<p>ಭಾರತೀನಗರ: ಸಮೀಪದ ಎಸ್.ಐ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಕರ್ತವ್ಯ ನಿರ್ವಹಿಸಬೇಕಿದ್ದ ಚುನಾವಣಾಧಿಕಾರಿ ತಡವಾಗಿ ಬಂದ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡರು ಮತ್ತು ನಿರ್ದೇಶಕರು ಸಂಘದ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.</p>.<p>ಫೆ.7 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ನಾಮಪತ್ರ ಸಲ್ಲಿಕೆಗೆ ಸಮಯ ನಿಗಧಿಪಡಿಸಲಾಗಿತ್ತು. ಆ ವೇಳೆಗೆ ನಾಮಪತ್ರ ಸಲ್ಲಕೆ ಕಾರ್ಯ ಪೂರ್ಣಗೊಳ್ಳಬೇಕಿತ್ತು. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ವೆಂಕಟೇಶ್ಮೂರ್ತಿ 11.32 ಕ್ಕೆ ಕಚೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಯಿತು.</p>.<p>ಚುನಾವಣಾಧಿಕಾರಿ ವೆಂಕಟೇಶ್ಮೂರ್ತಿ ಅವರ ವಿರುದ್ಧ ಉನ್ನತಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಕರು, ಗ್ರಾಮದ ಮುಖಂಡರು ಆಗ್ರಹಿಸಿ ಸಂಘದ ಕಚೇರಿಗೆ ಬೀಗ ಜಡಿದು ಚುನಾವಣೆ ಮುಂದೂಡುವಂತೆ ಆಗ್ರಹಿಸಿದರು.</p>.<p>ಸಂಘದ ನಿರ್ದೇಶಕರಾದ ಕೆಂಪೇಗೌಡ, ವೆಂಕಟೇಶ್, ತಾಯಮ್ಮ, ಚಿಕ್ಕಸ್ವಾಮಿ, ಕೆಂಪರಾಜು, ಮುಖಂಡರಾದ ಮಾದೇಗೌಡ, ಪುನೀತ್ಕುಮಾರ್, ರಾಜು, ರವಿ, ಶಿವಣ್ಣ, ಅರುಣ, ಪುಟ್ಟಸ್ವಾಮಿ, ದೇವರಾಜು, ರೇವಣ್ಣಸ್ವಾಮಿ, ಅಶೋಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತೀನಗರ: ಸಮೀಪದ ಎಸ್.ಐ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಕರ್ತವ್ಯ ನಿರ್ವಹಿಸಬೇಕಿದ್ದ ಚುನಾವಣಾಧಿಕಾರಿ ತಡವಾಗಿ ಬಂದ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡರು ಮತ್ತು ನಿರ್ದೇಶಕರು ಸಂಘದ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.</p>.<p>ಫೆ.7 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ನಾಮಪತ್ರ ಸಲ್ಲಿಕೆಗೆ ಸಮಯ ನಿಗಧಿಪಡಿಸಲಾಗಿತ್ತು. ಆ ವೇಳೆಗೆ ನಾಮಪತ್ರ ಸಲ್ಲಕೆ ಕಾರ್ಯ ಪೂರ್ಣಗೊಳ್ಳಬೇಕಿತ್ತು. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ವೆಂಕಟೇಶ್ಮೂರ್ತಿ 11.32 ಕ್ಕೆ ಕಚೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಯಿತು.</p>.<p>ಚುನಾವಣಾಧಿಕಾರಿ ವೆಂಕಟೇಶ್ಮೂರ್ತಿ ಅವರ ವಿರುದ್ಧ ಉನ್ನತಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಕರು, ಗ್ರಾಮದ ಮುಖಂಡರು ಆಗ್ರಹಿಸಿ ಸಂಘದ ಕಚೇರಿಗೆ ಬೀಗ ಜಡಿದು ಚುನಾವಣೆ ಮುಂದೂಡುವಂತೆ ಆಗ್ರಹಿಸಿದರು.</p>.<p>ಸಂಘದ ನಿರ್ದೇಶಕರಾದ ಕೆಂಪೇಗೌಡ, ವೆಂಕಟೇಶ್, ತಾಯಮ್ಮ, ಚಿಕ್ಕಸ್ವಾಮಿ, ಕೆಂಪರಾಜು, ಮುಖಂಡರಾದ ಮಾದೇಗೌಡ, ಪುನೀತ್ಕುಮಾರ್, ರಾಜು, ರವಿ, ಶಿವಣ್ಣ, ಅರುಣ, ಪುಟ್ಟಸ್ವಾಮಿ, ದೇವರಾಜು, ರೇವಣ್ಣಸ್ವಾಮಿ, ಅಶೋಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>