<p>ನಾಗಮಂಗಲ: ‘ಪರಿಸರ ಸಂರಕ್ಷಣೆ ಎಂಬುದು ಕೇವಲ ಯಾವುದೋ ಒಬ್ಬ ವ್ಯಕ್ತಿ, ಸಂಸ್ಥೆ, ಸರ್ಕಾರದ ಹೊಣೆಯಲ್ಲಿ ಬದಲಿಗೆ ಪ್ರತಿಯೊಬ್ಬರ ಹೊಣೆಯಾಗಿದೆ’ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಿವಾಕರ್ ಹೇಳಿದರು.</p>.<p>ತಾಲ್ಲೂಕಿನ ಅಳೀಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಪರಿಸರವನ್ನು ಬೆಳೆಸಲು ಗಿಡಮರಗಳನ್ನು ನೆಡುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡಲು ಶ್ರಮಿಸಬೇಕು ಎಂದರು.</p>.<p>ನಂತರ ಮುಖ್ಯ ಶಿಕ್ಷಕ ವೈ.ಬಿ.ಸೋಮಶೇಖರ್ ಮಾತನಾಡಿ ನಮ್ಮ ಪರಿಸರ ಸಂರಕ್ಷಣೆಯಿಂದ ನಮ್ಮ ಸುತ್ತಮುತ್ತಲಿನ ಪರಿಸರ ಸಮೃದ್ಧವಾಗುತ್ತದೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದತು.</p>.<p>ಪರಿಸರದ ಕುರಿತು ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು.</p>.<p>ಶಾಲಾ ಶಿಕ್ಷಕರಾದ ರಂಗನಾಥ್, ಲೇಪಾಕ್ಷ, ಮಂಜುನಾಥ್, ವಲಯದ ಮೇಲ್ವಿಚಾರ ಕಾರ್ತಿಕ್, ಕೃಷಿ ಮೇಲ್ವಿಚಾರಕ ರಾಕೇಶ್, ,ಗ್ರಾ.ಪಂ ಸದಸ್ಯೆ ಕೆಂಪಮ್ಮ, ಗ್ರಾಮದ ಮುಖಂಡರಾದ ಅಪ್ಪಾಜಿಗೌಡ, ಮಂಜಣ್ಣ, ಕುಮಾರಣ್ಣ, ಸೇವಾಪ್ರತಿನಿಧಿಗಳಾದ ಜಯಂತಿ, ಪವಿತ್ರ, ಪೂರ್ಣಿಮಾ ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ‘ಪರಿಸರ ಸಂರಕ್ಷಣೆ ಎಂಬುದು ಕೇವಲ ಯಾವುದೋ ಒಬ್ಬ ವ್ಯಕ್ತಿ, ಸಂಸ್ಥೆ, ಸರ್ಕಾರದ ಹೊಣೆಯಲ್ಲಿ ಬದಲಿಗೆ ಪ್ರತಿಯೊಬ್ಬರ ಹೊಣೆಯಾಗಿದೆ’ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಿವಾಕರ್ ಹೇಳಿದರು.</p>.<p>ತಾಲ್ಲೂಕಿನ ಅಳೀಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಪರಿಸರವನ್ನು ಬೆಳೆಸಲು ಗಿಡಮರಗಳನ್ನು ನೆಡುವ ಮೂಲಕ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡಲು ಶ್ರಮಿಸಬೇಕು ಎಂದರು.</p>.<p>ನಂತರ ಮುಖ್ಯ ಶಿಕ್ಷಕ ವೈ.ಬಿ.ಸೋಮಶೇಖರ್ ಮಾತನಾಡಿ ನಮ್ಮ ಪರಿಸರ ಸಂರಕ್ಷಣೆಯಿಂದ ನಮ್ಮ ಸುತ್ತಮುತ್ತಲಿನ ಪರಿಸರ ಸಮೃದ್ಧವಾಗುತ್ತದೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದತು.</p>.<p>ಪರಿಸರದ ಕುರಿತು ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು.</p>.<p>ಶಾಲಾ ಶಿಕ್ಷಕರಾದ ರಂಗನಾಥ್, ಲೇಪಾಕ್ಷ, ಮಂಜುನಾಥ್, ವಲಯದ ಮೇಲ್ವಿಚಾರ ಕಾರ್ತಿಕ್, ಕೃಷಿ ಮೇಲ್ವಿಚಾರಕ ರಾಕೇಶ್, ,ಗ್ರಾ.ಪಂ ಸದಸ್ಯೆ ಕೆಂಪಮ್ಮ, ಗ್ರಾಮದ ಮುಖಂಡರಾದ ಅಪ್ಪಾಜಿಗೌಡ, ಮಂಜಣ್ಣ, ಕುಮಾರಣ್ಣ, ಸೇವಾಪ್ರತಿನಿಧಿಗಳಾದ ಜಯಂತಿ, ಪವಿತ್ರ, ಪೂರ್ಣಿಮಾ ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>