<p><strong>ಭಾರತೀನಗರ:</strong> ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕೃಷಿಕೂಲಿಕಾರರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಕೃಷಿಕೂಲಿಕಾರರ ಸಂಘದ ಮೂರು ಘಟಕಗಳನ್ನೊಳಗೊಂಡ ಸಮ್ಮೇಳನದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ನಂತರ ಮಾತನಾಡಿದ ಕೃಷಿಕೂಲಿಕಾರರ ಸಂಘದ ತಾಲ್ಲೂಕು ಕಾರ್ಯದರ್ಶಿ ಟಿ.ಪಿ.ಅರುಣ್ಕುಮಾರ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಕೃಷಿಕೂಲಿಕಾರರು ತತ್ತರಿಸುವಂತಾಗಿದ್ದು, ಬೆಲೆಗಳನ್ನು ಇಳಿಸಬೇಕೆಂದು ಆಗ್ರಹಿಸಿದರು.</p>.<p>‘ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಸರ್ಕಾರ ದಿನನಿತ್ಯ ಬಳಸುವ ಆಹಾರ ಪದಾರ್ಥಗಳೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿದ್ದು, ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕೃಷಿಕೂಲಿಕಾರರ ಸಂಘದ ಹಿರಿಯ ಮುಖಂಡರಾದ ನಿಂಗೇಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಘಟಕದ ಸಮ್ಮೇಳನದಲ್ಲಿ ಕಾಡುಕೊತ್ತನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 3 ಘಟಕಗಳನ್ನು ಸ್ಥಾಪನೆ ಮಾಡಲಾಯಿತು.</p>.<p>ಕೃಷಿಕೂಲಿಕಾರರ ಸಂಘದ ಘಟಕದ ಅಧ್ಯಕ್ಷ ಸುಧಾ, ಉಪಾಧ್ಯಕ್ಷ ಕಪನೀಗೌಡ, ಕಾರ್ಯದರ್ಶಿ ಮಹದೇವಮ್ಮ, ಸದಸ್ಯರಾದ ಪಲ್ಲವಿ, ನಾಗಣ್ಣ, ರೇಣುಕಾ, ಸಂಪತ್, ಶಂಕರ್, ಅಭಿಲಾಷ್, ಪುಟ್ಟಂಕೇಗೌಡ, ಪಲ್ಲವಿ, ನಾಗರಾಜು, ಸುಗುಣ, ಜಯಮ್ಮ, ಇದ್ದರು.</p>.<p> <strong>ನಿತ್ಯ ₹600 ಕೂಲಿ</strong> </p><p>ನೀಡಲು ಆಗ್ರಹ ‘ಕೃಷಿ ಕೂಲಿಕಾರರಿಗೆ ಪ್ರತೀ ದಿನ ನಾಲ್ಕು ಗಂಟೆಗಳ ಕಾಲ ಮಾಡುತ್ತಿದ್ದ ಕೆಲಸದ ಅವಧಿಯನ್ನು 8 ಗಂಟೆಗಳಿಗೆ ಏರಿಕೆಗೊಳಿಸಿರುವುದು ಸರಿಯಾದ ಕ್ರಮವಲ್ಲ. ಉದ್ಯೋಗ ಖಾತರಿ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಹಾಗೇನಾದರೂ ಆದಲ್ಲಿ ಕೂಲಿಕಾರರ ಭವಿಷ್ಯ ಬೀದಿಗೆ ಬೀಳಲಿದೆ. ವರ್ಷಕ್ಕೆ 200 ದಿನ ಕೆಲಸ ನೀಡಿ ನಿತ್ಯ ₹600 ಕೂಲಿ ನೀಡಬೇಕು’ ಎಂದು ಕೃಷಿಕೂಲಿಕಾರರ ಸಂಘದ ತಾಲ್ಲೂಕು ಕಾರ್ಯದರ್ಶಿ ಟಿ.ಪಿ.ಅರುಣ್ಕುಮಾರ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕೃಷಿಕೂಲಿಕಾರರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯ ಕೃಷಿಕೂಲಿಕಾರರ ಸಂಘದ ಮೂರು ಘಟಕಗಳನ್ನೊಳಗೊಂಡ ಸಮ್ಮೇಳನದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ನಂತರ ಮಾತನಾಡಿದ ಕೃಷಿಕೂಲಿಕಾರರ ಸಂಘದ ತಾಲ್ಲೂಕು ಕಾರ್ಯದರ್ಶಿ ಟಿ.ಪಿ.ಅರುಣ್ಕುಮಾರ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಕೃಷಿಕೂಲಿಕಾರರು ತತ್ತರಿಸುವಂತಾಗಿದ್ದು, ಬೆಲೆಗಳನ್ನು ಇಳಿಸಬೇಕೆಂದು ಆಗ್ರಹಿಸಿದರು.</p>.<p>‘ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಸರ್ಕಾರ ದಿನನಿತ್ಯ ಬಳಸುವ ಆಹಾರ ಪದಾರ್ಥಗಳೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿದ್ದು, ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕೃಷಿಕೂಲಿಕಾರರ ಸಂಘದ ಹಿರಿಯ ಮುಖಂಡರಾದ ನಿಂಗೇಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಘಟಕದ ಸಮ್ಮೇಳನದಲ್ಲಿ ಕಾಡುಕೊತ್ತನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 3 ಘಟಕಗಳನ್ನು ಸ್ಥಾಪನೆ ಮಾಡಲಾಯಿತು.</p>.<p>ಕೃಷಿಕೂಲಿಕಾರರ ಸಂಘದ ಘಟಕದ ಅಧ್ಯಕ್ಷ ಸುಧಾ, ಉಪಾಧ್ಯಕ್ಷ ಕಪನೀಗೌಡ, ಕಾರ್ಯದರ್ಶಿ ಮಹದೇವಮ್ಮ, ಸದಸ್ಯರಾದ ಪಲ್ಲವಿ, ನಾಗಣ್ಣ, ರೇಣುಕಾ, ಸಂಪತ್, ಶಂಕರ್, ಅಭಿಲಾಷ್, ಪುಟ್ಟಂಕೇಗೌಡ, ಪಲ್ಲವಿ, ನಾಗರಾಜು, ಸುಗುಣ, ಜಯಮ್ಮ, ಇದ್ದರು.</p>.<p> <strong>ನಿತ್ಯ ₹600 ಕೂಲಿ</strong> </p><p>ನೀಡಲು ಆಗ್ರಹ ‘ಕೃಷಿ ಕೂಲಿಕಾರರಿಗೆ ಪ್ರತೀ ದಿನ ನಾಲ್ಕು ಗಂಟೆಗಳ ಕಾಲ ಮಾಡುತ್ತಿದ್ದ ಕೆಲಸದ ಅವಧಿಯನ್ನು 8 ಗಂಟೆಗಳಿಗೆ ಏರಿಕೆಗೊಳಿಸಿರುವುದು ಸರಿಯಾದ ಕ್ರಮವಲ್ಲ. ಉದ್ಯೋಗ ಖಾತರಿ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಹಾಗೇನಾದರೂ ಆದಲ್ಲಿ ಕೂಲಿಕಾರರ ಭವಿಷ್ಯ ಬೀದಿಗೆ ಬೀಳಲಿದೆ. ವರ್ಷಕ್ಕೆ 200 ದಿನ ಕೆಲಸ ನೀಡಿ ನಿತ್ಯ ₹600 ಕೂಲಿ ನೀಡಬೇಕು’ ಎಂದು ಕೃಷಿಕೂಲಿಕಾರರ ಸಂಘದ ತಾಲ್ಲೂಕು ಕಾರ್ಯದರ್ಶಿ ಟಿ.ಪಿ.ಅರುಣ್ಕುಮಾರ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>