್ಷದಿಂದ 30 ತಿಂಗಳ ಅವಧಿಗೆ ಇಳಿಸಿ ಅಧಿಸೂಚನೆ ಹೊರಡಿಸಲಾಗಿದೆ. 30 ತಿಂಗಳ ನಂತರ ಹೊಸ ಮೀಸಲಾತಿ ಪ್ರಕಟಗೊಂಡು, ಚುನಾವಣೆ ನಡೆಯುವವರೆಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಅದರಂತೆ ಸಿ.ಅಶೋಕ್ ಅಧಿಕಾರ ಅಧಿಕಾರ ವಹಿಸಿಕೊಂಡಿದ್ದಾರೆ.</p>.<p><strong>ಸರ್ಕಾರದ ಸ್ಪಷ್ಟನೆ: </strong>ಈ ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದು ಕಾಯ್ದೆಯ ತಿದ್ದುಪಡಿಗೂ ಮೊದಲು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಅವಧಿ 5 ವರ್ಷಗಳವರೆಗೆ ನಿಗದಿ ಪಡಿಸಿರುವ ಕಾರಣ ಮೀಸಲಾತಿಯನ್ನು 30 ತಿಂಗಳಿಗೆ ಹೊಸದಾಗಿ ಬದಲಾಯಿಸುವವರೆಗೂ ಕಾಯ್ದೆ ತಿದ್ದುಪಡಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.</p>.<p><strong>ಎಸ್ಪಿಗೆ ದೂರು:</strong> ಮೀಸಲಾತಿ ಕುರಿತಂತೆ ಸರ್ಕಾರ ಸ್ಪಷ್ಟನೆ ನೀಡಿದ್ದರೂ ಸಿ.ಅಶೋಕ್, ಅಧ್ಯಕ್ಷರ ಕೊಠಡಿಗೆ ಅತಿಕ್ರಮ ಪ್ರವೇಶ ಮಾಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಎಂದು ಆರೋಪಿಸಿ ನಾಗರತ್ನಾ ಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರಿಗೆ ದೂರು ನೀಡಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದು ಮೇ 1ಕ್ಕೆ ಅವಧಿ ಕೊನೆಗೊಳ್ಳಲಿದೆ. ನಾಗರತ್ನಾ ಪತಿ ಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿರುವ ಕಾರಣ ಜೆಡಿಎಸ್ ಮುಖಂಡರು ಕಳೆದ 2 ವರ್ಷಗಳಿಂದಲೂ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಆದರೆ ನಾಗರತ್ನಾರಾಜೀನಾಮೆ ಒತ್ತಡವನ್ನು ತಳ್ಳಿಹಾಕುತ್ತಲೇ ಬಂದಿದ್ದಾರೆ. ಜೆಡಿಎಸ್ನಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ಅವಿಶ್ವಾಸ ಮಂಡನೆಯೂ ಸಾಧ್ಯವಾಗಿಲ್ಲ.</p>.<p>ಕಳೆದ 2 ವರ್ಷಗಳಿಂದ ಕೋರಂ ಕೊರತೆಯ ಕಾರಣಕ್ಕೆ 6 ಸಾಮಾನ್ಯ ಸಭೆಗಳನ್ನು ಮುಂದೂಡಲಾಗಿದೆ. ಇಲ್ಲಿಯವರೆಗೂ 2020–21ನೇ ಸಾಲಿನ ಬಜೆಟ್ ಮಂಡನೆಯಾಗಿಲ್ಲ, ಇದರಿಂದ ಸರ್ಕಾರದ ಅನುದಾನ ವಾಪಸ್ ಹೋಗುವ ಅಪಾಯ ಎದುರಾಗಿದೆ.</p>.<p>ಕಾಯ್ದೆ ತಿದ್ದುಪಡಿ ಅವಕಾಶವನ್ನು ಬಳಸಿಕೊಂಡು ಅಧ್ಯಕ್ಷೆಯನ್ನು ಕಳೆಗಿಳಿಸಲು ಜೆಡಿಎಸ್ ಮುಖಂಡರು ಯತ್ನಿಸಿದ್ದಾರೆ. ಆದರೆ ಸರ್ಕಾರ ನೀಡಿರುವ ಸ್ಪಷ್ಟನೆ ನಾಗರತ್ನಾ ಅವರಿಗೆ ವರವಾಗಿದೆ.</p>.<p>‘ಕಾಯ್ದೆಯ ತಿದ್ದುಪಡಿಯು ಹಿಂದೆ ನಿಗದಿಯಾಗಿರುವ ಮೀಸಲಾತಿಗೆ ಅನ್ವಯವಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಸಿ.ಅಶೋಕ್ ಅಧಿಕಾರ ಸ್ವೀಕಾರ ಮಾಡಿರುವುದು ಅನೂರ್ಜಿತವಾಗಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನಾ ಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮೊದಲು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್ ಶನಿವಾರ ನೂತನ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ.</p>.<p>ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ತಿದ್ದುಪಡಿ ಅನ್ವಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಮೀಸಲಾತಿ ಅವಧಿಯನ್ನು 5 ವರ್ಷದಿಂದ 30 ತಿಂಗಳ ಅವಧಿಗೆ ಇಳಿಸಿ ಅಧಿಸೂಚನೆ ಹೊರಡಿಸಲಾಗಿದೆ. 30 ತಿಂಗಳ ನಂತರ ಹೊಸ ಮೀಸಲಾತಿ ಪ್ರಕಟಗೊಂಡು, ಚುನಾವಣೆ ನಡೆಯುವವರೆಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಅದರಂತೆ ಸಿ.ಅಶೋಕ್ ಅಧಿಕಾರ ಅಧಿಕಾರ ವಹಿಸಿಕೊಂಡಿದ್ದಾರೆ.</p>.<p><strong>ಸರ್ಕಾರದ ಸ್ಪಷ್ಟನೆ: </strong>ಈ ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದು ಕಾಯ್ದೆಯ ತಿದ್ದುಪಡಿಗೂ ಮೊದಲು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಅವಧಿ 5 ವರ್ಷಗಳವರೆಗೆ ನಿಗದಿ ಪಡಿಸಿರುವ ಕಾರಣ ಮೀಸಲಾತಿಯನ್ನು 30 ತಿಂಗಳಿಗೆ ಹೊಸದಾಗಿ ಬದಲಾಯಿಸುವವರೆಗೂ ಕಾಯ್ದೆ ತಿದ್ದುಪಡಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.</p>.<p><strong>ಎಸ್ಪಿಗೆ ದೂರು:</strong> ಮೀಸಲಾತಿ ಕುರಿತಂತೆ ಸರ್ಕಾರ ಸ್ಪಷ್ಟನೆ ನೀಡಿದ್ದರೂ ಸಿ.ಅಶೋಕ್, ಅಧ್ಯಕ್ಷರ ಕೊಠಡಿಗೆ ಅತಿಕ್ರಮ ಪ್ರವೇಶ ಮಾಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಎಂದು ಆರೋಪಿಸಿ ನಾಗರತ್ನಾ ಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರಿಗೆ ದೂರು ನೀಡಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿಯಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದು ಮೇ 1ಕ್ಕೆ ಅವಧಿ ಕೊನೆಗೊಳ್ಳಲಿದೆ. ನಾಗರತ್ನಾ ಪತಿ ಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿರುವ ಕಾರಣ ಜೆಡಿಎಸ್ ಮುಖಂಡರು ಕಳೆದ 2 ವರ್ಷಗಳಿಂದಲೂ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಆದರೆ ನಾಗರತ್ನಾರಾಜೀನಾಮೆ ಒತ್ತಡವನ್ನು ತಳ್ಳಿಹಾಕುತ್ತಲೇ ಬಂದಿದ್ದಾರೆ. ಜೆಡಿಎಸ್ನಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ಅವಿಶ್ವಾಸ ಮಂಡನೆಯೂ ಸಾಧ್ಯವಾಗಿಲ್ಲ.</p>.<p>ಕಳೆದ 2 ವರ್ಷಗಳಿಂದ ಕೋರಂ ಕೊರತೆಯ ಕಾರಣಕ್ಕೆ 6 ಸಾಮಾನ್ಯ ಸಭೆಗಳನ್ನು ಮುಂದೂಡಲಾಗಿದೆ. ಇಲ್ಲಿಯವರೆಗೂ 2020–21ನೇ ಸಾಲಿನ ಬಜೆಟ್ ಮಂಡನೆಯಾಗಿಲ್ಲ, ಇದರಿಂದ ಸರ್ಕಾರದ ಅನುದಾನ ವಾಪಸ್ ಹೋಗುವ ಅಪಾಯ ಎದುರಾಗಿದೆ.</p>.<p>ಕಾಯ್ದೆ ತಿದ್ದುಪಡಿ ಅವಕಾಶವನ್ನು ಬಳಸಿಕೊಂಡು ಅಧ್ಯಕ್ಷೆಯನ್ನು ಕಳೆಗಿಳಿಸಲು ಜೆಡಿಎಸ್ ಮುಖಂಡರು ಯತ್ನಿಸಿದ್ದಾರೆ. ಆದರೆ ಸರ್ಕಾರ ನೀಡಿರುವ ಸ್ಪಷ್ಟನೆ ನಾಗರತ್ನಾ ಅವರಿಗೆ ವರವಾಗಿದೆ.</p>.<p>‘ಕಾಯ್ದೆಯ ತಿದ್ದುಪಡಿಯು ಹಿಂದೆ ನಿಗದಿಯಾಗಿರುವ ಮೀಸಲಾತಿಗೆ ಅನ್ವಯವಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಸಿ.ಅಶೋಕ್ ಅಧಿಕಾರ ಸ್ವೀಕಾರ ಮಾಡಿರುವುದು ಅನೂರ್ಜಿತವಾಗಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>